AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಮಾನ್ಸೂನ್​ ಆರಂಭದ ಬೆನ್ನಲ್ಲೇ ಹಳೆ ನೆನಪು ಹಂಚಿಕೊಂಡ ರಾಧಿಕಾ ಪಂಡಿತ್

ಮಳೆಗಾಲ ಎಂದರೆ ಬಹುತೇಕರಿಗೆ ಇಷ್ಟವಾಗುತ್ತದೆ. ಮಳೆ ಬರುತ್ತಿರುವಾಗ ಬಾಲ್ಕನಿಯಲ್ಲಿ ನಿಂತು ಮಳೆ ಸುರಿಯುವುದನ್ನು ನೋಡುವುದು ಅನೇಕರಿಗೆ ಖುಷಿಯ ವಿಚಾರ. ನಟಿ ರಾಧಿಕಾ ಪಂಡಿತ್​ಗೂ ಮಳೆ ಎಂದರೆ ಸಾಕಷ್ಟು ಪ್ರೀತಿಯಂತೆ.

Radhika Pandit: ಮಾನ್ಸೂನ್​ ಆರಂಭದ ಬೆನ್ನಲ್ಲೇ ಹಳೆ ನೆನಪು ಹಂಚಿಕೊಂಡ ರಾಧಿಕಾ ಪಂಡಿತ್
ರಾಧಿಕಾ ಪಂಡಿತ್
ರಾಜೇಶ್ ದುಗ್ಗುಮನೆ
|

Updated on: Jun 16, 2021 | 8:36 PM

Share

ಮಾನ್ಸೂನ್​ ಆರಂಭವಾಗಿದೆ. ಪರಿಣಾಮ, ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮಳೆ ಆಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಈ ಸಂದರ್ಭದಲ್ಲಿ ನಟಿ ರಾಧಿಕಾ ಪಂಡಿತ್​ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಮಳೆಗಾಲ ಎಂದರೆ ಬಹುತೇಕರಿಗೆ ಇಷ್ಟವಾಗುತ್ತದೆ. ಮಳೆ ಬರುತ್ತಿರುವಾಗ ಬಾಲ್ಕನಿಯಲ್ಲಿ ನಿಂತು ಮಳೆ ಸುರಿಯುವುದನ್ನು ನೋಡುವುದು ಅನೇಕರಿಗೆ ಖುಷಿಯ ವಿಚಾರ. ನಟಿ ರಾಧಿಕಾ ಪಂಡಿತ್​ಗೂ ಮಳೆ ಎಂದರೆ ಸಾಕಷ್ಟು ಪ್ರೀತಿಯಂತೆ. ಈ ಕಾರಣಕ್ಕೆ ಅವರು ಮೋಡ ಕವಿದ ವಾತಾವರಣದಲ್ಲಿ ಬಾಲ್ಕನಿಯಲ್ಲಿ ನಿಂತು ಫೋಟೋ ಹಂಚಿಕೊಂಡಿದ್ದಾರೆ. ಅಲ್ಲದೆ, ಅದಕ್ಕೆ ಕ್ಯಾಪ್ಶನ್​ಕೂಡ ನೀಡಿದ್ದಾರೆ.

‘ಹೆಲ್ಲೋ ಮಾನ್ಸೂನ್​. ಮಳೆ ಅನ್ನೋದು ತುಂಬಾನೇ ಸುಂದರವಾದುದು. ಸಂತೋಷವಿರಲಿ ಅಥವಾ ದುಃಖವೇ ಇರಲಿ ಒಟ್ಟಿನಲ್ಲಿ ಮಳೆ ದೃಶ್ಯ ಇಲ್ಲದ ಸಿನಿಮಾದಲ್ಲಿ ನಟಿಸಿದ್ದು ನನಗೆ ನೆನಪಿಲ್ಲ’ ಎಂದು ತಮ್ಮ ವೃತ್ತಿ ಜೀವನವನ್ನು ನೆನಪಿಸಿಕೊಂಡಿದ್ದಾರೆ. ಈ ಮೂಲಕ ಮಳೆ ಎಂದರೆ ಎಷ್ಟು ಪ್ರೀತಿ ಎಂಬುದನ್ನು ರಾಧಿಕಾ ನೆನೆದಿದ್ದಾರೆ.

ಇತ್ತೀಚೆಗೆ ಸಿನಿಮಾ ಕಾರ್ಮಿಕರಿಗೆ ಯಶ್ ದೊಡ್ಡ ಮೊತ್ತದ ಸಹಾಯ ಮಾಡಿದ್ದರು. ಇದಾದ ಬೆನ್ನಲ್ಲೇ ರಾಧಿಕಾ ಅಭಿಮಾನಿಗಳಲ್ಲಿ ಭರವಸೆ ಮೂಡುವ ರೀತಿಯಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದರು. ‘ಇದು ಕಷ್ಟದ ಸಮಯ. ನಾವೆಲ್ಲರೂ ತುಂಬ ನೋವು ಅನುಭವಿಸಿದ್ದೇವೆ. ಆತ್ಮೀಯರನ್ನು ಕಳೆದುಕೊಂಡಿದ್ದೇವೆ. ನಮ್ಮೆಲ್ಲರಿಗೂ ಭಯ, ಹತಾಶೆ ಕಾಡುತ್ತಿದೆ. ನಾಳೆ ಏನಾಗುತ್ತದೋ ಎಂಬ ಆತಂಕ ಇದೆ ಎಂಬುದು ನನಗೆ ತಿಳಿದಿದೆ. ಆದರೆ ದಯವಿಟ್ಟು ಒಂದು ಮಾತನ್ನು ಪ್ರತಿ ದಿನ ನಿಮಗೆ ನೀವೇ ಹೇಳಿಕೊಳ್ಳಿ. ಪರಿಸ್ಥಿತಿ ಎಷ್ಟೇ ಕೆಟ್ಟದಾಗಿದ್ದರೂ ನಾವು ಭರವಸೆ ಇಡುತ್ತೇವೆ, ನಂಬಿಕೆ ಇಡುತ್ತೇವೆ, ಜೊತೆಯಾಗಿ ಹೋರಾಡುತ್ತೇವೆ. ಎಲ್ಲರೂ ಜೊತೆಯಾಗಿ ನಿಂತು ಈ ಕಷ್ಟದಿಂದ ಹೊರಬರುತ್ತೇವೆ’ ಎಂದು ರಾಧಿಕಾ ಪಂಡಿತ್​ ಬರೆದುಕೊಂಡಿದ್ದರು.

ಇದನ್ನೂ ಓದಿ: Radhika Pandit: ಯಶ್​ ಕೋಟ್ಯಂತರ ರೂಪಾಯಿ ಹಂಚಿದ ಬೆನ್ನಲ್ಲೇ ರಾಧಿಕಾ ಪಂಡಿತ್​ ಕಡೆಯಿಂದ ಬಂತು ಭರವಸೆಯ ಮಾತು

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ