AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನೆಗೆ ಕಂಬ್ಯಾಕ್ ಯಾವಾಗ? ಕೊನೆಗೂ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ರಾಧಿಕಾ ಪಂಡಿತ್  

Radhika Pandit: ರಾಧಿಕಾ ಪಂಡಿತ್ ಇತ್ತೀಚೆಗೆ ‘ಆಸ್ಕ್ ಮಿ ಎನಿಥಿಂಗ್’ ಸೆಷನ್ ನಡೆಸೋದಾಗಿ ಹೇಳಿದ್ದರು. ಅದೇ ರೀತಿ, ಅವರು ಅಭಿಮಾನಿಗಳಿಗೆ ಪ್ರಶ್ನೆ ಕೇಳೋಕೆ ಅವಕಾಶ ನೀಡಿದ್ದರು. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳು ರಾಧಿಕಾಗೆ ಬಂದಿವೆ. ನಟನೆಗೆ ಯಾವಾಗ ಮರಳುತ್ತೀರಾ ಎನ್ನುವ ಪ್ರಶ್ನೆಯನ್ನು ಕೇಳಲಾಗಿದೆ.

ನಟನೆಗೆ ಕಂಬ್ಯಾಕ್ ಯಾವಾಗ? ಕೊನೆಗೂ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ರಾಧಿಕಾ ಪಂಡಿತ್  
ರಾಧಿಕಾ
ರಾಜೇಶ್ ದುಗ್ಗುಮನೆ
|

Updated on:May 29, 2024 | 7:21 AM

Share

ನಟಿ ರಾಧಿಕಾ ಪಂಡಿತ್ (Radhika Pandit) ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಮಗಳು ಆಯ್ರಾ ಹಾಗೂ ಮಗ ಯಥರ್ವ್ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಯಶ್ ವೃತ್ತಿ ಬದುಕಿಗೆ ಅವರು ಬೆಂಬಲವಾಗಿದ್ದಾರೆ. ರಾಧಿಕಾ ಚಿತ್ರರಂಗದ ಜೊತೆಗಿನ ನಂಟನ್ನು ಹಾಗೆಯೇ ಇಟ್ಟುಕೊಂಡಿದ್ದಾರೆ. ಆದಾಗ್ಯೂ ನಟನೆಯಿಂದ ದೂರವೇ ಇದ್ದಾರೆ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ಬೇಸರ ಇದೆ. ಅವರು ಯಾವಾಗ ನಟನೆಗೆ ಮರಳುತ್ತಾರೆ ಎನ್ನುವ ಪ್ರಶ್ನೆಯನ್ನು ಆಗಾಗ ಕೇಳಲಾಗುತ್ತದೆ. ಇದಕ್ಕೆ ರಾಧಿಕಾ ಕೊನೆಗೂ ಉತ್ತರ ನೀಡಿದ್ದಾರೆ. ಈ ಉತ್ತರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಇದೆ.

ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾರೆ. ರಾಧಿಕಾ ಪಂಡಿತ್ ಇತ್ತೀಚೆಗೆ ‘ಆಸ್ಕ್ ಮಿ ಎನಿಥಿಂಗ್’ ಸೆಷನ್ ನಡೆಸೋದಾಗಿ ಹೇಳಿದ್ದರು. ಅದೇ ರೀತಿ, ಅವರು ಅಭಿಮಾನಿಗಳಿಗೆ ಪ್ರಶ್ನೆ ಕೇಳೋಕೆ ಅವಕಾಶ ನೀಡಿದ್ದರು. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳು ರಾಧಿಕಾಗೆ ಬಂದಿವೆ.

‘ನಟನೆಗೆ ಕಂಬ್ಯಾಕ್ ಯಾವಾಗ’ ಎಂದು ಕೆಲವರು ಕೇಳಿದ್ದಾರೆ. ಇದಕ್ಕೆ ಅವರು ‘ಸರಿಯಾದ ಸಮಯ ಬಂದಾಗ’ ಎಂದು ಉತ್ತರಿಸಿದ್ದಾರೆ. ಅವರ ಉತ್ತರ ಕೇಳಿ ಅನೇಕರಿಗೆ ಬೇಸರ ಆಗಿದೆ. ಅವರ ಉತ್ತರದಲ್ಲಿ ಸ್ಪಷ್ಟತೆ ಇಲ್ಲ ಎಂದು ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. ರಾಧಿಕಾ ಪಂಡಿತ್ ಅವರ ಅಭಿಮಾನಿ ಬಳಗ ದೊಡ್ಡದಿದೆ. ಅವರು ನಟನೆಗೆ ಕಂಬ್ಯಾಕ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್

‘ಮೊಗ್ಗಿನ ಮನಸು’ ಸಿನಿಮಾ ಮೂಲಕ ರಾಧಿಕಾ ಪಂಡಿತ್ ಕನ್ನಡ ಚಿತ್ರರಂಗದಲ್ಲಿ ಮಿಂಚಿದರು. ಆ ಬಳಿಕ ಹಲವು ಸೂಪರ್​ಸ್ಟಾರ್​ಗಳ ಜೊತೆ ನಟಿಸಿ, ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಯಶ್ ಹಾಗು ರಾಧಿಕಾ ಕೆಮಿಸ್ಟ್ರಿ ತೆರೆಮೇಲೆ ಪ್ರೇಕ್ಷಕರಿಗೆ ಇಷ್ಟ ಆಗಿದೆ. 2019ರಲ್ಲಿ ರಿಲೀಸ್ ಆದ ‘ಆದಿಲಕ್ಷ್ಮಿ’ ಪುರಾಣ ಚಿತ್ರವೇ ಕೊನೆ, ಇದಾದ ಬಳಿಕ ಅವರು ಸಿನಿಮಾ ಘೋಷಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:57 am, Wed, 29 May 24

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!