AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್-ರಾಧಿಕಾ ಪಂಡಿತ್​ ಪೂಜೆ ಮಾಡುವಾಗ ಗಂಟೆ ಬಾರಿಸಿದ ಯಥರ್ವ್​​; ವಿಡಿಯೋ ವೈರಲ್​

ಇಂದು ಗಣೇಶ ಚತುರ್ಥಿ. ಎಲ್ಲೆಡೆ ಇಂದು ಗಣಪನಿಗೆ ಪೂಜೆ ಸಲ್ಲಿಸಲಾಗಿದೆ. ವಿಶೇಷ ಬಗೆಯ ಅಡುಗೆಗಳನ್ನು ಮಾಡಿ ಗಣಪನಿಗೆ ನೈವೇದ್ಯ ಮಾಡಲಾಗಿದೆ. ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ವಾತಾವರಣ ಜೋರಾಗಿಯೇ ಇತ್ತು.

ಯಶ್-ರಾಧಿಕಾ ಪಂಡಿತ್​ ಪೂಜೆ ಮಾಡುವಾಗ ಗಂಟೆ ಬಾರಿಸಿದ ಯಥರ್ವ್​​; ವಿಡಿಯೋ ವೈರಲ್​
ಯಶ್-ರಾಧಿಕಾ ಪಂಡಿತ್​ ಪೂಜೆ ಮಾಡುವಾಗ ಗಂಟೆ ಬಾರಿಸಿದ ಯಥರ್ವ್​​; ವಿಡಿಯೋ ವೈರಲ್​
TV9 Web
| Edited By: |

Updated on: Sep 10, 2021 | 9:50 PM

Share

ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿಯ ಮಕ್ಕಳಾದ  ಯಥರ್ವ್​ ಹಾಗೂ ಆಯ್ರಾ ಈಗತಾನೆ ಬೆಳೆಯುತ್ತಿದ್ದಾರೆ. ಅವರಿಗೆ ಸೋಶಿಯಲ್​ ಮೀಡಿಯಾ ಬಗ್ಗೆ ಜ್ಞಾನ ಇಲ್ಲ. ಆದರೆ, ರಾಧಿಕಾ ಪಂಡಿತ್​ ಅವರು ತಮ್ಮ ಮಕ್ಕಳ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಆಗಾಗ ಬರೆದುಕೊಳ್ಳುತ್ತಲೇ ಇರುತ್ತಾರೆ. ಮಕ್ಕಳು ಮಾಡುವ ತುಂಟಾಟದ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ರಾಧಿಕಾ ಪಂಡಿತ್​ ಕುಟುಂಬದ ಜತೆ ಗಣೇಶ ಚತುರ್ಥಿ ಆಚರಿಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ .

ಇಂದು ಗಣೇಶ ಚತುರ್ಥಿ. ಎಲ್ಲೆಡೆ ಇಂದು ಗಣಪನಿಗೆ ಪೂಜೆ ಸಲ್ಲಿಸಲಾಗಿದೆ. ವಿಶೇಷ ಬಗೆಯ ಅಡುಗೆಗಳನ್ನು ಮಾಡಿ ಗಣಪನಿಗೆ ನೈವೇದ್ಯ ಮಾಡಲಾಗಿದೆ. ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ವಾತಾವರಣ ಜೋರಾಗಿಯೇ ಇತ್ತು. ಸೆಲೆಬ್ರಿಟಿಗಳು ತಮ್ಮ ಮನೆಯಲ್ಲಿ ಹೇಗೆ ಹಬ್ಬ ಆಚರಿಸಲಾಯಿತು ಎನ್ನುವ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಟಿ ರಾಧಿಕಾ ಪಂಡಿತ್​ ಕೂಡ ಮನೆಯಲ್ಲಿ ಸಿಂಪಲ್​ ಆಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳಿಗೋಸ್ಕರ ಅವರು ಹಂಚಿಕೊಂಡಿದ್ದಾರೆ.

ಯಶ್​ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋವನ್ನು ರಾಧಿಕಾ ಅಪ್​ಲೋಡ್​ ಮಾಡಿದ್ದಾರೆ. ಈ ವಿಡಿಯೋದಲ್ಲಿ ಹೈಲೈಟ್​ ಆಗಿದ್ದು ಯಥರ್ವ್​. ತಂದೆ ಪೂಜೆ ಮಾಡುತ್ತಿದ್ದರೆ ಈ ಪುಟ್ಟ ಹುಡುಗ ಗಂಟೆ ಬಾರಿಸಿದ್ದಾನೆ. ಈ ವಿಡಿಯೋ ಈಗ ಸಾಕಷ್ಟು ವೈರಲ್ ಆಗುತ್ತಿದೆ. ಇನ್ನು ಆಯ್ರಾ ಪೂಜೆಗೂ ಮೊದಲೇ ಪ್ರಸಾದ ತಿಂದಿದ್ದಾಳೆ. ಈ ಫೋಟೋಗಳನ್ನು ಕೂಡ ರಾಧಿಕಾ ಪಂಡಿತ್​ ಹಂಚಿಕೊಂಡಿದ್ದಾರೆ.

ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಆದರೆ, ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​ ಆಗಿದ್ದಾರೆ. ಅವರು ಮತ್ತೆ ಚಿತ್ರರಂಗಕ್ಕೆ ಬರಬೇಕು ಎಂಬುದು ಅಭಿಮಾನಿಗಳ ಬೇಡಿಕೆ. ಈ ಬೇಡಿಕೆಯನ್ನು ಅವರು ಯಾವಾಗ ಈಡೇರಿಸುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇನ್ನೂ ಹಾಗೇಯೆ ಇದೆ.

ಇನ್ನು, ಪ್ರಿಯಾಂಕಾ ಉಪೇಂದ್ರ, ನಟ ನಿಖಿಲ್​ ಕುಮಾರಸ್ವಾಮಿ, ಅದಿತಿ ಪ್ರಭುದೇವ ಸೇರಿ ಸಾಕಷ್ಟು ಮಂದಿ ತಮ್ಮ ಮನೆಯಲ್ಲಿ ಹಬ್ಬ ಆಚರಿಸಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ