AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್​ ಹಂಚಿಕೊಂಡ್ರು ಮಗುವಿನ ಹೊಸ ಫೋಟೋ; ಆಯ್ರಾ ಸ್ಮೈಲ್​ ಹೇಗಿದೆ ನೋಡಿ

ಯಶ್​-ರಾಧಿಕಾ ಮೊದಲು ಮಗು ಆಯ್ರಾ. ಆಯ್ರಾ ಜನಿಸದ ನಂತರದಲ್ಲಿ ಸಾಕಷ್ಟು ಫೇಮ್​ ಸೃಷ್ಟಿಸಿಕೊಂಡಿದ್ದಾಳೆ. ಯಶ್​ ಮೊದಲ ಮಗು ಎನ್ನುವ ಕಾರಣಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಸೇನ್ಸೇಶನ್​ ಸೃಷ್ಟಿ ಮಾಡಿದ್ದಾಳೆ.

ರಾಧಿಕಾ ಪಂಡಿತ್​ ಹಂಚಿಕೊಂಡ್ರು ಮಗುವಿನ ಹೊಸ ಫೋಟೋ; ಆಯ್ರಾ ಸ್ಮೈಲ್​ ಹೇಗಿದೆ ನೋಡಿ
ರಾಧಿಕಾ ಪಂಡಿತ್​ ಹಂಚಿಕೊಂಡ್ರು ಮಗುವಿನ ಹೊಸ ಫೋಟೋ; ಆಯ್ರಾ ಸ್ಮೈಲ್​ ಹೇಗಿದೆ ನೋಡಿ
TV9 Web
| Edited By: |

Updated on: Jul 09, 2021 | 9:02 PM

Share

ನಟಿ ರಾಧಿಕಾ ಪಂಡಿತ್​ ಚಿತ್ರರಂಗದಿಂದ ದೂರವೇ ಉಳಿದರೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಮಕ್ಕಳ ಪಾಲನೆಯಲ್ಲಿ ತೊಡಗಿರುವ ಅವರು ಅಭಿಮಾನಿಗಳನ್ನು ಮರೆತಿಲ್ಲ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಈಗ ಅವರು ಆಯ್ರಾಳ ಬಗ್ಗೆ ಹೊಸ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟರ್​ನಲ್ಲಿ ಆಯ್ರಾ ಅವರ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ.

ಯಶ್​-ರಾಧಿಕಾ ಮೊದಲು ಮಗು ಆಯ್ರಾ. ಆಯ್ರಾ ಸಾಕಷ್ಟು ಫೇಮ್​ ಸೃಷ್ಟಿಸಿಕೊಂಡಿದ್ದಾಳೆ. ಯಶ್​ ಮೊದಲ ಮಗು ಎನ್ನುವ ಕಾರಣಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಸೇನ್ಸೇಶನ್​ ಸೃಷ್ಟಿ ಮಾಡಿದ್ದಾಳೆ. ಇವಳಿಗೆ ಯಶಿಕಾ ಎಂದು ನಾಮಕರಣ ಮಾಡಬೇಕು ಎಂದು ಅಭಿಮಾನಿಗಳು ಒತ್ತಾಯಿಸಿದ್ದರು.

ಜನಿಸಿದಾಗಿನಿಂದ ಇಲ್ಲಿಯವರೆಗೂ ಆಯ್ರಾಳ ಜನಪ್ರಿಯತೆಯ ಕೊಂಚವೂ ಕಡಿಮೆ ಆಗಿಲ್ಲ. ದಿನ ಕಳೆದಂತೆ ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಆಯ್ರಾ ನಿತ್ಯ ಏನು ಮಾಡುತ್ತಾಳೆ? ಆಯ್ರಾ ಹೇರ್​ಸ್ಟೈಲ್​, ಅವಳು ಹಾಕುವ ಬಟ್ಟೆ ಬಗ್ಗೆ ಅಭಿಮಾನಿಗಳು ಕುತೂಹಲ ಇಟ್ಟುಕೊಂಡಿದ್ದಾರೆ. ಈಗ ಆಯ್ರಾಳ ​ ಹೊಸ ಫೋಟೋವನ್ನು ರಾಧಿಕಾ ಪಂಡಿತ್ ಹಂಚಿಕೊಂಡು ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ.

ರಾಧಿಕಾ ಪಂಡಿತ್​ ಚಿತ್ರರಂಗಕ್ಕೆ ಮರಳೋದು ಯಾವಾಗ ಎನ್ನುವ ಪ್ರಶ್ನೆಗಳನ್ನು ಅಭಿಮಾನಿಗಳು ಕೇಳುತ್ತಿದ್ದಾರೆ. ‘ಆದಿ ಲಕ್ಷ್ಮೀ ಪುರಾಣ’ ಚಿತ್ರವೇ ಕೊನೆ. ಅದಾದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಆದಷ್ಟು ಬೇಗ ಅವರನ್ನು ತೆರೆಮೇಲೆ ನೋಡಬೇಕು ಎಂಬುದು ಅಭಿಮಾನಿಗಳ ಕನಸು. ಆದರೆ, ಈ ಬಗ್ಗೆ ಅವರು ಎಲ್ಲಿಯೂ ಹೇಳಿಕೊಂಡಿಲ್ಲ.

ಇನ್ನು, ಯಶ್​ ಕೆಜಿಎಫ್​ 2 ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಜುಲೈ 16ರಂದು ಚಿತ್ರ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿರುವ ಬಗ್ಗೆ ಚಿತ್ರತಂಡ ಇತ್ತೀಚೆಗೆ ಘೋಷಣೆ ಮಾಡಿತ್ತು. ಇನ್ನು, ನರ್ತನ್​ ನಿರ್ದೇಶನದ ಮುಂದಿನ ಚಿತ್ರದಲ್ಲಿ ಯಶ್​ ನೌಕಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಇದನ್ನೂ ಓದಿ: ಹೊಸ ಮನೆಗೆ ಯಶ್​-ರಾಧಿಕಾ ಪಂಡಿತ್​ ದಂಪತಿ ಗೃಹ ಪ್ರವೇಶ ; ಹೇಗಿದೆ ನೋಡಿ ಅವರ ನಿವಾಸ

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!