AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೀವನವನ್ನು ವಿಶೇಷವಾಗಿಸಿದ್ದೀಯಾ, ನಮ್ಮ ನಗುವಿಗೆ ನೀನೇ ಕಾರಣ’; ಮಗಳು ಆಯ್ರಾ ಬಗ್ಗೆ ರಾಧಿಕಾ-ಯಶ್ ವಿಶೇಷ ಮಾತು

Radhika Pandit: ಆಯ್ರಾ ಸೆಲೆಬ್ರಿಟಿ ಕಿಡ್​. ಈ ಕಾರಣಕ್ಕೆ ಅವಳ ಫೋಟೋಗಳನ್ನು ನೋಡೋಕೆ ಅಭಿಮಾನಿಗಳು ಕಾಯುತ್ತಾ ಇರುತ್ತಾರೆ. ಯಶ್​ ಪತ್ನಿ ರಾಧಿಕಾ ಪಂಡಿತ್​ ಆಯ್ರಾ ಹಾಗೂ ಯಥರ್ವ್​ ಫೋಟೋ ಹಾಗೂ ವಿಡಿಯೋಗಳನ್ನು ಆಗಾಗ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

‘ಜೀವನವನ್ನು ವಿಶೇಷವಾಗಿಸಿದ್ದೀಯಾ, ನಮ್ಮ ನಗುವಿಗೆ ನೀನೇ ಕಾರಣ’; ಮಗಳು ಆಯ್ರಾ ಬಗ್ಗೆ ರಾಧಿಕಾ-ಯಶ್ ವಿಶೇಷ ಮಾತು
TV9 Web
| Edited By: |

Updated on:Sep 26, 2021 | 8:21 PM

Share

ಇಂದು ಮಗಳ ದಿನಾಚರಣೆ. ಈ ವಿಶೇಷ ದಿನದಂದು ಎಲ್ಲ ತಂದೆ-ತಾಯಂದಿರು ತಮ್ಮ ತಮ್ಮ ಮಗಳಿಗೆ ವಿಶೇವಾಗಿ ಶುಭಾಶಯ ಕೋರುತ್ತಿದ್ದಾರೆ. ಅನೇಕ ಸ್ಟಾರ್​ ನಟರು ತಮ್ಮ ಮಗಳ ಫೋಟೋ ಪೋಸ್ಟ್​ ಮಾಡಿ ಶುಭಾಶಯ ಕೋರುತ್ತಿದ್ದಾರೆ. ನಟ ಯಶ್ ಹಾಗೂ ರಾಧಿಕಾ ಪಂಡಿತ್​​ ಕೂಡ ಹೊರತಾಗಿಲ್ಲ. ಇಬ್ಬರೂ ಮಗಳು ಆಯ್ರಾಗೆ ವಿಶೇಷವಾಗಿ ವಿಶ್​ ಮಾಡಿದ್ದಾರೆ. ಅಲ್ಲದೆ, ನಿನ್ನಿಂದ ಜೀವನ ವಿಶೇಷವಾಗಿದೆ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ನೋಡಿದ ಅನೇಕರು ಖುಷಿಯಾಗಿದ್ದಾರೆ. ಅಲ್ಲದೆ, ಯಶ್​ ಹಾಗೂ ಆಯ್ರಾ ಫೋಟೋ ನೋಡಿ ಬಾಯ್ತುಂಬ ಹೊಗಳಿದ್ದಾರೆ.

ಆಯ್ರಾ ಸೆಲೆಬ್ರಿಟಿ ಕಿಡ್​. ಈ ಕಾರಣಕ್ಕೆ ಅವಳ ಫೋಟೋಗಳನ್ನು ನೋಡೋಕೆ ಅಭಿಮಾನಿಗಳು ಕಾಯುತ್ತಾ ಇರುತ್ತಾರೆ. ಯಶ್​ ಪತ್ನಿ ರಾಧಿಕಾ ಪಂಡಿತ್​ ಆಯ್ರಾ ಹಾಗೂ ಯಥರ್ವ್​ ಫೋಟೋ ಹಾಗೂ ವಿಡಿಯೋಗಳನ್ನು ಆಗಾಗ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಯಶ್​ ಕುಟುಂಬದ ಜತೆ ಹೆಚ್ಚು ಸಮಯ ಕಳೆಯುತ್ತಾರೆ. ಆದರೆ, ಅವರು ಮಕ್ಕಳ ಫೋಟೋ ಪೋಸ್ಟ್​ ಮಾಡುವುದು ಅಪರೂಪ.

ಈಗ ಯಶ್​ ಅವರು ತಮ್ಮ ಮಗಳ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಈ ಮೂಲಕ ಮಗಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದ್ದಾರೆ. ಮಗಳ ಜತೆ ಕುಳಿತಿರುವ ಫೋಟೋವನ್ನು ಯಶ್​ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಯಶ್​ ಅವರನ್ನು ಆಯ್ರಾ ಮುದ್ದಾಗಿ ನೋಡುತ್ತಿದ್ದಾಳೆ. ಈ ಫೋಟೋ ಅನೇಕರಿಗೆ ಇಷ್ಟವಾಗಿದೆ.

‘ನಾನು ನಿನ್ನ ಮಾತನ್ನು ಯಾವಾಗಲೂ ಕೇಳುತ್ತಾ ಇರಬಹುದು. ನೀನು ನಮಗೆ ಸಿಕ್ಕಿದ್ದು ಅದೃಷ್ಟ. ಮಗಳ ದಿನಾಚರಣೆಯ ಶುಭಾಶಯ. ನೀನು ಜೀವನವನ್ನು ವಿಶೇಷವಾಗಿಸಿದ್ದೀಯಾ’ ಎಂದು ಯಶ್​ ಕ್ಯಾಪ್ಶನ್​ ಕೊಟ್ಟಿದ್ದಾರೆ.

View this post on Instagram

A post shared by Yash (@thenameisyash)

ರಾಧಿಕಾ ಪಂಡಿತ್​ ಕೂಡ ಮಗಳ ಜತೆಗಿನ ಫೋಟೋ ಹಾಕಿ, ‘ನಾವೆಲ್ಲರೂ ನಗುತ್ತಿರುವುದಕ್ಕೆ ನೀನು ಕಾರಣ. ಲವ್​ ಯು ಬೆಸ್ಟ್​ ಫ್ರೆಂಡ್​’ ಎಂದು ಬರೆದುಕೊಂಡಿದ್ದಾರೆ.

ಯಶ್​ ‘ಕೆಜಿಎಫ್ ಚಾಪ್ಟರ್​ 2’ ಶೂಟಿಂಗ್​ ಪೂರ್ಣಗೊಳಿಸಿದ್ದಾರೆ. ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಈ ಸಿನಿಮಾಗಾಗಿ ಇನ್ನೂ ಹಲವು ತಿಂಗಳು ಕಾಯಬೇಕಿದೆ. ಸ್ಟಾರ್​ ತಾರಾ ವರ್ಗ ಇರುವುದರಿಂದ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಪ್ರಶಾಂತ್​ ನೀಲ್​ ತಮ್ಮ ನಿರ್ದೇಶನದ ಮೂಲಕ ಈಗಾಗಲೇ ಮನೆ ಮಾತಾಗಿದ್ದಾರೆ. ಈಗ ಅವರು ‘ಕೆಜಿಎಫ್​ ಚಾಪ್ಟರ್​ 2’ ಹೇಗೆ ಕಟ್ಟಿಕೊಡಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ:  ‘ಅವರ ವಯಸ್ಸಿನಲ್ಲಿ ನಾನು ಹೀಗೆ ಇರಲು ಸಾಧ್ಯವೇ?’ ರಾಧಿಕಾ ಪಂಡಿತ್​ಗೆ ಹೀಗೊಂದು ಅನುಮಾನ

ಯಶ್​ಗೆ ಭೀಮನ ಪಾತ್ರ, ಪ್ರಶಾಂತ್​ ನೀಲ್​ ನಿರ್ದೇಶನ; ಹೀಗೊಂದು ನಕಲಿ ಸಿನಿಮಾದ ಟ್ರೇಲರ್​ಗೆ ಲಕ್ಷಾಂತರ ವೀವ್ಸ್​

Published On - 7:46 pm, Sun, 26 September 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು