ಹೊಸ ಮನೆಗೆ ಯಶ್​-ರಾಧಿಕಾ ಪಂಡಿತ್​ ದಂಪತಿ ಗೃಹ ಪ್ರವೇಶ ; ಹೇಗಿದೆ ನೋಡಿ ಅವರ ನಿವಾಸ

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಅಪಾರ್ಟ್​ಮೆಂಟ್​ ಖರೀದಿ ಮಾಡಿದ್ದರು. ಇಷ್ಟು ದಿನ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಈಗ ಅವೆಲ್ಲವೂ ಪೂರ್ಣಗೊಂಡಿದ್ದು, ಇಂದು ಗೃಹ ಪ್ರವೇಶದ ಕಾರ್ಯಗಳು ನಡೆದಿವೆ.

ಹೊಸ ಮನೆಗೆ ಯಶ್​-ರಾಧಿಕಾ ಪಂಡಿತ್​ ದಂಪತಿ ಗೃಹ ಪ್ರವೇಶ ; ಹೇಗಿದೆ ನೋಡಿ ಅವರ ನಿವಾಸ
ಯಶ್​-ರಾಧಿಕಾ
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 01, 2021 | 8:17 PM

ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ಅವರ ಕನಸಿನ ಮನೆಯ ಗೃಹ ಪ್ರವೇಶ ಇಂದು (ಜುಲೈ 1) ನೆರವೇರಿದೆ. ಕೊವಿಡ್ ಇರುವ ಕಾರಣ ಕೇವಲ ಆಪ್ತರ ಸಮ್ಮುಖದಲ್ಲಿ​ ಗೃಹ ಪ್ರವೇಶದ ಕಾರ್ಯಗಳನ್ನು ಯಶ್-ರಾಧಿಕಾ ದಂಪತಿ ಪೂರ್ಣಗೊಳಿಸಿದ್ದಾರೆ. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಮನೆ​ ಖರೀದಿ ಮಾಡಿದ್ದರು. ಇಷ್ಟು ದಿನ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಈಗ ಅವೆಲ್ಲವೂ ಪೂರ್ಣಗೊಂಡಿದ್ದು, ಇಂದು ಗೃಹ ಪ್ರವೇಶದ ಕಾರ್ಯಗಳು ನಡೆದಿವೆ. ಸಿಂಪಲ್​ ಆಗಿ ಮನೆಯ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ ಅನ್ನೋದು ವಿಶೇಷ. ಯಶ್​ ಮನೆಯ ಫೋಟೋಗಳು, ಗೃಹ ಪ್ರವೇಶ ಕಾರ್ಯಕ್ರಮದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ರಾಧಿಕಾ ಕೇಸರಿ ಬಣ್ಣದ ಸೀರೆ ಉಟ್ಟರೆ, ಯಶ್​ ಪಂಚೆ ಹಾಗೂ ಶರ್ಟ್​ ತೊಟ್ಟಿದ್ದಾರೆ. ಯಶ್​ ಗಡ್ಡ ಹಾಗೂ ಕೂದಲಿಗೆ ಇನ್ನೂ ಕತ್ತರಿ ಹಾಕಿಲ್ಲ. ಹೀಗಾಗಿ, ಅವರ ಲುಕ್​ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗುತ್ತಿದೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಯಶ್​ ‘ಕೆಜಿಎಫ್​ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಿನಿಮಾ ಜುಲೈನಲ್ಲಿ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಸೆಪ್ಟೆಂಬರ್ 9ಕ್ಕೆ ಚಿತ್ರ ರಿಲೀಸ್​ ಆಗಲಿದೆ ಎನ್ನುವ ಮಾಹಿತಿ ಇದೆಯಾದರೂ ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಇನ್ನು, ರಾಧಿಕಾ ಪಂಡಿತ್​ ಮಕ್ಕಳ ಲಾಲನೆ ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:  Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​

ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಪುಷ್ಪ, ಕೆಜಿಎಫ್​ 2; ಯಶ್​-ಅಲ್ಲು ಅರ್ಜುನ್​ ನಡುವೆ​ ಭಾರಿ ಪೈಪೋಟಿ

Published On - 8:11 pm, Thu, 1 July 21

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​