AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದಾರೆ ನೋಡಿ ರಾಧಿಕಾ ಪಂಡಿತ್ ಅವರ ಕ್ಯೂಟ್ ಪ್ರಿನ್ಸೆಸ್; ಫೋಟೋ ಹಂಚಿಕೊಂಡ ಯಶ್ ಪತ್ನಿ

ರಾಧಿಕಾ ಪಂಡಿತ್ ಹಾಗೂ ಯಶ್ ಅವರು 2016ರಲ್ಲಿ ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಆಯ್ರಾ ಹಾಗೂ ಯಥರ್ವ್ ಹೆಸರಿನ ಇಬ್ಬರು ಮಕ್ಕಳಿದ್ದಾರೆ. ಈ ದಂಪತಿ ಹಲವು ಕಡೆ ತೆರಳುತ್ತಾ ಇರುತ್ತಾರೆ. ಮಕ್ಕಳನ್ನೂ ಅವರು ಕರೆದುಕೊಂಡು ಹೋಗುತ್ತಾರೆ. ಈಗ ರಾಧಿಕಾ ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆದಿದೆ.

ಹೇಗಿದ್ದಾರೆ ನೋಡಿ ರಾಧಿಕಾ ಪಂಡಿತ್ ಅವರ ಕ್ಯೂಟ್ ಪ್ರಿನ್ಸೆಸ್; ಫೋಟೋ ಹಂಚಿಕೊಂಡ ಯಶ್ ಪತ್ನಿ
ಆಯ್ರಾ ಯಶ್
ರಾಜೇಶ್ ದುಗ್ಗುಮನೆ
|

Updated on: Sep 25, 2023 | 9:53 AM

Share

ಕನ್ನಡದ ನಟಿ, ಯಶ್ ಪತ್ನಿ ರಾಧಿಕಾ ಪಂಡಿತ್ (Radhika Pandit) ಅವರು ನಟನೆಯಿಂದ ದೂರ ಉಳಿದಿದ್ದಾರೆ. ಅವರು ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಆಯ್ರಾ ಹಾಗೂ ಯಥರ್ವ್ ಜೊತೆ ಸಮಯ ಕಳೆಯುತ್ತಿದ್ದಾರೆ. ಮಕ್ಕಳ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಆಯ್ರಾ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮಗಳನ್ನು ರಾಧಿಕಾ ಅವರು ಕ್ಯೂಟ್ ಪ್ರಿನ್ಸೆಸ್ ಎಂದು ಕರೆದಿದ್ದಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ಅವರು 2016ರಲ್ಲಿ ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಆಯ್ರಾ ಹಾಗೂ ಯಥರ್ವ್ ಹೆಸರಿನ ಇಬ್ಬರು ಮಕ್ಕಳಿದ್ದಾರೆ. ಈ ದಂಪತಿ ಹಲವು ಕಡೆ ತೆರಳುತ್ತಾ ಇರುತ್ತಾರೆ. ಮಕ್ಕಳನ್ನೂ ಅವರು ಕರೆದುಕೊಂಡು ಹೋಗುತ್ತಾರೆ. ಈಗ ರಾಧಿಕಾ ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆದಿದೆ.

ಆಯ್ರಾ ಅವರು ಸ್ನಾನದ ಬಳಿಕ ಹಾಕುವ ಡ್ರೆಸ್ ಹಾಕಿದ್ದಾರೆ. ಅವಳಿಗೆ ರಾಧಿಕಾ ಶೂ ಹಾಕುತ್ತಿದ್ದಾರೆ. ‘ನಮ್ಮ ಲಿಟ್ಲ್ ಪ್ರಿನ್ಸಸ್’ ಎಂದು ರಾಧಿಕಾ ಬರೆದುಕೊಂಡಿದ್ದಾರೆ. ಅನೇಕರಿಗೆ ಈ ಫೋಟೋ ನೋಡಿ ‘ಕೆಜಿಎಫ್’ ಸಿನಿಮಾ ನೆನಪಾಗಿದೆ. ಯಶ್ ಹೋಟೆಲ್​ಗೆ ಬರುತ್ತಾರೆ. ಅಲ್ಲಿಗೆ ನಾಯಕಿಯ ಆಗಮನ ಆಗುತ್ತದೆ. ಆಗ ಅವರು ಯಶ್ ಇದೇ ರೀತಿಯ ಬಟ್ಟೆ ಧರಿಸಿದ್ದರು. ಆ ದೃಶ್ಯವನ್ನು ಅನೇಕರು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹೇಗಿತ್ತು ನೋಡಿ ಆಯ್ರಾ-ಯಥರ್ವ ರಕ್ಷಾ ಬಂಧನ ಆಚರಣೆ; ಫೋಟೋಗಳಲ್ಲಿ ವಿವರಿಸಿದ ರಾಧಿಕಾ ಪಂಡಿತ್ 

ರಾಧಿಕಾ ಪಂಡಿತ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ನಟನೆಗೆ ಮರಳಬೇಕು ಎಂಬುದು ಅನೇಕರ ಆಸೆ. ಆದರೆ, ಅದು ಸದ್ಯಕ್ಕೆ ಈಡೇರುವ ಸೂಚನೆ ಸಿಕ್ಕಿಲ್ಲ. ಇನ್ನು, ಯಶ್ ‘ಕೆಜಿಎಫ್ 2’ ಬಳಿಕ ಯಾವುದೇ ಸಿನಿಮಾ ಅನೌನ್ಸ್ ಮಾಡಿಲ್ಲ. ಅವರು ಹೊಸ ಚಿತ್ರ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಬಾಲಿವುಡ್​ನಿಂದಲೂ ಯಶ್​ಗೆ ಆಫರ್​ಗಳು ಬರುತ್ತಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!