AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಮಳೆ ಬಗ್ಗೆ ಅನಿಸಿಕೆ ಹಂಚಿಕೊಂಡ ರಾಧಿಕಾ ಪಂಡಿತ್​; ಆದರೆ ಅಭಿಮಾನಿಗಳು ಕೇಳಿದ್ದೇ ಬೇರೆ

Yash 19: ‘ಮಳೆಯಲ್ಲಿ ಒಂದು ಹಿತವಾದ ಅನುಭವ ಇದೆ..’ ಎಂಬ ಕ್ಯಾಪ್ಷನ್​ನೊಂದಿಗೆ ರಾಧಿಕಾ ಪಂಡಿತ್​ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆದರೆ ಅಭಿಮಾನಿಗಳು ‘ಯಶ್​19’ ಬಗ್ಗೆ ವಿಚಾರಿಸಿದ್ದಾರೆ.

Radhika Pandit: ಮಳೆ ಬಗ್ಗೆ ಅನಿಸಿಕೆ ಹಂಚಿಕೊಂಡ ರಾಧಿಕಾ ಪಂಡಿತ್​; ಆದರೆ ಅಭಿಮಾನಿಗಳು ಕೇಳಿದ್ದೇ ಬೇರೆ
ರಾಧಿಕಾ ಪಂಡಿತ್​ ಫ್ಯಾಮಿಲಿ ಫೋಟೋ
ಮದನ್​ ಕುಮಾರ್​
|

Updated on: Jun 25, 2023 | 8:51 AM

Share

ಸ್ಯಾಂಡಲ್​ವುಡ್​ ನಟಿ ರಾಧಿಕಾ ಪಂಡಿತ್​ (Radhika Pandit) ಅವರು ನಟನೆಯಿಂದ ದೂರ ಉಳಿದುಕೊಂಡಿರದ್ದರೂ ಕೂಡ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ. ಪ್ರತಿ ಭಾನುವಾರ ಅವರು ಫ್ಯಾನ್ಸ್​ಗಾಗಿ ಒಂದು ಫೋಟೋ ಹಂಚಿಕೊಳ್ಳುತ್ತಾರೆ. ಕೆಲವೊಮ್ಮೆ ಫ್ಲ್ಯಾಶ್​ಬ್ಯಾಕ್​ಗೆ ಜಾರುತ್ತಾರೆ. ಇನ್ನೂ ಕೆಲವೊಮ್ಮೆ ಫ್ಯಾಮಿಲಿ ಫೋಟೋ (Yash Family Photo) ಅಪ್​ಲೋಡ್​ ಮಾಡುತ್ತಾರೆ. ಈಗ ಮಳೆಗಾಲ. ಆ ಪ್ರಯುಕ್ತ ಅವರು ಮಳೆ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಆದರೆ ಅಭಿಮಾನಿಗಳು ಕೇಳುತ್ತಿರುವುದೇ ಬೇರೆ. ‘ಯಶ್​ ಅವರ ಮುಂದಿನ ಸಿನಿಮಾ (Yash 19) ಬಗ್ಗೆ ಅಪ್​ಡೇಟ್​ ನೀಡಿ’ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

‘ಮಳೆಯಲ್ಲಿ ಒಂದು ಹಿತವಾದ ಅನುಭವ ಇದೆ. ಅಲ್ಲವೇ? ಹೆಲೋ ಮಳೆಗಾಲವೇ..’ ಎಂಬ ಕ್ಯಾಪ್ಷನ್​ನೊಂದಿಗೆ ರಾಧಿಕಾ ಪಂಡಿತ್​ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ರಾಧಿಕಾ ಪಂಡಿತ್​ ಮತ್ತು ಯಶ್​ ಜೊತೆ ಮಕ್ಕಳಾದ ಯಥರ್ವ್​ ಹಾಗೂ ಆಯ್ರಾ ಇದ್ದಾರೆ. ಎಲ್ಲರೂ ಆಕಾಶದ ಕಡೆ ನೋಡುತ್ತಿದ್ದಾರೆ. ಆಗಸದಲ್ಲಿ ಕರಿಮೋಡ ಆವರಿಸಿದೆ. ಇನ್ನೇನು ಜೋರಾಗಿ ಮಳೆ ಸುರಿಯಲಿದೆ ಎಂಬ ಸಂದರ್ಭದಲ್ಲಿ ಈ ಫೋಟೋ ಕ್ಲಿಕ್ಕಿಸಿದಂತಿದೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಮಳೆ ಬರುವ ಹಾಗಿದೆ..’ ಹಾಡನ್ನು ಫ್ಯಾನ್ಸ್​ ಮತ್ತೆ ನೆನಪಿಸಿಕೊಂಡಿದ್ದಾರೆ. ಅದಕ್ಕಿಂತಲೂ ಹೆಚ್ಚು ಕಮೆಂಟ್ ಬಂದಿರುವುದು ‘ಯಶ್​19’ ಬಗ್ಗೆ.

‘ಕೆಜಿಎಫ್: ಚಾಪ್ಟರ್​ 2’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಬೇರೆ ಯಾವುದೇ ಹೀರೋ ಆಗಿದ್ದಿದ್ದರೆ ಕೂಡಲೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿದ್ದರು. ಆದರೆ ಯಶ್​ ಹಾಗೆ ಮಾಡಲಿಲ್ಲ. ‘ಕೆಜಿಎಫ್​ 2’ ತೆರೆಕಂಡು ಒಂದು ವರ್ಷಕ್ಕೂ ಹೆಚ್ಚು ಸಮಯ ಆಗಿದ್ದರೂ ಕೂಡ ಅವರು ಹೊಸ ಚಿತ್ರ ಘೋಷಿಸಿಲ್ಲ. ಆದಷ್ಟು ಬೇಗ ‘ಯಶ್​19’ ಬಗ್ಗೆ ಮಾಹಿತಿ ಹೊರಬೀಳಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಹಾಗಾಗಿ ರಾಧಿಕಾ ಪಂಡಿತ್​ ಮಾಡುವ ಎಲ್ಲ ಪೋಸ್ಟ್​ಗಳಿಗೂ ಕಮೆಂಟ್​ ಮಾಡುವ ಅಭಿಮಾನಿಗಳು ಯಶ್​ ಅವರ ಮುಂದಿನ ಸಿನಿಮಾ ಬಗ್ಗೆ ವಿಚಾರಿಸುತ್ತಾರೆ.

ಇದನ್ನೂ ಓದಿ: Adipurush: ರಾಮ-ಸೀತೆ ಗೆಟಪ್​ನಲ್ಲಿ ಯಶ್​-ರಾಧಿಕಾ ಪಂಡಿತ್​; ವೈರಲ್​ ಆಗಿದೆ ಫೋಟೋ

ಒಂದು ಕಾಲದಲ್ಲಿ ರಾಧಿಕಾ ಪಂಡಿತ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಒಪ್ಪಿಕೊಳ್ಳುತ್ತಿದ್ದರು. ಮದುವೆ ಆದ ಬಳಿಕ ಅವರು ಸಿನಿಮಾ ಮಾಡುವುದು ಕಡಿಮೆ ಆಯಿತು. ಇಬ್ಬರು ಮಕ್ಕಳ ಆರೈಕೆಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಮತ್ತೆ ರಾಧಿಕಾ ಪಂಡಿತ್​ ಅವರು ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಬಯಕೆ. ಸೂಕ್ತವಾದ ಕಥೆ ಮತ್ತು ಪಾತ್ರದೊಂದಿಗೆ ಅವರು ಕಂಬ್ಯಾಕ್​ ಮಾಡಲಿ ಎಂದು ಫ್ಯಾನ್ಸ್​ ಆಸೆ ಪಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!