AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮನೆಗೆ ಯಶ್​-ರಾಧಿಕಾ ಪಂಡಿತ್​ ದಂಪತಿ ಗೃಹ ಪ್ರವೇಶ ; ಹೇಗಿದೆ ನೋಡಿ ಅವರ ನಿವಾಸ

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಅಪಾರ್ಟ್​ಮೆಂಟ್​ ಖರೀದಿ ಮಾಡಿದ್ದರು. ಇಷ್ಟು ದಿನ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಈಗ ಅವೆಲ್ಲವೂ ಪೂರ್ಣಗೊಂಡಿದ್ದು, ಇಂದು ಗೃಹ ಪ್ರವೇಶದ ಕಾರ್ಯಗಳು ನಡೆದಿವೆ.

ಹೊಸ ಮನೆಗೆ ಯಶ್​-ರಾಧಿಕಾ ಪಂಡಿತ್​ ದಂಪತಿ ಗೃಹ ಪ್ರವೇಶ ; ಹೇಗಿದೆ ನೋಡಿ ಅವರ ನಿವಾಸ
ಯಶ್​-ರಾಧಿಕಾ
TV9 Web
| Edited By: |

Updated on:Jul 01, 2021 | 8:17 PM

Share

ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ಅವರ ಕನಸಿನ ಮನೆಯ ಗೃಹ ಪ್ರವೇಶ ಇಂದು (ಜುಲೈ 1) ನೆರವೇರಿದೆ. ಕೊವಿಡ್ ಇರುವ ಕಾರಣ ಕೇವಲ ಆಪ್ತರ ಸಮ್ಮುಖದಲ್ಲಿ​ ಗೃಹ ಪ್ರವೇಶದ ಕಾರ್ಯಗಳನ್ನು ಯಶ್-ರಾಧಿಕಾ ದಂಪತಿ ಪೂರ್ಣಗೊಳಿಸಿದ್ದಾರೆ. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಮನೆ​ ಖರೀದಿ ಮಾಡಿದ್ದರು. ಇಷ್ಟು ದಿನ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಈಗ ಅವೆಲ್ಲವೂ ಪೂರ್ಣಗೊಂಡಿದ್ದು, ಇಂದು ಗೃಹ ಪ್ರವೇಶದ ಕಾರ್ಯಗಳು ನಡೆದಿವೆ. ಸಿಂಪಲ್​ ಆಗಿ ಮನೆಯ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ ಅನ್ನೋದು ವಿಶೇಷ. ಯಶ್​ ಮನೆಯ ಫೋಟೋಗಳು, ಗೃಹ ಪ್ರವೇಶ ಕಾರ್ಯಕ್ರಮದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ರಾಧಿಕಾ ಕೇಸರಿ ಬಣ್ಣದ ಸೀರೆ ಉಟ್ಟರೆ, ಯಶ್​ ಪಂಚೆ ಹಾಗೂ ಶರ್ಟ್​ ತೊಟ್ಟಿದ್ದಾರೆ. ಯಶ್​ ಗಡ್ಡ ಹಾಗೂ ಕೂದಲಿಗೆ ಇನ್ನೂ ಕತ್ತರಿ ಹಾಕಿಲ್ಲ. ಹೀಗಾಗಿ, ಅವರ ಲುಕ್​ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗುತ್ತಿದೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಯಶ್​ ‘ಕೆಜಿಎಫ್​ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಿನಿಮಾ ಜುಲೈನಲ್ಲಿ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಸೆಪ್ಟೆಂಬರ್ 9ಕ್ಕೆ ಚಿತ್ರ ರಿಲೀಸ್​ ಆಗಲಿದೆ ಎನ್ನುವ ಮಾಹಿತಿ ಇದೆಯಾದರೂ ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಇನ್ನು, ರಾಧಿಕಾ ಪಂಡಿತ್​ ಮಕ್ಕಳ ಲಾಲನೆ ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:  Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​

ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಪುಷ್ಪ, ಕೆಜಿಎಫ್​ 2; ಯಶ್​-ಅಲ್ಲು ಅರ್ಜುನ್​ ನಡುವೆ​ ಭಾರಿ ಪೈಪೋಟಿ

Published On - 8:11 pm, Thu, 1 July 21

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!