AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಮಳೆ ಬಗ್ಗೆ ಅನಿಸಿಕೆ ಹಂಚಿಕೊಂಡ ರಾಧಿಕಾ ಪಂಡಿತ್​; ಆದರೆ ಅಭಿಮಾನಿಗಳು ಕೇಳಿದ್ದೇ ಬೇರೆ

Yash 19: ‘ಮಳೆಯಲ್ಲಿ ಒಂದು ಹಿತವಾದ ಅನುಭವ ಇದೆ..’ ಎಂಬ ಕ್ಯಾಪ್ಷನ್​ನೊಂದಿಗೆ ರಾಧಿಕಾ ಪಂಡಿತ್​ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆದರೆ ಅಭಿಮಾನಿಗಳು ‘ಯಶ್​19’ ಬಗ್ಗೆ ವಿಚಾರಿಸಿದ್ದಾರೆ.

Radhika Pandit: ಮಳೆ ಬಗ್ಗೆ ಅನಿಸಿಕೆ ಹಂಚಿಕೊಂಡ ರಾಧಿಕಾ ಪಂಡಿತ್​; ಆದರೆ ಅಭಿಮಾನಿಗಳು ಕೇಳಿದ್ದೇ ಬೇರೆ
ರಾಧಿಕಾ ಪಂಡಿತ್​ ಫ್ಯಾಮಿಲಿ ಫೋಟೋ
Follow us
ಮದನ್​ ಕುಮಾರ್​
|

Updated on: Jun 25, 2023 | 8:51 AM

ಸ್ಯಾಂಡಲ್​ವುಡ್​ ನಟಿ ರಾಧಿಕಾ ಪಂಡಿತ್​ (Radhika Pandit) ಅವರು ನಟನೆಯಿಂದ ದೂರ ಉಳಿದುಕೊಂಡಿರದ್ದರೂ ಕೂಡ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ. ಪ್ರತಿ ಭಾನುವಾರ ಅವರು ಫ್ಯಾನ್ಸ್​ಗಾಗಿ ಒಂದು ಫೋಟೋ ಹಂಚಿಕೊಳ್ಳುತ್ತಾರೆ. ಕೆಲವೊಮ್ಮೆ ಫ್ಲ್ಯಾಶ್​ಬ್ಯಾಕ್​ಗೆ ಜಾರುತ್ತಾರೆ. ಇನ್ನೂ ಕೆಲವೊಮ್ಮೆ ಫ್ಯಾಮಿಲಿ ಫೋಟೋ (Yash Family Photo) ಅಪ್​ಲೋಡ್​ ಮಾಡುತ್ತಾರೆ. ಈಗ ಮಳೆಗಾಲ. ಆ ಪ್ರಯುಕ್ತ ಅವರು ಮಳೆ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಆದರೆ ಅಭಿಮಾನಿಗಳು ಕೇಳುತ್ತಿರುವುದೇ ಬೇರೆ. ‘ಯಶ್​ ಅವರ ಮುಂದಿನ ಸಿನಿಮಾ (Yash 19) ಬಗ್ಗೆ ಅಪ್​ಡೇಟ್​ ನೀಡಿ’ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

‘ಮಳೆಯಲ್ಲಿ ಒಂದು ಹಿತವಾದ ಅನುಭವ ಇದೆ. ಅಲ್ಲವೇ? ಹೆಲೋ ಮಳೆಗಾಲವೇ..’ ಎಂಬ ಕ್ಯಾಪ್ಷನ್​ನೊಂದಿಗೆ ರಾಧಿಕಾ ಪಂಡಿತ್​ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ರಾಧಿಕಾ ಪಂಡಿತ್​ ಮತ್ತು ಯಶ್​ ಜೊತೆ ಮಕ್ಕಳಾದ ಯಥರ್ವ್​ ಹಾಗೂ ಆಯ್ರಾ ಇದ್ದಾರೆ. ಎಲ್ಲರೂ ಆಕಾಶದ ಕಡೆ ನೋಡುತ್ತಿದ್ದಾರೆ. ಆಗಸದಲ್ಲಿ ಕರಿಮೋಡ ಆವರಿಸಿದೆ. ಇನ್ನೇನು ಜೋರಾಗಿ ಮಳೆ ಸುರಿಯಲಿದೆ ಎಂಬ ಸಂದರ್ಭದಲ್ಲಿ ಈ ಫೋಟೋ ಕ್ಲಿಕ್ಕಿಸಿದಂತಿದೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಮಳೆ ಬರುವ ಹಾಗಿದೆ..’ ಹಾಡನ್ನು ಫ್ಯಾನ್ಸ್​ ಮತ್ತೆ ನೆನಪಿಸಿಕೊಂಡಿದ್ದಾರೆ. ಅದಕ್ಕಿಂತಲೂ ಹೆಚ್ಚು ಕಮೆಂಟ್ ಬಂದಿರುವುದು ‘ಯಶ್​19’ ಬಗ್ಗೆ.

‘ಕೆಜಿಎಫ್: ಚಾಪ್ಟರ್​ 2’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಬೇರೆ ಯಾವುದೇ ಹೀರೋ ಆಗಿದ್ದಿದ್ದರೆ ಕೂಡಲೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿದ್ದರು. ಆದರೆ ಯಶ್​ ಹಾಗೆ ಮಾಡಲಿಲ್ಲ. ‘ಕೆಜಿಎಫ್​ 2’ ತೆರೆಕಂಡು ಒಂದು ವರ್ಷಕ್ಕೂ ಹೆಚ್ಚು ಸಮಯ ಆಗಿದ್ದರೂ ಕೂಡ ಅವರು ಹೊಸ ಚಿತ್ರ ಘೋಷಿಸಿಲ್ಲ. ಆದಷ್ಟು ಬೇಗ ‘ಯಶ್​19’ ಬಗ್ಗೆ ಮಾಹಿತಿ ಹೊರಬೀಳಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಹಾಗಾಗಿ ರಾಧಿಕಾ ಪಂಡಿತ್​ ಮಾಡುವ ಎಲ್ಲ ಪೋಸ್ಟ್​ಗಳಿಗೂ ಕಮೆಂಟ್​ ಮಾಡುವ ಅಭಿಮಾನಿಗಳು ಯಶ್​ ಅವರ ಮುಂದಿನ ಸಿನಿಮಾ ಬಗ್ಗೆ ವಿಚಾರಿಸುತ್ತಾರೆ.

ಇದನ್ನೂ ಓದಿ: Adipurush: ರಾಮ-ಸೀತೆ ಗೆಟಪ್​ನಲ್ಲಿ ಯಶ್​-ರಾಧಿಕಾ ಪಂಡಿತ್​; ವೈರಲ್​ ಆಗಿದೆ ಫೋಟೋ

ಒಂದು ಕಾಲದಲ್ಲಿ ರಾಧಿಕಾ ಪಂಡಿತ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಒಪ್ಪಿಕೊಳ್ಳುತ್ತಿದ್ದರು. ಮದುವೆ ಆದ ಬಳಿಕ ಅವರು ಸಿನಿಮಾ ಮಾಡುವುದು ಕಡಿಮೆ ಆಯಿತು. ಇಬ್ಬರು ಮಕ್ಕಳ ಆರೈಕೆಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಮತ್ತೆ ರಾಧಿಕಾ ಪಂಡಿತ್​ ಅವರು ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಬಯಕೆ. ಸೂಕ್ತವಾದ ಕಥೆ ಮತ್ತು ಪಾತ್ರದೊಂದಿಗೆ ಅವರು ಕಂಬ್ಯಾಕ್​ ಮಾಡಲಿ ಎಂದು ಫ್ಯಾನ್ಸ್​ ಆಸೆ ಪಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್