‘ಈ ಸಿನಿಮಾದಿಂದ ಎಷ್ಟು ಹಣ ಬರುತ್ತದೆ ಎಂದು ರಾಧಿಕಾ ಎಂದಿಗೂ ಕೇಳಿಲ್ಲ’; ಯಶ್

ರಾಧಿಕಾ ಪಂಡಿತ್ ಅವರು ಯಶ್​ನ 2016ರ ಡಿಸೆಂಬರ್ 6ರಂದು ವಿವಾಹ ಆದರು. ಇವರು ಹಾಯಾಗಿ ಸಂಸಾರ ನಡೆಸುತ್ತಾ ಇದ್ದಾರೆ. ಈಗ ಯಶ್ ಅವರು ಪತ್ನಿಯನ್ನು ಬಾಯ್ತುಂಬ ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

‘ಈ ಸಿನಿಮಾದಿಂದ ಎಷ್ಟು ಹಣ ಬರುತ್ತದೆ ಎಂದು ರಾಧಿಕಾ ಎಂದಿಗೂ ಕೇಳಿಲ್ಲ’; ಯಶ್
ಯಶ್
Follow us
|

Updated on: Oct 23, 2024 | 10:54 AM

ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿ ಎಲ್ಲರಿಗೂ ಮಾದರಿ. ರಾಧಿಕಾ ಪಂಡಿತ್ ಅವರು ಯಶ್​ಗೆ ಸದಾ ಬೆಂಬಲವಾಗಿ ನಿಂತಿದ್ದಾರೆ. ಯಶ್ ಎಷ್ಟೇ ಬ್ಯುಸಿ ಇದ್ದರೂ ಕುಟುಂಬಕ್ಕೆ ಸಮಯ ನೀಡುತ್ತಾರೆ. ಈಗ ರಾಧಿಕಾ ಪಂಡಿತ್ ಬಗ್ಗೆ ಯಶ್ ಅವರು ಮನಸಾರೆ ಮಾತನಾಡಿದ್ದಾರೆ. ಅವರು ಪತ್ನಿಯನ್ನು ಬಾಯ್ತುಂಬ ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

‘ದಿ ಹಾಲಿವುಡ್​ ರಿಪೋರ್ಟರ್​ ಇಂಡಿಯಾ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಯಶ್ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಪತ್ನಿ ಬಗ್ಗೆಯೂ ಮಾತನಾಡಿದ್ದಾರೆ. ‘ಅವರು ನನ್ನ ಶಕ್ತಿ’ ಎಂದು ಯಶ್ ಅವರು ಹೇಳಿದ್ದಾರೆ.

‘ರಾಧಿಕಾ ಸಿಕ್ಕಿದ್ದು ನನ್ನ ಅದೃಷ್ಟ. ಅವಳು ಯಾವಾಗಲೂ ನನ್ನ ಬೆಂಬಲಿಸಿದ್ದಾಳೆ. ನನ್ನನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾಳೆ. ಇಬ್ಬರೂ ಒಟ್ಟಾಗಿ ಬೆಳೆದವರು. ನಾವಿಬ್ಬರೂ ಗೆಳೆಯರಾಗಿ ಪರಿಚಯ ಆದವರು. ನಂತರ ಮದುವೆ ಆದೆವು. ನಾನು ಏನು ಎಂಜಾಯ್ ಮಾಡುತ್ತೇನೆ ಅನ್ನೋದು ಫ್ರೆಂಡ್ ಆಗಿ ಅವಳಿಗೆ ಗೊತ್ತು. ಈ ಚಿತ್ರದಿಂದ ಏನು ಸಿಗುತ್ತದೆ? ಎಷ್ಟು ಹಣ ಸಿಗುತ್ತದೆ ಎಂದು ಯಾವಾಗಲೂ ಕೇಳಿಲ್ಲ. ಇದು ಒಳ್ಳೆಯ ಆಯ್ಕೆಯೇ ಅಥವಾ ಕೆಟ್ಟ ಆಯ್ಕೆಯೇ ಎಂದು ಕೇಳಿಲ್ಲ. ನೀನು ಖುಷಿಯಾಗಿದ್ದೀಯಾ ಎಂದಷ್ಟೇ ಕೇಳುತ್ತಾಳೆ. ಅವಳು ಅಟೆಷನ್ಷನ್ ಹಾಗೂ ಸಮಯವನ್ನು ಮಾತ್ರ ಕೇಳುತ್ತಾಳೆ’ ಎಂದಿದ್ದಾರೆ ಯಶ್.

ಇದನ್ನೂ ಓದಿ: ಮುಂಬೈನಲ್ಲಿ ಯಶ್​, ರಾಧಿಕಾ ಪಂಡಿತ್ ಡಿನ್ನರ್: ಫೋಟೋ, ವಿಡಿಯೋಗೆ ಮುಗಿಬಿದ್ದ ಪಾಪರಾಜಿಗಳು

ರಾಧಿಕಾ ಪಂಡಿತ್ ಹಾಗೂ ಯಶ್ ಧಾರಾವಾಹಿಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆ ಬಳಿಕ ಹಿರಿತೆರೆಗೆ ಒಟ್ಟಾಗಿ ಕಾಲಿಟ್ಟರು. ಇಬ್ಬರೂ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರು 2016ರ ಡಿಸೆಂಬರ್ 6ರಂದು ವಿವಾಹ ಆದರು. ಇವರು ಹಾಯಾಗಿ ಸಂಸಾರ ನಡೆಸುತ್ತಾ ಇದ್ದಾರೆ. ಇಬ್ಬರೂ ಮತ್ತೊಮ್ಮೆ ತೆರೆಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!