AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಮಾನ್ಸೂನ್​ ಆರಂಭದ ಬೆನ್ನಲ್ಲೇ ಹಳೆ ನೆನಪು ಹಂಚಿಕೊಂಡ ರಾಧಿಕಾ ಪಂಡಿತ್

ಮಳೆಗಾಲ ಎಂದರೆ ಬಹುತೇಕರಿಗೆ ಇಷ್ಟವಾಗುತ್ತದೆ. ಮಳೆ ಬರುತ್ತಿರುವಾಗ ಬಾಲ್ಕನಿಯಲ್ಲಿ ನಿಂತು ಮಳೆ ಸುರಿಯುವುದನ್ನು ನೋಡುವುದು ಅನೇಕರಿಗೆ ಖುಷಿಯ ವಿಚಾರ. ನಟಿ ರಾಧಿಕಾ ಪಂಡಿತ್​ಗೂ ಮಳೆ ಎಂದರೆ ಸಾಕಷ್ಟು ಪ್ರೀತಿಯಂತೆ.

Radhika Pandit: ಮಾನ್ಸೂನ್​ ಆರಂಭದ ಬೆನ್ನಲ್ಲೇ ಹಳೆ ನೆನಪು ಹಂಚಿಕೊಂಡ ರಾಧಿಕಾ ಪಂಡಿತ್
ರಾಧಿಕಾ ಪಂಡಿತ್
ರಾಜೇಶ್ ದುಗ್ಗುಮನೆ
|

Updated on: Jun 16, 2021 | 8:36 PM

Share

ಮಾನ್ಸೂನ್​ ಆರಂಭವಾಗಿದೆ. ಪರಿಣಾಮ, ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮಳೆ ಆಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಈ ಸಂದರ್ಭದಲ್ಲಿ ನಟಿ ರಾಧಿಕಾ ಪಂಡಿತ್​ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಮಳೆಗಾಲ ಎಂದರೆ ಬಹುತೇಕರಿಗೆ ಇಷ್ಟವಾಗುತ್ತದೆ. ಮಳೆ ಬರುತ್ತಿರುವಾಗ ಬಾಲ್ಕನಿಯಲ್ಲಿ ನಿಂತು ಮಳೆ ಸುರಿಯುವುದನ್ನು ನೋಡುವುದು ಅನೇಕರಿಗೆ ಖುಷಿಯ ವಿಚಾರ. ನಟಿ ರಾಧಿಕಾ ಪಂಡಿತ್​ಗೂ ಮಳೆ ಎಂದರೆ ಸಾಕಷ್ಟು ಪ್ರೀತಿಯಂತೆ. ಈ ಕಾರಣಕ್ಕೆ ಅವರು ಮೋಡ ಕವಿದ ವಾತಾವರಣದಲ್ಲಿ ಬಾಲ್ಕನಿಯಲ್ಲಿ ನಿಂತು ಫೋಟೋ ಹಂಚಿಕೊಂಡಿದ್ದಾರೆ. ಅಲ್ಲದೆ, ಅದಕ್ಕೆ ಕ್ಯಾಪ್ಶನ್​ಕೂಡ ನೀಡಿದ್ದಾರೆ.

‘ಹೆಲ್ಲೋ ಮಾನ್ಸೂನ್​. ಮಳೆ ಅನ್ನೋದು ತುಂಬಾನೇ ಸುಂದರವಾದುದು. ಸಂತೋಷವಿರಲಿ ಅಥವಾ ದುಃಖವೇ ಇರಲಿ ಒಟ್ಟಿನಲ್ಲಿ ಮಳೆ ದೃಶ್ಯ ಇಲ್ಲದ ಸಿನಿಮಾದಲ್ಲಿ ನಟಿಸಿದ್ದು ನನಗೆ ನೆನಪಿಲ್ಲ’ ಎಂದು ತಮ್ಮ ವೃತ್ತಿ ಜೀವನವನ್ನು ನೆನಪಿಸಿಕೊಂಡಿದ್ದಾರೆ. ಈ ಮೂಲಕ ಮಳೆ ಎಂದರೆ ಎಷ್ಟು ಪ್ರೀತಿ ಎಂಬುದನ್ನು ರಾಧಿಕಾ ನೆನೆದಿದ್ದಾರೆ.

ಇತ್ತೀಚೆಗೆ ಸಿನಿಮಾ ಕಾರ್ಮಿಕರಿಗೆ ಯಶ್ ದೊಡ್ಡ ಮೊತ್ತದ ಸಹಾಯ ಮಾಡಿದ್ದರು. ಇದಾದ ಬೆನ್ನಲ್ಲೇ ರಾಧಿಕಾ ಅಭಿಮಾನಿಗಳಲ್ಲಿ ಭರವಸೆ ಮೂಡುವ ರೀತಿಯಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದರು. ‘ಇದು ಕಷ್ಟದ ಸಮಯ. ನಾವೆಲ್ಲರೂ ತುಂಬ ನೋವು ಅನುಭವಿಸಿದ್ದೇವೆ. ಆತ್ಮೀಯರನ್ನು ಕಳೆದುಕೊಂಡಿದ್ದೇವೆ. ನಮ್ಮೆಲ್ಲರಿಗೂ ಭಯ, ಹತಾಶೆ ಕಾಡುತ್ತಿದೆ. ನಾಳೆ ಏನಾಗುತ್ತದೋ ಎಂಬ ಆತಂಕ ಇದೆ ಎಂಬುದು ನನಗೆ ತಿಳಿದಿದೆ. ಆದರೆ ದಯವಿಟ್ಟು ಒಂದು ಮಾತನ್ನು ಪ್ರತಿ ದಿನ ನಿಮಗೆ ನೀವೇ ಹೇಳಿಕೊಳ್ಳಿ. ಪರಿಸ್ಥಿತಿ ಎಷ್ಟೇ ಕೆಟ್ಟದಾಗಿದ್ದರೂ ನಾವು ಭರವಸೆ ಇಡುತ್ತೇವೆ, ನಂಬಿಕೆ ಇಡುತ್ತೇವೆ, ಜೊತೆಯಾಗಿ ಹೋರಾಡುತ್ತೇವೆ. ಎಲ್ಲರೂ ಜೊತೆಯಾಗಿ ನಿಂತು ಈ ಕಷ್ಟದಿಂದ ಹೊರಬರುತ್ತೇವೆ’ ಎಂದು ರಾಧಿಕಾ ಪಂಡಿತ್​ ಬರೆದುಕೊಂಡಿದ್ದರು.

ಇದನ್ನೂ ಓದಿ: Radhika Pandit: ಯಶ್​ ಕೋಟ್ಯಂತರ ರೂಪಾಯಿ ಹಂಚಿದ ಬೆನ್ನಲ್ಲೇ ರಾಧಿಕಾ ಪಂಡಿತ್​ ಕಡೆಯಿಂದ ಬಂತು ಭರವಸೆಯ ಮಾತು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್