AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಹೊಸ ಮನೆಯ ಟೆರೇಸ್​ನಿಂದ ಅಭಿಮಾನಿಗಳಿಗೆ ಹೆಲೋ​ ಹೇಳಿದ ರಾಧಿಕಾ ಪಂಡಿತ್​-ಆಯ್ರಾ ಯಶ್

Ayra Yash: ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ.

Radhika Pandit: ಹೊಸ ಮನೆಯ ಟೆರೇಸ್​ನಿಂದ ಅಭಿಮಾನಿಗಳಿಗೆ ಹೆಲೋ​ ಹೇಳಿದ ರಾಧಿಕಾ ಪಂಡಿತ್​-ಆಯ್ರಾ ಯಶ್
ಹೊಸ ಮನೆಯ ಟೆರೇಸ್​ನಿಂದ ಹೆಲೋ​ ಹೇಳಿದ ರಾಧಿಕಾ ಪಂಡಿತ್​-ಆಯ್ರಾ ಯಶ್
TV9 Web
| Edited By: |

Updated on: Jul 29, 2021 | 3:53 PM

Share

ನಟಿ ರಾಧಿಕಾ ಪಂಡಿತ್ (Radhika Pandit)​ ಕುಟುಂಬದ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ನಟನೆಯಿಂದ ದೂರವೇ ಇರುವ ಅವರು ಮಕ್ಕಳ ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ, ಅವರು ಮಕ್ಕಳ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳನ್ನು ಖುಷಿ ಪಡಿಸುತ್ತಾರೆ. ಈಗ ನಟಿ ರಾಧಿಕಾ ಪಂಡಿತ್ ಮಗಳು ಆಯ್ರಾ (Ayra Yash) ಫೋಟೋ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್ ಟೆರೇಸ್​ ಮೇಲೆ ರಾಧಿಕಾ ಪಂಡಿತ್​ ಹಾಗೂ ಆಯ್ರಾ ಇಬ್ಬರೂ ನಿಂತಿದ್ದಾರೆ. ‘ನಿಮಗೊಂದು ಹೆಲೋ ಹೇಳಬೇಕಿತ್ತು’ ಎಂದು ರಾಧಿಕಾ ಕ್ಯಾಪ್ಶನ್​ ನೀಡಿದ್ದಾರೆ. ಆಯ್ರಾ ಈ ಫೋಟೋದಲ್ಲಿ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಗಾಲ್ಫ್​ ಅಪಾರ್ಟ್​​ಮೆಂಟ್​ನಲ್ಲಿ ಯಶ್‌ ಹೊಸ ಮನೆ​ ಖರೀದಿ ಮಾಡಿದ್ದರು. ಹಲವು ತಿಂಗಳ ಕಾಲ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಅವೆಲ್ಲವೂ ಪೂರ್ಣಗೊಂಡು ಈ ತಿಂಗಳ ಆರಂಭದಲ್ಲಿ  ಗೃಹ ಪ್ರವೇಶದ ಕಾರ್ಯಗಳು ನಡೆದಿದ್ದವು. ಈ ಸಂದರ್ಭದಲ್ಲಿ ಯಶ್​ ಮನೆಯ ಫೋಟೋಗಳು, ಗೃಹ ಪ್ರವೇಶ ಕಾರ್ಯಕ್ರಮದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದವು. ಈಗ ರಾಧಿಕಾ ಕ್ಲಿಕ್​ ಮಾಡಿರುವ ಫೋಟೋ ಕೂಡ ಮನೆಯ ಟೆರೇಸ್​ನದ್ದೇ ಎಂದು ಹೇಳಲಾಗುತ್ತಿದೆ.

ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಇನ್ನು, ರಾಧಿಕಾ ಕೊನೆಯದಾಗಿ ಕಾಣಿಸಿಕೊಂಡಿದ್ದು 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇನ್ನು, ಯಶ್​ ‘ಕೆಜಿಎಫ್​ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಸಂಜಯ್​ ದತ್​ ಅಧೀರನಾಗಿ ಕಾಣಿಸಿಕೊಂಡಿದ್ದಾರೆ. ಇಂದು ಸಂಜಯ್​ ದತ್​ಜನ್ಮದಿನ. ಈ ಕಾರಣಕ್ಕೆ ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ಇದನ್ನೂ ಓದಿ: Radhika Pandit: ಹೊಸ ಮನೆಯ ಬಾಲ್ಕನಿ ವ್ಯೂ ಹಂಚಿಕೊಂಡ ನಟಿ ರಾಧಿಕಾ ಪಂಡಿತ್​

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!