AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನೆಗೆ ಕಂಬ್ಯಾಕ್ ಯಾವಾಗ? ಕೊನೆಗೂ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ರಾಧಿಕಾ ಪಂಡಿತ್  

Radhika Pandit: ರಾಧಿಕಾ ಪಂಡಿತ್ ಇತ್ತೀಚೆಗೆ ‘ಆಸ್ಕ್ ಮಿ ಎನಿಥಿಂಗ್’ ಸೆಷನ್ ನಡೆಸೋದಾಗಿ ಹೇಳಿದ್ದರು. ಅದೇ ರೀತಿ, ಅವರು ಅಭಿಮಾನಿಗಳಿಗೆ ಪ್ರಶ್ನೆ ಕೇಳೋಕೆ ಅವಕಾಶ ನೀಡಿದ್ದರು. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳು ರಾಧಿಕಾಗೆ ಬಂದಿವೆ. ನಟನೆಗೆ ಯಾವಾಗ ಮರಳುತ್ತೀರಾ ಎನ್ನುವ ಪ್ರಶ್ನೆಯನ್ನು ಕೇಳಲಾಗಿದೆ.

ನಟನೆಗೆ ಕಂಬ್ಯಾಕ್ ಯಾವಾಗ? ಕೊನೆಗೂ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ರಾಧಿಕಾ ಪಂಡಿತ್  
ರಾಧಿಕಾ
ರಾಜೇಶ್ ದುಗ್ಗುಮನೆ
|

Updated on:May 29, 2024 | 7:21 AM

Share

ನಟಿ ರಾಧಿಕಾ ಪಂಡಿತ್ (Radhika Pandit) ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಮಗಳು ಆಯ್ರಾ ಹಾಗೂ ಮಗ ಯಥರ್ವ್ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಯಶ್ ವೃತ್ತಿ ಬದುಕಿಗೆ ಅವರು ಬೆಂಬಲವಾಗಿದ್ದಾರೆ. ರಾಧಿಕಾ ಚಿತ್ರರಂಗದ ಜೊತೆಗಿನ ನಂಟನ್ನು ಹಾಗೆಯೇ ಇಟ್ಟುಕೊಂಡಿದ್ದಾರೆ. ಆದಾಗ್ಯೂ ನಟನೆಯಿಂದ ದೂರವೇ ಇದ್ದಾರೆ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ಬೇಸರ ಇದೆ. ಅವರು ಯಾವಾಗ ನಟನೆಗೆ ಮರಳುತ್ತಾರೆ ಎನ್ನುವ ಪ್ರಶ್ನೆಯನ್ನು ಆಗಾಗ ಕೇಳಲಾಗುತ್ತದೆ. ಇದಕ್ಕೆ ರಾಧಿಕಾ ಕೊನೆಗೂ ಉತ್ತರ ನೀಡಿದ್ದಾರೆ. ಈ ಉತ್ತರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಇದೆ.

ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾರೆ. ರಾಧಿಕಾ ಪಂಡಿತ್ ಇತ್ತೀಚೆಗೆ ‘ಆಸ್ಕ್ ಮಿ ಎನಿಥಿಂಗ್’ ಸೆಷನ್ ನಡೆಸೋದಾಗಿ ಹೇಳಿದ್ದರು. ಅದೇ ರೀತಿ, ಅವರು ಅಭಿಮಾನಿಗಳಿಗೆ ಪ್ರಶ್ನೆ ಕೇಳೋಕೆ ಅವಕಾಶ ನೀಡಿದ್ದರು. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳು ರಾಧಿಕಾಗೆ ಬಂದಿವೆ.

‘ನಟನೆಗೆ ಕಂಬ್ಯಾಕ್ ಯಾವಾಗ’ ಎಂದು ಕೆಲವರು ಕೇಳಿದ್ದಾರೆ. ಇದಕ್ಕೆ ಅವರು ‘ಸರಿಯಾದ ಸಮಯ ಬಂದಾಗ’ ಎಂದು ಉತ್ತರಿಸಿದ್ದಾರೆ. ಅವರ ಉತ್ತರ ಕೇಳಿ ಅನೇಕರಿಗೆ ಬೇಸರ ಆಗಿದೆ. ಅವರ ಉತ್ತರದಲ್ಲಿ ಸ್ಪಷ್ಟತೆ ಇಲ್ಲ ಎಂದು ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. ರಾಧಿಕಾ ಪಂಡಿತ್ ಅವರ ಅಭಿಮಾನಿ ಬಳಗ ದೊಡ್ಡದಿದೆ. ಅವರು ನಟನೆಗೆ ಕಂಬ್ಯಾಕ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್

‘ಮೊಗ್ಗಿನ ಮನಸು’ ಸಿನಿಮಾ ಮೂಲಕ ರಾಧಿಕಾ ಪಂಡಿತ್ ಕನ್ನಡ ಚಿತ್ರರಂಗದಲ್ಲಿ ಮಿಂಚಿದರು. ಆ ಬಳಿಕ ಹಲವು ಸೂಪರ್​ಸ್ಟಾರ್​ಗಳ ಜೊತೆ ನಟಿಸಿ, ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಯಶ್ ಹಾಗು ರಾಧಿಕಾ ಕೆಮಿಸ್ಟ್ರಿ ತೆರೆಮೇಲೆ ಪ್ರೇಕ್ಷಕರಿಗೆ ಇಷ್ಟ ಆಗಿದೆ. 2019ರಲ್ಲಿ ರಿಲೀಸ್ ಆದ ‘ಆದಿಲಕ್ಷ್ಮಿ’ ಪುರಾಣ ಚಿತ್ರವೇ ಕೊನೆ, ಇದಾದ ಬಳಿಕ ಅವರು ಸಿನಿಮಾ ಘೋಷಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:57 am, Wed, 29 May 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್