Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನೆಗೆ ಕಂಬ್ಯಾಕ್ ಯಾವಾಗ? ಕೊನೆಗೂ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ರಾಧಿಕಾ ಪಂಡಿತ್  

Radhika Pandit: ರಾಧಿಕಾ ಪಂಡಿತ್ ಇತ್ತೀಚೆಗೆ ‘ಆಸ್ಕ್ ಮಿ ಎನಿಥಿಂಗ್’ ಸೆಷನ್ ನಡೆಸೋದಾಗಿ ಹೇಳಿದ್ದರು. ಅದೇ ರೀತಿ, ಅವರು ಅಭಿಮಾನಿಗಳಿಗೆ ಪ್ರಶ್ನೆ ಕೇಳೋಕೆ ಅವಕಾಶ ನೀಡಿದ್ದರು. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳು ರಾಧಿಕಾಗೆ ಬಂದಿವೆ. ನಟನೆಗೆ ಯಾವಾಗ ಮರಳುತ್ತೀರಾ ಎನ್ನುವ ಪ್ರಶ್ನೆಯನ್ನು ಕೇಳಲಾಗಿದೆ.

ನಟನೆಗೆ ಕಂಬ್ಯಾಕ್ ಯಾವಾಗ? ಕೊನೆಗೂ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ರಾಧಿಕಾ ಪಂಡಿತ್  
ರಾಧಿಕಾ
Follow us
ರಾಜೇಶ್ ದುಗ್ಗುಮನೆ
|

Updated on:May 29, 2024 | 7:21 AM

ನಟಿ ರಾಧಿಕಾ ಪಂಡಿತ್ (Radhika Pandit) ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಮಗಳು ಆಯ್ರಾ ಹಾಗೂ ಮಗ ಯಥರ್ವ್ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಯಶ್ ವೃತ್ತಿ ಬದುಕಿಗೆ ಅವರು ಬೆಂಬಲವಾಗಿದ್ದಾರೆ. ರಾಧಿಕಾ ಚಿತ್ರರಂಗದ ಜೊತೆಗಿನ ನಂಟನ್ನು ಹಾಗೆಯೇ ಇಟ್ಟುಕೊಂಡಿದ್ದಾರೆ. ಆದಾಗ್ಯೂ ನಟನೆಯಿಂದ ದೂರವೇ ಇದ್ದಾರೆ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ಬೇಸರ ಇದೆ. ಅವರು ಯಾವಾಗ ನಟನೆಗೆ ಮರಳುತ್ತಾರೆ ಎನ್ನುವ ಪ್ರಶ್ನೆಯನ್ನು ಆಗಾಗ ಕೇಳಲಾಗುತ್ತದೆ. ಇದಕ್ಕೆ ರಾಧಿಕಾ ಕೊನೆಗೂ ಉತ್ತರ ನೀಡಿದ್ದಾರೆ. ಈ ಉತ್ತರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಇದೆ.

ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾರೆ. ರಾಧಿಕಾ ಪಂಡಿತ್ ಇತ್ತೀಚೆಗೆ ‘ಆಸ್ಕ್ ಮಿ ಎನಿಥಿಂಗ್’ ಸೆಷನ್ ನಡೆಸೋದಾಗಿ ಹೇಳಿದ್ದರು. ಅದೇ ರೀತಿ, ಅವರು ಅಭಿಮಾನಿಗಳಿಗೆ ಪ್ರಶ್ನೆ ಕೇಳೋಕೆ ಅವಕಾಶ ನೀಡಿದ್ದರು. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳು ರಾಧಿಕಾಗೆ ಬಂದಿವೆ.

‘ನಟನೆಗೆ ಕಂಬ್ಯಾಕ್ ಯಾವಾಗ’ ಎಂದು ಕೆಲವರು ಕೇಳಿದ್ದಾರೆ. ಇದಕ್ಕೆ ಅವರು ‘ಸರಿಯಾದ ಸಮಯ ಬಂದಾಗ’ ಎಂದು ಉತ್ತರಿಸಿದ್ದಾರೆ. ಅವರ ಉತ್ತರ ಕೇಳಿ ಅನೇಕರಿಗೆ ಬೇಸರ ಆಗಿದೆ. ಅವರ ಉತ್ತರದಲ್ಲಿ ಸ್ಪಷ್ಟತೆ ಇಲ್ಲ ಎಂದು ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. ರಾಧಿಕಾ ಪಂಡಿತ್ ಅವರ ಅಭಿಮಾನಿ ಬಳಗ ದೊಡ್ಡದಿದೆ. ಅವರು ನಟನೆಗೆ ಕಂಬ್ಯಾಕ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್

‘ಮೊಗ್ಗಿನ ಮನಸು’ ಸಿನಿಮಾ ಮೂಲಕ ರಾಧಿಕಾ ಪಂಡಿತ್ ಕನ್ನಡ ಚಿತ್ರರಂಗದಲ್ಲಿ ಮಿಂಚಿದರು. ಆ ಬಳಿಕ ಹಲವು ಸೂಪರ್​ಸ್ಟಾರ್​ಗಳ ಜೊತೆ ನಟಿಸಿ, ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಯಶ್ ಹಾಗು ರಾಧಿಕಾ ಕೆಮಿಸ್ಟ್ರಿ ತೆರೆಮೇಲೆ ಪ್ರೇಕ್ಷಕರಿಗೆ ಇಷ್ಟ ಆಗಿದೆ. 2019ರಲ್ಲಿ ರಿಲೀಸ್ ಆದ ‘ಆದಿಲಕ್ಷ್ಮಿ’ ಪುರಾಣ ಚಿತ್ರವೇ ಕೊನೆ, ಇದಾದ ಬಳಿಕ ಅವರು ಸಿನಿಮಾ ಘೋಷಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:57 am, Wed, 29 May 24

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ