AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರ ವಯಸ್ಸಿನಲ್ಲಿ ನಾನು ಹೀಗೆ ಇರಲು ಸಾಧ್ಯವೇ?’ ರಾಧಿಕಾ ಪಂಡಿತ್​ಗೆ ಹೀಗೊಂದು ಅನುಮಾನ

ರಾಧಿಕಾ ಪಂಡಿತ್ ಜತೆ ತಂದೆ-ತಾಯಿ ಕೂಡ ವಾಸವಾಗಿದ್ದಾರೆ. ಮಕ್ಕಳ ಜತೆ ಹಾಕುವ ಫೋಟೋ, ಹಬ್ಬದ ಸಂದರ್ಭದಲ್ಲಿ ಪೋಸ್ಟ್​ ಮಾಡುವ ಚಿತ್ರಗಳಲ್ಲಿ ರಾಧಿಕಾ ತಂದೆ-ತಾಯಿ ಕೂಡ ಕಾಣಿಸಿಕೊಳ್ಳುತ್ತಾರೆ.

‘ಅವರ ವಯಸ್ಸಿನಲ್ಲಿ ನಾನು ಹೀಗೆ ಇರಲು ಸಾಧ್ಯವೇ?’ ರಾಧಿಕಾ ಪಂಡಿತ್​ಗೆ ಹೀಗೊಂದು ಅನುಮಾನ
‘ಅವರ ವಯಸ್ಸಿನಲ್ಲಿ ನಾನು ಹೀಗೆ ಇರಲು ಸಾಧ್ಯವೇ?’ ರಾಧಿಕಾ ಪಂಡಿತ್​ಗೆ ಹೀಗೊಂದು ಅನುಮಾನ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 15, 2021 | 8:26 PM

Share

ನಟಿ ರಾಧಿಕಾ ಪಂಡಿತ್​ ಕುಟುಂಬದ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಇದರ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅಭಿಮಾನಿಗಳ ಜತೆ ಅವರು ಸಂಪರ್ಕದಲ್ಲಿ ಇದ್ದಾರೆ. ಸದಾ ಮಕ್ಕಳ ಬಗ್ಗೆ ಪೋಸ್ಟ್ ಮಾಡುವ ರಾಧಿಕಾ ಪಂಡಿತ್​ ಇಂದು ತಮ್ಮ ತಾಯಿಯ ಬಗ್ಗೆ ಬರೆದುಕೊಂಡಿದ್ದಾರೆ. ಅವರು ಎಷ್ಟು ಸ್ಟ್ರಾಂಗ್​ ಎಂದು ಬಣ್ಣಿಸಿದ್ದಾರೆ. ಜತೆಗೆ ಭಾವನಾತ್ಮಕ ಸಾಲುಗಳನ್ನು ತಾಯಿ ಮಾಡುವ ಕೆಲಸ ವಿವರಿಸಿದ್ದಾರೆ.

ರಾಧಿಕಾ ಪಂಡಿತ್ ಜತೆ ತಂದೆ-ತಾಯಿ ಕೂಡ ವಾಸವಾಗಿದ್ದಾರೆ. ಮಕ್ಕಳ ಜತೆ ಹಾಕುವ ಫೋಟೋ, ಹಬ್ಬದ ಸಂದರ್ಭದಲ್ಲಿ ಪೋಸ್ಟ್​ ಮಾಡುವ ಚಿತ್ರಗಳಲ್ಲಿ ರಾಧಿಕಾ ತಂದೆ-ತಾಯಿ ಕೂಡ ಕಾಣಿಸಿಕೊಳ್ಳುತ್ತಾರೆ. ರಾಧಿಕಾಗೆ ಪಾಲಕರನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ರಾಧಿಕಾ ಇಬ್ಬರು ಮಕ್ಕಳನ್ನು ನೋಡಿಕೊಳ್ಳುವ ಜವಾಬ್ದಾರಿ ಅವರ ತಾಯಿ ಮಂಗಳಾ ಪಂಡಿತ್​ ಮೇಲೂ ಇದೆ. ತಾಯಿ ಜತೆ ನಿಂತಿರುವ ಫೋಟೋವನ್ನು ಪೋಸ್ಟ್ ಮಾಡಿರುವ ರಾಧಿಕಾ ಆ ಬಗ್ಗೆ ಹೇಳಿಕೊಂಡಿದ್ದಾರೆ.

‘ಅವತು ಎಲ್ಲ ಕೆಲಸಗಳನ್ನು ಹೇಗೆ ನಿರ್ವಹಿಸುತ್ತಾರೆ ಎನ್ನುವ ಬಗ್ಗೆ ನನಗೆ ಈಗಲೂ ಅಚ್ಚರಿ ಇದೆ. ಮನೆ ಕೆಲಸ, ಅಡುಗೆ, ನನ್ನ ಮಕ್ಕಳ ಜತೆ ನನ್ನ ಹಾಗೂ ನನ್ನ ತಂದೆಯನ್ನು ನೋಡಿಕೊಳ್ಳುವುದು. ಆದಾಗ್ಯೂ ಅವರಲ್ಲಿ ಇಷ್ಟೊಂದು ಶಕ್ತಿ ಇದೆ. ಅವರ ವಯಸ್ಸಿನಲ್ಲಿ ನಾನು ಹೀಗೆ ಇರಲು ಸಾಧ್ಯವೇ? ನನಗೆ ಯಾಕೋ ಅನುಮಾನ. ನನ್ನ ಸೂಪರ್​ವುಮನ್​. ನನ್ನ ಅಮ್ಮ’ ಎಂದು ಬರೆದುಕೊಂಡಿದ್ದಾರೆ ರಾಧಿಕಾ ಪಂಡಿತ್.

ಈ ಪೋಸ್ಟ್​ ನೋಡಿದ ಅಭಿಮಾನಿಗಳು ತಾಯಿಯನ್ನು ಹಾಡಿ ಹೊಗಳಿದ್ದಾರೆ. ತಾಯಿ ಎಂದರೆ ಶಕ್ತಿ ಎಂದು ಅಭಿಮಾನಿಗಳು ಬಣ್ಣಿಸಿದ್ದಾರೆ. ಯಶ್​ ನಟನೆಯ ‘ಕೆಜಿಎಫ್​’ ಸಿನಿಮಾದಲ್ಲಿ ತಾಯಿ ಸೆಂಟಿಮೆಂಟ್​ ಕೂಡ ಹೈಲೈಟ್​ ಆಗಿತ್ತು. ಕೆಲವರು ಈ ಸಿನಿಮಾವನ್ನೂ ನೆನಪು ಮಾಡಿಕೊಂಡಿದ್ದಾರೆ. ಯಶ್​ ನಟನೆಯ ‘ಕೆಜಿಎಫ್ 2’ ಸಿನಿಮಾ ತೆರೆಗೆ ಬರೋದು ವಿಳಂಬವಾಗಿದೆ. ಏಪ್ರಿಲ್​ 14ರಂದು ಸಿನಿಮಾ ಎಲ್ಲೆಡೆ ತೆರೆಕಾಣುತ್ತಿದೆ. ಇನ್ನು, ರಾಧಿಕಾ ಪಂಡಿತ್​ ನಟನೆಯಿಂದ ದೂರವೇ ಉಳಿದಿದ್ದು, ಹೊಸ ಸಿನಿಮಾ ಒಪ್ಪಿಕೊಳ್ಳಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ​

ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿ ದಿನ ಆಯ್ರಾ, ಯಥರ್ವ್​​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

ಯಶ್-ರಾಧಿಕಾ ಪಂಡಿತ್​ ಪೂಜೆ ಮಾಡುವಾಗ ಗಂಟೆ ಬಾರಿಸಿದ ಯಥರ್ವ್​​; ವಿಡಿಯೋ ವೈರಲ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!