AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಮಳೆ ಬಗ್ಗೆ ಅನಿಸಿಕೆ ಹಂಚಿಕೊಂಡ ರಾಧಿಕಾ ಪಂಡಿತ್​; ಆದರೆ ಅಭಿಮಾನಿಗಳು ಕೇಳಿದ್ದೇ ಬೇರೆ

Yash 19: ‘ಮಳೆಯಲ್ಲಿ ಒಂದು ಹಿತವಾದ ಅನುಭವ ಇದೆ..’ ಎಂಬ ಕ್ಯಾಪ್ಷನ್​ನೊಂದಿಗೆ ರಾಧಿಕಾ ಪಂಡಿತ್​ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆದರೆ ಅಭಿಮಾನಿಗಳು ‘ಯಶ್​19’ ಬಗ್ಗೆ ವಿಚಾರಿಸಿದ್ದಾರೆ.

Radhika Pandit: ಮಳೆ ಬಗ್ಗೆ ಅನಿಸಿಕೆ ಹಂಚಿಕೊಂಡ ರಾಧಿಕಾ ಪಂಡಿತ್​; ಆದರೆ ಅಭಿಮಾನಿಗಳು ಕೇಳಿದ್ದೇ ಬೇರೆ
ರಾಧಿಕಾ ಪಂಡಿತ್​ ಫ್ಯಾಮಿಲಿ ಫೋಟೋ
ಮದನ್​ ಕುಮಾರ್​
|

Updated on: Jun 25, 2023 | 8:51 AM

Share

ಸ್ಯಾಂಡಲ್​ವುಡ್​ ನಟಿ ರಾಧಿಕಾ ಪಂಡಿತ್​ (Radhika Pandit) ಅವರು ನಟನೆಯಿಂದ ದೂರ ಉಳಿದುಕೊಂಡಿರದ್ದರೂ ಕೂಡ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ. ಪ್ರತಿ ಭಾನುವಾರ ಅವರು ಫ್ಯಾನ್ಸ್​ಗಾಗಿ ಒಂದು ಫೋಟೋ ಹಂಚಿಕೊಳ್ಳುತ್ತಾರೆ. ಕೆಲವೊಮ್ಮೆ ಫ್ಲ್ಯಾಶ್​ಬ್ಯಾಕ್​ಗೆ ಜಾರುತ್ತಾರೆ. ಇನ್ನೂ ಕೆಲವೊಮ್ಮೆ ಫ್ಯಾಮಿಲಿ ಫೋಟೋ (Yash Family Photo) ಅಪ್​ಲೋಡ್​ ಮಾಡುತ್ತಾರೆ. ಈಗ ಮಳೆಗಾಲ. ಆ ಪ್ರಯುಕ್ತ ಅವರು ಮಳೆ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಆದರೆ ಅಭಿಮಾನಿಗಳು ಕೇಳುತ್ತಿರುವುದೇ ಬೇರೆ. ‘ಯಶ್​ ಅವರ ಮುಂದಿನ ಸಿನಿಮಾ (Yash 19) ಬಗ್ಗೆ ಅಪ್​ಡೇಟ್​ ನೀಡಿ’ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

‘ಮಳೆಯಲ್ಲಿ ಒಂದು ಹಿತವಾದ ಅನುಭವ ಇದೆ. ಅಲ್ಲವೇ? ಹೆಲೋ ಮಳೆಗಾಲವೇ..’ ಎಂಬ ಕ್ಯಾಪ್ಷನ್​ನೊಂದಿಗೆ ರಾಧಿಕಾ ಪಂಡಿತ್​ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ರಾಧಿಕಾ ಪಂಡಿತ್​ ಮತ್ತು ಯಶ್​ ಜೊತೆ ಮಕ್ಕಳಾದ ಯಥರ್ವ್​ ಹಾಗೂ ಆಯ್ರಾ ಇದ್ದಾರೆ. ಎಲ್ಲರೂ ಆಕಾಶದ ಕಡೆ ನೋಡುತ್ತಿದ್ದಾರೆ. ಆಗಸದಲ್ಲಿ ಕರಿಮೋಡ ಆವರಿಸಿದೆ. ಇನ್ನೇನು ಜೋರಾಗಿ ಮಳೆ ಸುರಿಯಲಿದೆ ಎಂಬ ಸಂದರ್ಭದಲ್ಲಿ ಈ ಫೋಟೋ ಕ್ಲಿಕ್ಕಿಸಿದಂತಿದೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಮಳೆ ಬರುವ ಹಾಗಿದೆ..’ ಹಾಡನ್ನು ಫ್ಯಾನ್ಸ್​ ಮತ್ತೆ ನೆನಪಿಸಿಕೊಂಡಿದ್ದಾರೆ. ಅದಕ್ಕಿಂತಲೂ ಹೆಚ್ಚು ಕಮೆಂಟ್ ಬಂದಿರುವುದು ‘ಯಶ್​19’ ಬಗ್ಗೆ.

‘ಕೆಜಿಎಫ್: ಚಾಪ್ಟರ್​ 2’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಬೇರೆ ಯಾವುದೇ ಹೀರೋ ಆಗಿದ್ದಿದ್ದರೆ ಕೂಡಲೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿದ್ದರು. ಆದರೆ ಯಶ್​ ಹಾಗೆ ಮಾಡಲಿಲ್ಲ. ‘ಕೆಜಿಎಫ್​ 2’ ತೆರೆಕಂಡು ಒಂದು ವರ್ಷಕ್ಕೂ ಹೆಚ್ಚು ಸಮಯ ಆಗಿದ್ದರೂ ಕೂಡ ಅವರು ಹೊಸ ಚಿತ್ರ ಘೋಷಿಸಿಲ್ಲ. ಆದಷ್ಟು ಬೇಗ ‘ಯಶ್​19’ ಬಗ್ಗೆ ಮಾಹಿತಿ ಹೊರಬೀಳಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಹಾಗಾಗಿ ರಾಧಿಕಾ ಪಂಡಿತ್​ ಮಾಡುವ ಎಲ್ಲ ಪೋಸ್ಟ್​ಗಳಿಗೂ ಕಮೆಂಟ್​ ಮಾಡುವ ಅಭಿಮಾನಿಗಳು ಯಶ್​ ಅವರ ಮುಂದಿನ ಸಿನಿಮಾ ಬಗ್ಗೆ ವಿಚಾರಿಸುತ್ತಾರೆ.

ಇದನ್ನೂ ಓದಿ: Adipurush: ರಾಮ-ಸೀತೆ ಗೆಟಪ್​ನಲ್ಲಿ ಯಶ್​-ರಾಧಿಕಾ ಪಂಡಿತ್​; ವೈರಲ್​ ಆಗಿದೆ ಫೋಟೋ

ಒಂದು ಕಾಲದಲ್ಲಿ ರಾಧಿಕಾ ಪಂಡಿತ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಒಪ್ಪಿಕೊಳ್ಳುತ್ತಿದ್ದರು. ಮದುವೆ ಆದ ಬಳಿಕ ಅವರು ಸಿನಿಮಾ ಮಾಡುವುದು ಕಡಿಮೆ ಆಯಿತು. ಇಬ್ಬರು ಮಕ್ಕಳ ಆರೈಕೆಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಮತ್ತೆ ರಾಧಿಕಾ ಪಂಡಿತ್​ ಅವರು ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಬಯಕೆ. ಸೂಕ್ತವಾದ ಕಥೆ ಮತ್ತು ಪಾತ್ರದೊಂದಿಗೆ ಅವರು ಕಂಬ್ಯಾಕ್​ ಮಾಡಲಿ ಎಂದು ಫ್ಯಾನ್ಸ್​ ಆಸೆ ಪಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?