AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್​ ಹಂಚಿಕೊಂಡ್ರು ಮಗುವಿನ ಹೊಸ ಫೋಟೋ; ಆಯ್ರಾ ಸ್ಮೈಲ್​ ಹೇಗಿದೆ ನೋಡಿ

ಯಶ್​-ರಾಧಿಕಾ ಮೊದಲು ಮಗು ಆಯ್ರಾ. ಆಯ್ರಾ ಜನಿಸದ ನಂತರದಲ್ಲಿ ಸಾಕಷ್ಟು ಫೇಮ್​ ಸೃಷ್ಟಿಸಿಕೊಂಡಿದ್ದಾಳೆ. ಯಶ್​ ಮೊದಲ ಮಗು ಎನ್ನುವ ಕಾರಣಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಸೇನ್ಸೇಶನ್​ ಸೃಷ್ಟಿ ಮಾಡಿದ್ದಾಳೆ.

ರಾಧಿಕಾ ಪಂಡಿತ್​ ಹಂಚಿಕೊಂಡ್ರು ಮಗುವಿನ ಹೊಸ ಫೋಟೋ; ಆಯ್ರಾ ಸ್ಮೈಲ್​ ಹೇಗಿದೆ ನೋಡಿ
ರಾಧಿಕಾ ಪಂಡಿತ್​ ಹಂಚಿಕೊಂಡ್ರು ಮಗುವಿನ ಹೊಸ ಫೋಟೋ; ಆಯ್ರಾ ಸ್ಮೈಲ್​ ಹೇಗಿದೆ ನೋಡಿ
TV9 Web
| Edited By: |

Updated on: Jul 09, 2021 | 9:02 PM

Share

ನಟಿ ರಾಧಿಕಾ ಪಂಡಿತ್​ ಚಿತ್ರರಂಗದಿಂದ ದೂರವೇ ಉಳಿದರೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಮಕ್ಕಳ ಪಾಲನೆಯಲ್ಲಿ ತೊಡಗಿರುವ ಅವರು ಅಭಿಮಾನಿಗಳನ್ನು ಮರೆತಿಲ್ಲ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಈಗ ಅವರು ಆಯ್ರಾಳ ಬಗ್ಗೆ ಹೊಸ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟರ್​ನಲ್ಲಿ ಆಯ್ರಾ ಅವರ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ.

ಯಶ್​-ರಾಧಿಕಾ ಮೊದಲು ಮಗು ಆಯ್ರಾ. ಆಯ್ರಾ ಸಾಕಷ್ಟು ಫೇಮ್​ ಸೃಷ್ಟಿಸಿಕೊಂಡಿದ್ದಾಳೆ. ಯಶ್​ ಮೊದಲ ಮಗು ಎನ್ನುವ ಕಾರಣಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಸೇನ್ಸೇಶನ್​ ಸೃಷ್ಟಿ ಮಾಡಿದ್ದಾಳೆ. ಇವಳಿಗೆ ಯಶಿಕಾ ಎಂದು ನಾಮಕರಣ ಮಾಡಬೇಕು ಎಂದು ಅಭಿಮಾನಿಗಳು ಒತ್ತಾಯಿಸಿದ್ದರು.

ಜನಿಸಿದಾಗಿನಿಂದ ಇಲ್ಲಿಯವರೆಗೂ ಆಯ್ರಾಳ ಜನಪ್ರಿಯತೆಯ ಕೊಂಚವೂ ಕಡಿಮೆ ಆಗಿಲ್ಲ. ದಿನ ಕಳೆದಂತೆ ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಆಯ್ರಾ ನಿತ್ಯ ಏನು ಮಾಡುತ್ತಾಳೆ? ಆಯ್ರಾ ಹೇರ್​ಸ್ಟೈಲ್​, ಅವಳು ಹಾಕುವ ಬಟ್ಟೆ ಬಗ್ಗೆ ಅಭಿಮಾನಿಗಳು ಕುತೂಹಲ ಇಟ್ಟುಕೊಂಡಿದ್ದಾರೆ. ಈಗ ಆಯ್ರಾಳ ​ ಹೊಸ ಫೋಟೋವನ್ನು ರಾಧಿಕಾ ಪಂಡಿತ್ ಹಂಚಿಕೊಂಡು ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ.

ರಾಧಿಕಾ ಪಂಡಿತ್​ ಚಿತ್ರರಂಗಕ್ಕೆ ಮರಳೋದು ಯಾವಾಗ ಎನ್ನುವ ಪ್ರಶ್ನೆಗಳನ್ನು ಅಭಿಮಾನಿಗಳು ಕೇಳುತ್ತಿದ್ದಾರೆ. ‘ಆದಿ ಲಕ್ಷ್ಮೀ ಪುರಾಣ’ ಚಿತ್ರವೇ ಕೊನೆ. ಅದಾದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಆದಷ್ಟು ಬೇಗ ಅವರನ್ನು ತೆರೆಮೇಲೆ ನೋಡಬೇಕು ಎಂಬುದು ಅಭಿಮಾನಿಗಳ ಕನಸು. ಆದರೆ, ಈ ಬಗ್ಗೆ ಅವರು ಎಲ್ಲಿಯೂ ಹೇಳಿಕೊಂಡಿಲ್ಲ.

ಇನ್ನು, ಯಶ್​ ಕೆಜಿಎಫ್​ 2 ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಜುಲೈ 16ರಂದು ಚಿತ್ರ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿರುವ ಬಗ್ಗೆ ಚಿತ್ರತಂಡ ಇತ್ತೀಚೆಗೆ ಘೋಷಣೆ ಮಾಡಿತ್ತು. ಇನ್ನು, ನರ್ತನ್​ ನಿರ್ದೇಶನದ ಮುಂದಿನ ಚಿತ್ರದಲ್ಲಿ ಯಶ್​ ನೌಕಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಇದನ್ನೂ ಓದಿ: ಹೊಸ ಮನೆಗೆ ಯಶ್​-ರಾಧಿಕಾ ಪಂಡಿತ್​ ದಂಪತಿ ಗೃಹ ಪ್ರವೇಶ ; ಹೇಗಿದೆ ನೋಡಿ ಅವರ ನಿವಾಸ

Follow Us
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್