AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ವೈಯಕ್ತಿಕವಾಗಿ ಇರೋದೇ ಓರ್ವ ಫೋಟೋಗ್ರಾಫರ್’; ಹೆಸರು ರಿವೀಲ್ ಮಾಡಿದ ರಾಧಿಕಾ ಪಂಡಿತ್

Radhika Pandit: ರಾಧಿಕಾ ಪಂಡಿತ್ ವಿದೇಶಕ್ಕೆ ತೆರಳಿದ್ದ ಸಂದರ್ಭದ ಫೋಟೋ ಹಂಚಿಕೊಂಡು ಅದಕ್ಕೆ ಅವರು ತಮ್ಮದೇ ಸ್ಟೈಲ್​ನಲ್ಲಿ ಕ್ಯಾಪ್ಶನ್ ನೀಡಿದ್ದಾರೆ.

‘ನನಗೆ ವೈಯಕ್ತಿಕವಾಗಿ ಇರೋದೇ ಓರ್ವ ಫೋಟೋಗ್ರಾಫರ್’; ಹೆಸರು ರಿವೀಲ್ ಮಾಡಿದ ರಾಧಿಕಾ ಪಂಡಿತ್
ರಾಧಿಕಾ ಪಂಡಿತ್
ರಾಜೇಶ್ ದುಗ್ಗುಮನೆ
|

Updated on:Apr 10, 2023 | 12:05 PM

Share

ರಾಧಿಕಾ ಪಂಡಿತ್ (Radhika Pandit) ಅವರ ಸಂಪೂರ್ಣ ಗಮನ ಕುಟುಂಬದ ಮೇಲಿದೆ. ಮದುವೆ ಆದ ಬಳಿಕ ಅವರು ನಟನೆಯಿಂದ ಅಂತರ ಕಾಯ್ದುಕೊಂಡರು. ಅವರು ಚಿತ್ರರಂಗಕ್ಕೆ ಮರಳಬೇಕು ಅನ್ನೋದು ಅನೇಕರ ಕೋರಿಕೆ. ಆದರೆ, ಈ ಕೋರಿಕೆ ಸದ್ಯಕ್ಕಂತೂ ಈಡೇರುವುದು ಅನುಮಾನವೇ. ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಬೇಕು ಎನ್ನುವ ಕಾರಣಕ್ಕೆ ರಾಧಿಕಾ ಪಂಡಿತ್ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ರಾಧಿಕಾ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಇದಕ್ಕೆ ಅವರು ವಿಶೇಷ ಕ್ಯಾಪ್ಶನ್ ಒಂದನ್ನು ನಿಡಿದ್ದಾರೆ. ಈ ಅಡಿಬರಹದಲ್ಲಿ ತಮ್ಮ ಫೋಟೋಗ್ರಾಫರ್ ಯಾರು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ.

2008ರಲ್ಲಿ ತೆರೆಗೆ ಬಂದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ರಾಧಿಕಾ ಪಂಡಿತ್ ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಸಿನಿಮಾದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು. ನಂತರ ಪುನೀತ್ ರಾಜ್​ಕುಮಾರ್, ಧ್ರುವ ಸರ್ಜಾ ಮೊದಲಾದ ಸ್ಟಾರ್ ಹೀರೋ ಜೊತೆ ತೆರೆಹಂಚಿಕೊಂಡರು. ಯಶ್ ಹಾಗೂ ರಾಧಿಕಾ ಪಂಡಿತ್ ಜೋಡಿ ಹಿಟ್ ಕಾಂಬಿನೇಷನ್ ಎನಿಸಿಕೊಂಡಿದೆ. ಇವರು ಒಟ್ಟಾಗಿ ನಟಿಸಿದ ‘ಮೊಗ್ಗಿನ ಮನಸು’, ‘ಮಿಸ್ಟರ್ ಆ್ಯಂಡ್ ಮಿಸಸ್​ ರಾಮಾಚಾರಿ’, ‘ಸಂತು ಸ್ಟ್ರೇಟ್ ಫಾರ್ವರ್ಡ್​​’ ಚಿತ್ರಗಳು ಯಶಸ್ಸು ಕಂಡವು.

2016ರಲ್ಲಿ ಯಶ್ ಹಾಗೂ ರಾಧಿಕಾ ಪಂಡಿತ್ ಮದುವೆ ನೆರವೇರಿತು. ಆ ಬಳಿಕ ರಾಧಿಕಾ ನಟನೆಯಿಂದ ಒಂದು ಗ್ಯಾಪ್ ತೆಗೆದುಕೊಂಡರು. ಅವರು ನಟಿಸಿರುವ ‘ಆದಿಲಕ್ಷ್ಮೀ ಪುರಾಣ’ ಸಿನಿಮಾ 2019ರಲ್ಲಿ ರಿಲೀಸ್ ಆಯಿತು. ಆ ಬಳಿಕ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಸದ್ಯ ಕುಟುಂಬದ ಜೊತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಆಗಾಗ ಯಶ್ ಜೊತೆ ಫಾರಿನ್​ ಟ್ರಿಪ್ ತೆರಳುತ್ತಾರೆ. ಈಗ ರಾಧಿಕಾ ಪಂಡಿತ್ ವಿದೇಶಕ್ಕೆ ತೆರಳಿದ್ದ ಸಂದರ್ಭದ ಫೋಟೋ ಹಂಚಿಕೊಂಡು ಅದಕ್ಕೆ ಅವರು ತಮ್ಮದೇ ಸ್ಟೈಲ್​ನಲ್ಲಿ ಕ್ಯಾಪ್ಶನ್ ನೀಡಿದ್ದಾರೆ.

ಇದನ್ನೂ ಓದಿ: ‘ಅತ್ತಿಗೆ.. Yash19 ಅಪ್​ಡೇಟ್ ಕೊಡಿ, ಇಲ್ದಿದ್ರೆ ಧರಣಿ ಕೂರ್ತಿವಿ’; ರಾಧಿಕಾ ಪಂಡಿತ್​ಗೆ ನೇರವಾಗಿ ಹೇಳಿದ ಫ್ಯಾನ್ಸ್​

‘ನಿಮ್ಮ ಇರುವಿಕೆಗೆ ಬೆಲೆ ಕೊಡುವ ಜನರನ್ನು ಬಿಟ್ಟುಕೊಡಬೇಡಿ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಇದರ ಜೊತೆಗೆ ‘ಫೋಟೋ ಯಾರು ತೆಗೆದಿದ್ದು ಎಂದು ಕೇಳುವ ಎಲ್ಲರಿಗೂ ಇದು ಉತ್ತರ. ನನಗೆ ವೈಯಕ್ತಿಕವಾಗಿ ಇರೋದು ಒಬ್ಬನೇ ಫೋಟೋಗ್ರಾಫರ್’ ಎಂದಿದ್ದಾರೆ ರಾಧಿಕಾ ಪಂಡಿತ್. ಈ ಮೂಲಕ ತಮ್ಮ ಫೋಟೋಗ್ರಾಫರ್ ಯಶ್ ಎಂಬುದನ್ನು ರಿವೀಲ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:27 am, Mon, 10 April 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ