AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ವೈಯಕ್ತಿಕವಾಗಿ ಇರೋದೇ ಓರ್ವ ಫೋಟೋಗ್ರಾಫರ್’; ಹೆಸರು ರಿವೀಲ್ ಮಾಡಿದ ರಾಧಿಕಾ ಪಂಡಿತ್

Radhika Pandit: ರಾಧಿಕಾ ಪಂಡಿತ್ ವಿದೇಶಕ್ಕೆ ತೆರಳಿದ್ದ ಸಂದರ್ಭದ ಫೋಟೋ ಹಂಚಿಕೊಂಡು ಅದಕ್ಕೆ ಅವರು ತಮ್ಮದೇ ಸ್ಟೈಲ್​ನಲ್ಲಿ ಕ್ಯಾಪ್ಶನ್ ನೀಡಿದ್ದಾರೆ.

‘ನನಗೆ ವೈಯಕ್ತಿಕವಾಗಿ ಇರೋದೇ ಓರ್ವ ಫೋಟೋಗ್ರಾಫರ್’; ಹೆಸರು ರಿವೀಲ್ ಮಾಡಿದ ರಾಧಿಕಾ ಪಂಡಿತ್
ರಾಧಿಕಾ ಪಂಡಿತ್
ರಾಜೇಶ್ ದುಗ್ಗುಮನೆ
|

Updated on:Apr 10, 2023 | 12:05 PM

Share

ರಾಧಿಕಾ ಪಂಡಿತ್ (Radhika Pandit) ಅವರ ಸಂಪೂರ್ಣ ಗಮನ ಕುಟುಂಬದ ಮೇಲಿದೆ. ಮದುವೆ ಆದ ಬಳಿಕ ಅವರು ನಟನೆಯಿಂದ ಅಂತರ ಕಾಯ್ದುಕೊಂಡರು. ಅವರು ಚಿತ್ರರಂಗಕ್ಕೆ ಮರಳಬೇಕು ಅನ್ನೋದು ಅನೇಕರ ಕೋರಿಕೆ. ಆದರೆ, ಈ ಕೋರಿಕೆ ಸದ್ಯಕ್ಕಂತೂ ಈಡೇರುವುದು ಅನುಮಾನವೇ. ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಬೇಕು ಎನ್ನುವ ಕಾರಣಕ್ಕೆ ರಾಧಿಕಾ ಪಂಡಿತ್ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ರಾಧಿಕಾ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಇದಕ್ಕೆ ಅವರು ವಿಶೇಷ ಕ್ಯಾಪ್ಶನ್ ಒಂದನ್ನು ನಿಡಿದ್ದಾರೆ. ಈ ಅಡಿಬರಹದಲ್ಲಿ ತಮ್ಮ ಫೋಟೋಗ್ರಾಫರ್ ಯಾರು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ.

2008ರಲ್ಲಿ ತೆರೆಗೆ ಬಂದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ರಾಧಿಕಾ ಪಂಡಿತ್ ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಸಿನಿಮಾದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು. ನಂತರ ಪುನೀತ್ ರಾಜ್​ಕುಮಾರ್, ಧ್ರುವ ಸರ್ಜಾ ಮೊದಲಾದ ಸ್ಟಾರ್ ಹೀರೋ ಜೊತೆ ತೆರೆಹಂಚಿಕೊಂಡರು. ಯಶ್ ಹಾಗೂ ರಾಧಿಕಾ ಪಂಡಿತ್ ಜೋಡಿ ಹಿಟ್ ಕಾಂಬಿನೇಷನ್ ಎನಿಸಿಕೊಂಡಿದೆ. ಇವರು ಒಟ್ಟಾಗಿ ನಟಿಸಿದ ‘ಮೊಗ್ಗಿನ ಮನಸು’, ‘ಮಿಸ್ಟರ್ ಆ್ಯಂಡ್ ಮಿಸಸ್​ ರಾಮಾಚಾರಿ’, ‘ಸಂತು ಸ್ಟ್ರೇಟ್ ಫಾರ್ವರ್ಡ್​​’ ಚಿತ್ರಗಳು ಯಶಸ್ಸು ಕಂಡವು.

2016ರಲ್ಲಿ ಯಶ್ ಹಾಗೂ ರಾಧಿಕಾ ಪಂಡಿತ್ ಮದುವೆ ನೆರವೇರಿತು. ಆ ಬಳಿಕ ರಾಧಿಕಾ ನಟನೆಯಿಂದ ಒಂದು ಗ್ಯಾಪ್ ತೆಗೆದುಕೊಂಡರು. ಅವರು ನಟಿಸಿರುವ ‘ಆದಿಲಕ್ಷ್ಮೀ ಪುರಾಣ’ ಸಿನಿಮಾ 2019ರಲ್ಲಿ ರಿಲೀಸ್ ಆಯಿತು. ಆ ಬಳಿಕ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಸದ್ಯ ಕುಟುಂಬದ ಜೊತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಆಗಾಗ ಯಶ್ ಜೊತೆ ಫಾರಿನ್​ ಟ್ರಿಪ್ ತೆರಳುತ್ತಾರೆ. ಈಗ ರಾಧಿಕಾ ಪಂಡಿತ್ ವಿದೇಶಕ್ಕೆ ತೆರಳಿದ್ದ ಸಂದರ್ಭದ ಫೋಟೋ ಹಂಚಿಕೊಂಡು ಅದಕ್ಕೆ ಅವರು ತಮ್ಮದೇ ಸ್ಟೈಲ್​ನಲ್ಲಿ ಕ್ಯಾಪ್ಶನ್ ನೀಡಿದ್ದಾರೆ.

ಇದನ್ನೂ ಓದಿ: ‘ಅತ್ತಿಗೆ.. Yash19 ಅಪ್​ಡೇಟ್ ಕೊಡಿ, ಇಲ್ದಿದ್ರೆ ಧರಣಿ ಕೂರ್ತಿವಿ’; ರಾಧಿಕಾ ಪಂಡಿತ್​ಗೆ ನೇರವಾಗಿ ಹೇಳಿದ ಫ್ಯಾನ್ಸ್​

‘ನಿಮ್ಮ ಇರುವಿಕೆಗೆ ಬೆಲೆ ಕೊಡುವ ಜನರನ್ನು ಬಿಟ್ಟುಕೊಡಬೇಡಿ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಇದರ ಜೊತೆಗೆ ‘ಫೋಟೋ ಯಾರು ತೆಗೆದಿದ್ದು ಎಂದು ಕೇಳುವ ಎಲ್ಲರಿಗೂ ಇದು ಉತ್ತರ. ನನಗೆ ವೈಯಕ್ತಿಕವಾಗಿ ಇರೋದು ಒಬ್ಬನೇ ಫೋಟೋಗ್ರಾಫರ್’ ಎಂದಿದ್ದಾರೆ ರಾಧಿಕಾ ಪಂಡಿತ್. ಈ ಮೂಲಕ ತಮ್ಮ ಫೋಟೋಗ್ರಾಫರ್ ಯಶ್ ಎಂಬುದನ್ನು ರಿವೀಲ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:27 am, Mon, 10 April 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್