AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಹೊಸ ಮನೆಯ ಟೆರೇಸ್​ನಿಂದ ಅಭಿಮಾನಿಗಳಿಗೆ ಹೆಲೋ​ ಹೇಳಿದ ರಾಧಿಕಾ ಪಂಡಿತ್​-ಆಯ್ರಾ ಯಶ್

Ayra Yash: ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ.

Radhika Pandit: ಹೊಸ ಮನೆಯ ಟೆರೇಸ್​ನಿಂದ ಅಭಿಮಾನಿಗಳಿಗೆ ಹೆಲೋ​ ಹೇಳಿದ ರಾಧಿಕಾ ಪಂಡಿತ್​-ಆಯ್ರಾ ಯಶ್
ಹೊಸ ಮನೆಯ ಟೆರೇಸ್​ನಿಂದ ಹೆಲೋ​ ಹೇಳಿದ ರಾಧಿಕಾ ಪಂಡಿತ್​-ಆಯ್ರಾ ಯಶ್
TV9 Web
| Edited By: |

Updated on: Jul 29, 2021 | 3:53 PM

Share

ನಟಿ ರಾಧಿಕಾ ಪಂಡಿತ್ (Radhika Pandit)​ ಕುಟುಂಬದ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ನಟನೆಯಿಂದ ದೂರವೇ ಇರುವ ಅವರು ಮಕ್ಕಳ ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ, ಅವರು ಮಕ್ಕಳ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳನ್ನು ಖುಷಿ ಪಡಿಸುತ್ತಾರೆ. ಈಗ ನಟಿ ರಾಧಿಕಾ ಪಂಡಿತ್ ಮಗಳು ಆಯ್ರಾ (Ayra Yash) ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್ ಟೆರೇಸ್​ ಮೇಲೆ ರಾಧಿಕಾ ಪಂಡಿತ್​ ಹಾಗೂ ಆಯ್ರಾ ಇಬ್ಬರೂ ನಿಂತಿದ್ದಾರೆ. ‘ನಿಮಗೊಂದು ಹೆಲೋ ಹೇಳಬೇಕಿತ್ತು’ ಎಂದು ರಾಧಿಕಾ ಕ್ಯಾಪ್ಶನ್​ ನೀಡಿದ್ದಾರೆ. ಆಯ್ರಾ ಈ ಫೋಟೋದಲ್ಲಿ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಗಾಲ್ಫ್​ ಅಪಾರ್ಟ್​​ಮೆಂಟ್​ನಲ್ಲಿ ಯಶ್‌ ಹೊಸ ಮನೆ​ ಖರೀದಿ ಮಾಡಿದ್ದರು. ಹಲವು ತಿಂಗಳ ಕಾಲ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಅವೆಲ್ಲವೂ ಪೂರ್ಣಗೊಂಡು ಈ ತಿಂಗಳ ಆರಂಭದಲ್ಲಿ  ಗೃಹ ಪ್ರವೇಶದ ಕಾರ್ಯಗಳು ನಡೆದಿದ್ದವು. ಈ ಸಂದರ್ಭದಲ್ಲಿ ಯಶ್​ ಮನೆಯ ಫೋಟೋಗಳು, ಗೃಹ ಪ್ರವೇಶ ಕಾರ್ಯಕ್ರಮದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದವು. ಈಗ ರಾಧಿಕಾ ಕ್ಲಿಕ್​ ಮಾಡಿರುವ ಫೋಟೋ ಕೂಡ ಮನೆಯ ಟೆರೇಸ್​ನದ್ದೇ ಎಂದು ಹೇಳಲಾಗುತ್ತಿದೆ.

ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಇನ್ನು, ರಾಧಿಕಾ ಕೊನೆಯದಾಗಿ ಕಾಣಿಸಿಕೊಂಡಿದ್ದು 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇನ್ನು, ಯಶ್​ ‘ಕೆಜಿಎಫ್​ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಸಂಜಯ್​ ದತ್​ ಅಧೀರನಾಗಿ ಕಾಣಿಸಿಕೊಂಡಿದ್ದಾರೆ. ಇಂದು ಸಂಜಯ್​ ದತ್​ಜನ್ಮದಿನ. ಈ ಕಾರಣಕ್ಕೆ ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ಇದನ್ನೂ ಓದಿ: Radhika Pandit: ಹೊಸ ಮನೆಯ ಬಾಲ್ಕನಿ ವ್ಯೂ ಹಂಚಿಕೊಂಡ ನಟಿ ರಾಧಿಕಾ ಪಂಡಿತ್​

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ