AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್-ರಾಧಿಕಾ ಪಂಡಿತ್​ ಪೂಜೆ ಮಾಡುವಾಗ ಗಂಟೆ ಬಾರಿಸಿದ ಯಥರ್ವ್​​; ವಿಡಿಯೋ ವೈರಲ್​

ಇಂದು ಗಣೇಶ ಚತುರ್ಥಿ. ಎಲ್ಲೆಡೆ ಇಂದು ಗಣಪನಿಗೆ ಪೂಜೆ ಸಲ್ಲಿಸಲಾಗಿದೆ. ವಿಶೇಷ ಬಗೆಯ ಅಡುಗೆಗಳನ್ನು ಮಾಡಿ ಗಣಪನಿಗೆ ನೈವೇದ್ಯ ಮಾಡಲಾಗಿದೆ. ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ವಾತಾವರಣ ಜೋರಾಗಿಯೇ ಇತ್ತು.

ಯಶ್-ರಾಧಿಕಾ ಪಂಡಿತ್​ ಪೂಜೆ ಮಾಡುವಾಗ ಗಂಟೆ ಬಾರಿಸಿದ ಯಥರ್ವ್​​; ವಿಡಿಯೋ ವೈರಲ್​
ಯಶ್-ರಾಧಿಕಾ ಪಂಡಿತ್​ ಪೂಜೆ ಮಾಡುವಾಗ ಗಂಟೆ ಬಾರಿಸಿದ ಯಥರ್ವ್​​; ವಿಡಿಯೋ ವೈರಲ್​
TV9 Web
| Edited By: |

Updated on: Sep 10, 2021 | 9:50 PM

Share

ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿಯ ಮಕ್ಕಳಾದ  ಯಥರ್ವ್​ ಹಾಗೂ ಆಯ್ರಾ ಈಗತಾನೆ ಬೆಳೆಯುತ್ತಿದ್ದಾರೆ. ಅವರಿಗೆ ಸೋಶಿಯಲ್​ ಮೀಡಿಯಾ ಬಗ್ಗೆ ಜ್ಞಾನ ಇಲ್ಲ. ಆದರೆ, ರಾಧಿಕಾ ಪಂಡಿತ್​ ಅವರು ತಮ್ಮ ಮಕ್ಕಳ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಆಗಾಗ ಬರೆದುಕೊಳ್ಳುತ್ತಲೇ ಇರುತ್ತಾರೆ. ಮಕ್ಕಳು ಮಾಡುವ ತುಂಟಾಟದ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ರಾಧಿಕಾ ಪಂಡಿತ್​ ಕುಟುಂಬದ ಜತೆ ಗಣೇಶ ಚತುರ್ಥಿ ಆಚರಿಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ .

ಇಂದು ಗಣೇಶ ಚತುರ್ಥಿ. ಎಲ್ಲೆಡೆ ಇಂದು ಗಣಪನಿಗೆ ಪೂಜೆ ಸಲ್ಲಿಸಲಾಗಿದೆ. ವಿಶೇಷ ಬಗೆಯ ಅಡುಗೆಗಳನ್ನು ಮಾಡಿ ಗಣಪನಿಗೆ ನೈವೇದ್ಯ ಮಾಡಲಾಗಿದೆ. ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ವಾತಾವರಣ ಜೋರಾಗಿಯೇ ಇತ್ತು. ಸೆಲೆಬ್ರಿಟಿಗಳು ತಮ್ಮ ಮನೆಯಲ್ಲಿ ಹೇಗೆ ಹಬ್ಬ ಆಚರಿಸಲಾಯಿತು ಎನ್ನುವ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಟಿ ರಾಧಿಕಾ ಪಂಡಿತ್​ ಕೂಡ ಮನೆಯಲ್ಲಿ ಸಿಂಪಲ್​ ಆಗಿ ಗಣೇಶ ಚತುರ್ಥಿ ಆಚರಿಸಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳಿಗೋಸ್ಕರ ಅವರು ಹಂಚಿಕೊಂಡಿದ್ದಾರೆ.

ಯಶ್​ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋವನ್ನು ರಾಧಿಕಾ ಅಪ್​ಲೋಡ್​ ಮಾಡಿದ್ದಾರೆ. ಈ ವಿಡಿಯೋದಲ್ಲಿ ಹೈಲೈಟ್​ ಆಗಿದ್ದು ಯಥರ್ವ್​. ತಂದೆ ಪೂಜೆ ಮಾಡುತ್ತಿದ್ದರೆ ಈ ಪುಟ್ಟ ಹುಡುಗ ಗಂಟೆ ಬಾರಿಸಿದ್ದಾನೆ. ಈ ವಿಡಿಯೋ ಈಗ ಸಾಕಷ್ಟು ವೈರಲ್ ಆಗುತ್ತಿದೆ. ಇನ್ನು ಆಯ್ರಾ ಪೂಜೆಗೂ ಮೊದಲೇ ಪ್ರಸಾದ ತಿಂದಿದ್ದಾಳೆ. ಈ ಫೋಟೋಗಳನ್ನು ಕೂಡ ರಾಧಿಕಾ ಪಂಡಿತ್​ ಹಂಚಿಕೊಂಡಿದ್ದಾರೆ.

ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಆದರೆ, ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​ ಆಗಿದ್ದಾರೆ. ಅವರು ಮತ್ತೆ ಚಿತ್ರರಂಗಕ್ಕೆ ಬರಬೇಕು ಎಂಬುದು ಅಭಿಮಾನಿಗಳ ಬೇಡಿಕೆ. ಈ ಬೇಡಿಕೆಯನ್ನು ಅವರು ಯಾವಾಗ ಈಡೇರಿಸುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇನ್ನೂ ಹಾಗೇಯೆ ಇದೆ.

ಇನ್ನು, ಪ್ರಿಯಾಂಕಾ ಉಪೇಂದ್ರ, ನಟ ನಿಖಿಲ್​ ಕುಮಾರಸ್ವಾಮಿ, ಅದಿತಿ ಪ್ರಭುದೇವ ಸೇರಿ ಸಾಕಷ್ಟು ಮಂದಿ ತಮ್ಮ ಮನೆಯಲ್ಲಿ ಹಬ್ಬ ಆಚರಿಸಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್