Radhika Pandit: ಹೊಸ ಮನೆಯ ಟೆರೇಸ್​ನಿಂದ ಅಭಿಮಾನಿಗಳಿಗೆ ಹೆಲೋ​ ಹೇಳಿದ ರಾಧಿಕಾ ಪಂಡಿತ್​-ಆಯ್ರಾ ಯಶ್

Ayra Yash: ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ.

Radhika Pandit: ಹೊಸ ಮನೆಯ ಟೆರೇಸ್​ನಿಂದ ಅಭಿಮಾನಿಗಳಿಗೆ ಹೆಲೋ​ ಹೇಳಿದ ರಾಧಿಕಾ ಪಂಡಿತ್​-ಆಯ್ರಾ ಯಶ್
ಹೊಸ ಮನೆಯ ಟೆರೇಸ್​ನಿಂದ ಹೆಲೋ​ ಹೇಳಿದ ರಾಧಿಕಾ ಪಂಡಿತ್​-ಆಯ್ರಾ ಯಶ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 29, 2021 | 3:53 PM

ನಟಿ ರಾಧಿಕಾ ಪಂಡಿತ್ (Radhika Pandit)​ ಕುಟುಂಬದ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ನಟನೆಯಿಂದ ದೂರವೇ ಇರುವ ಅವರು ಮಕ್ಕಳ ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ, ಅವರು ಮಕ್ಕಳ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳನ್ನು ಖುಷಿ ಪಡಿಸುತ್ತಾರೆ. ಈಗ ನಟಿ ರಾಧಿಕಾ ಪಂಡಿತ್ ಮಗಳು ಆಯ್ರಾ (Ayra Yash) ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್ ಟೆರೇಸ್​ ಮೇಲೆ ರಾಧಿಕಾ ಪಂಡಿತ್​ ಹಾಗೂ ಆಯ್ರಾ ಇಬ್ಬರೂ ನಿಂತಿದ್ದಾರೆ. ‘ನಿಮಗೊಂದು ಹೆಲೋ ಹೇಳಬೇಕಿತ್ತು’ ಎಂದು ರಾಧಿಕಾ ಕ್ಯಾಪ್ಶನ್​ ನೀಡಿದ್ದಾರೆ. ಆಯ್ರಾ ಈ ಫೋಟೋದಲ್ಲಿ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಗಾಲ್ಫ್​ ಅಪಾರ್ಟ್​​ಮೆಂಟ್​ನಲ್ಲಿ ಯಶ್‌ ಹೊಸ ಮನೆ​ ಖರೀದಿ ಮಾಡಿದ್ದರು. ಹಲವು ತಿಂಗಳ ಕಾಲ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಅವೆಲ್ಲವೂ ಪೂರ್ಣಗೊಂಡು ಈ ತಿಂಗಳ ಆರಂಭದಲ್ಲಿ  ಗೃಹ ಪ್ರವೇಶದ ಕಾರ್ಯಗಳು ನಡೆದಿದ್ದವು. ಈ ಸಂದರ್ಭದಲ್ಲಿ ಯಶ್​ ಮನೆಯ ಫೋಟೋಗಳು, ಗೃಹ ಪ್ರವೇಶ ಕಾರ್ಯಕ್ರಮದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದವು. ಈಗ ರಾಧಿಕಾ ಕ್ಲಿಕ್​ ಮಾಡಿರುವ ಫೋಟೋ ಕೂಡ ಮನೆಯ ಟೆರೇಸ್​ನದ್ದೇ ಎಂದು ಹೇಳಲಾಗುತ್ತಿದೆ.

ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಇನ್ನು, ರಾಧಿಕಾ ಕೊನೆಯದಾಗಿ ಕಾಣಿಸಿಕೊಂಡಿದ್ದು 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇನ್ನು, ಯಶ್​ ‘ಕೆಜಿಎಫ್​ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಸಂಜಯ್​ ದತ್​ ಅಧೀರನಾಗಿ ಕಾಣಿಸಿಕೊಂಡಿದ್ದಾರೆ. ಇಂದು ಸಂಜಯ್​ ದತ್​ಜನ್ಮದಿನ. ಈ ಕಾರಣಕ್ಕೆ ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ಇದನ್ನೂ ಓದಿ: Radhika Pandit: ಹೊಸ ಮನೆಯ ಬಾಲ್ಕನಿ ವ್ಯೂ ಹಂಚಿಕೊಂಡ ನಟಿ ರಾಧಿಕಾ ಪಂಡಿತ್​

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ