AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಸಿನಿಮಾದಿಂದ ಎಷ್ಟು ಹಣ ಬರುತ್ತದೆ ಎಂದು ರಾಧಿಕಾ ಎಂದಿಗೂ ಕೇಳಿಲ್ಲ’; ಯಶ್

ರಾಧಿಕಾ ಪಂಡಿತ್ ಅವರು ಯಶ್​ನ 2016ರ ಡಿಸೆಂಬರ್ 6ರಂದು ವಿವಾಹ ಆದರು. ಇವರು ಹಾಯಾಗಿ ಸಂಸಾರ ನಡೆಸುತ್ತಾ ಇದ್ದಾರೆ. ಈಗ ಯಶ್ ಅವರು ಪತ್ನಿಯನ್ನು ಬಾಯ್ತುಂಬ ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

‘ಈ ಸಿನಿಮಾದಿಂದ ಎಷ್ಟು ಹಣ ಬರುತ್ತದೆ ಎಂದು ರಾಧಿಕಾ ಎಂದಿಗೂ ಕೇಳಿಲ್ಲ’; ಯಶ್
ಯಶ್
ರಾಜೇಶ್ ದುಗ್ಗುಮನೆ
|

Updated on: Oct 23, 2024 | 10:54 AM

Share

ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿ ಎಲ್ಲರಿಗೂ ಮಾದರಿ. ರಾಧಿಕಾ ಪಂಡಿತ್ ಅವರು ಯಶ್​ಗೆ ಸದಾ ಬೆಂಬಲವಾಗಿ ನಿಂತಿದ್ದಾರೆ. ಯಶ್ ಎಷ್ಟೇ ಬ್ಯುಸಿ ಇದ್ದರೂ ಕುಟುಂಬಕ್ಕೆ ಸಮಯ ನೀಡುತ್ತಾರೆ. ಈಗ ರಾಧಿಕಾ ಪಂಡಿತ್ ಬಗ್ಗೆ ಯಶ್ ಅವರು ಮನಸಾರೆ ಮಾತನಾಡಿದ್ದಾರೆ. ಅವರು ಪತ್ನಿಯನ್ನು ಬಾಯ್ತುಂಬ ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

‘ದಿ ಹಾಲಿವುಡ್​ ರಿಪೋರ್ಟರ್​ ಇಂಡಿಯಾ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಯಶ್ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಪತ್ನಿ ಬಗ್ಗೆಯೂ ಮಾತನಾಡಿದ್ದಾರೆ. ‘ಅವರು ನನ್ನ ಶಕ್ತಿ’ ಎಂದು ಯಶ್ ಅವರು ಹೇಳಿದ್ದಾರೆ.

‘ರಾಧಿಕಾ ಸಿಕ್ಕಿದ್ದು ನನ್ನ ಅದೃಷ್ಟ. ಅವಳು ಯಾವಾಗಲೂ ನನ್ನ ಬೆಂಬಲಿಸಿದ್ದಾಳೆ. ನನ್ನನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾಳೆ. ಇಬ್ಬರೂ ಒಟ್ಟಾಗಿ ಬೆಳೆದವರು. ನಾವಿಬ್ಬರೂ ಗೆಳೆಯರಾಗಿ ಪರಿಚಯ ಆದವರು. ನಂತರ ಮದುವೆ ಆದೆವು. ನಾನು ಏನು ಎಂಜಾಯ್ ಮಾಡುತ್ತೇನೆ ಅನ್ನೋದು ಫ್ರೆಂಡ್ ಆಗಿ ಅವಳಿಗೆ ಗೊತ್ತು. ಈ ಚಿತ್ರದಿಂದ ಏನು ಸಿಗುತ್ತದೆ? ಎಷ್ಟು ಹಣ ಸಿಗುತ್ತದೆ ಎಂದು ಯಾವಾಗಲೂ ಕೇಳಿಲ್ಲ. ಇದು ಒಳ್ಳೆಯ ಆಯ್ಕೆಯೇ ಅಥವಾ ಕೆಟ್ಟ ಆಯ್ಕೆಯೇ ಎಂದು ಕೇಳಿಲ್ಲ. ನೀನು ಖುಷಿಯಾಗಿದ್ದೀಯಾ ಎಂದಷ್ಟೇ ಕೇಳುತ್ತಾಳೆ. ಅವಳು ಅಟೆಷನ್ಷನ್ ಹಾಗೂ ಸಮಯವನ್ನು ಮಾತ್ರ ಕೇಳುತ್ತಾಳೆ’ ಎಂದಿದ್ದಾರೆ ಯಶ್.

ಇದನ್ನೂ ಓದಿ: ಮುಂಬೈನಲ್ಲಿ ಯಶ್​, ರಾಧಿಕಾ ಪಂಡಿತ್ ಡಿನ್ನರ್: ಫೋಟೋ, ವಿಡಿಯೋಗೆ ಮುಗಿಬಿದ್ದ ಪಾಪರಾಜಿಗಳು

ರಾಧಿಕಾ ಪಂಡಿತ್ ಹಾಗೂ ಯಶ್ ಧಾರಾವಾಹಿಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆ ಬಳಿಕ ಹಿರಿತೆರೆಗೆ ಒಟ್ಟಾಗಿ ಕಾಲಿಟ್ಟರು. ಇಬ್ಬರೂ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರು 2016ರ ಡಿಸೆಂಬರ್ 6ರಂದು ವಿವಾಹ ಆದರು. ಇವರು ಹಾಯಾಗಿ ಸಂಸಾರ ನಡೆಸುತ್ತಾ ಇದ್ದಾರೆ. ಇಬ್ಬರೂ ಮತ್ತೊಮ್ಮೆ ತೆರೆಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ