AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಹೊಸ ಮನೆಯ ಬಾಲ್ಕನಿ ವ್ಯೂ ಹಂಚಿಕೊಂಡ ನಟಿ ರಾಧಿಕಾ ಪಂಡಿತ್​

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಮನೆ​ ಖರೀದಿ ಮಾಡಿದ್ದರು. ಹಲವು ತಿಂಗಳ ಕಾಲ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಅವೆಲ್ಲವೂ ಪೂರ್ಣಗೊಂಡಿದ್ದು, ಜುಲೈ 1ರಂದು ಗೃಹ ಪ್ರವೇಶದ ಕಾರ್ಯಗಳು ನಡೆದಿದ್ದವು.

Radhika Pandit: ಹೊಸ ಮನೆಯ ಬಾಲ್ಕನಿ ವ್ಯೂ ಹಂಚಿಕೊಂಡ ನಟಿ ರಾಧಿಕಾ ಪಂಡಿತ್​
ರಾಧಿಕಾ ಪಂದಿತ್
TV9 Web
| Edited By: |

Updated on: Jul 20, 2021 | 2:43 PM

Share

ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ಅವರ ಕನಸಿನ ಮನೆಯ ಗೃಹ ಪ್ರವೇಶ ಈ ತಿಂಗಳ ಆರಂಭದಲ್ಲಿ ನೆರವೇರಿತ್ತು.  ಕೊವಿಡ್ ಇರುವ ಕಾರಣ ಕೇವಲ ಆಪ್ತರ ಸಮ್ಮುಖದಲ್ಲಿ​ ಗೃಹ ಪ್ರವೇಶದ ಕಾರ್ಯಗಳನ್ನು ಯಶ್-ರಾಧಿಕಾ ದಂಪತಿ ಪೂರ್ಣಗೊಳಿಸಿದ್ದರು. ಈಗ ಸಾಮಾಜಿಕ ಜಾಲತಾಣದಲ್ಲಿ ರಾಧಿಕಾ ಬಾಲ್ಕನಿಯ ಫೋಟೋ ಹಂಚಿಕೊಂಡಿದ್ದಾರೆ.

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಮನೆ​ ಖರೀದಿ ಮಾಡಿದ್ದರು. ಹಲವು ತಿಂಗಳ ಕಾಲ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಅವೆಲ್ಲವೂ ಪೂರ್ಣಗೊಂಡಿದ್ದು, ಜುಲೈ 1ರಂದು ಗೃಹ ಪ್ರವೇಶದ ಕಾರ್ಯಗಳು ನಡೆದಿದ್ದವು. ಈ ಸಂದರ್ಭದಲ್ಲಿ ಯಶ್​ ಮನೆಯ ಫೋಟೋಗಳು, ಗೃಹ ಪ್ರವೇಶ ಕಾರ್ಯಕ್ರಮದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದವು.

ಈಗ ರಾಧಿಕಾ ಪಂಡಿತ್​ ಬಾಲ್ಕನಿಯಲ್ಲಿ ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ರಾಧಿಕಾ ಪಂಡಿತ್​ ಬಾಲ್ಕನಿಯಲ್ಲಿ ನಿಂತಿದ್ದಾರೆ. ಎದುರು ದೊಡ್ಡದಾದ ಕಟ್ಟಡ ಇದೆ. ಆಗಸದಲ್ಲಿ ಸಣ್ಣದಾಗಿ ಕಾಮನಬಿಲ್ಲು ಕೂಡ ಮೂಡಿದೆ. ಈ ದೃಶ್ಯ ರಾಧಿಕಾಗೆ ಮುದ ನೀಡಿದೆ. ಹೀಗಾಗಿ, ಅಭಿಮಾನಿಗಳಿಗೂ ಅವರು ಇದನ್ನು ತೋರಿಸಿದ್ದಾರೆ.

​ರಾಧಿಕಾ ಪಂಡಿತ್​ ಚಿತ್ರರಂಗದಿಂದ ದೂರವೇ ಉಳಿದರೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿದ್ದಾರೆ. ಮಕ್ಕಳ ಪಾಲನೆಯಲ್ಲಿ ತೊಡಗಿರುವ ಅವರು ಅಭಿಮಾನಿಗಳನ್ನು ಮರೆತಿಲ್ಲ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಯಶ್​ ‘ಕೆಜಿಎಫ್​ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಿನಿಮಾ ಜುಲೈನಲ್ಲಿ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಸೆಪ್ಟೆಂಬರ್ 9ಕ್ಕೆ ಚಿತ್ರ ರಿಲೀಸ್​ ಆಗಲಿದೆ ಎನ್ನುವ ಮಾಹಿತಿ ಇದೆಯಾದರೂ ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ.

ಇದನ್ನೂ ಓದಿ: ‘ಐ ಗಾಟ್​ ಹರ್ಟ್​ ಮಮ್ಮಾ’; ಯಥರ್ವ್​​ ಎಸೆದ ಮೈಕ್​ ಬಿದ್ದಿದ್ದು ಆಯ್ರಾ ತಲೆಮೇಲೆ, ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್​

Follow Us
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ