AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯಶ್​ ಕೋಟ್ಯಂತರ ರೂಪಾಯಿ ಹಂಚಿದ ಬೆನ್ನಲ್ಲೇ ರಾಧಿಕಾ ಪಂಡಿತ್​ ಕಡೆಯಿಂದ ಬಂತು ಭರವಸೆಯ ಮಾತು

Yash - Radhika Pandit: ಕೊರೊನಾ ವೈರಸ್​ ಮತ್ತು ಲಾಕ್​ಡೌನ್​ನಿಂದ ಉಂಟಾಗಿರುವ ಕಷ್ಟದ ಪರಿಸ್ಥಿತಿಯಲ್ಲಿ ರಾಧಿಕಾ ಪಂಡಿತ್​ ಅವರು ಎಲ್ಲರಿಗೂ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ. ಹೊಸ ಪೋಸ್ಟ್​ ಮೂಲಕ ಅವರು ಕೆಲವು ವಿಚಾರಗಳ ಬಗ್ಗೆ ತಿಳಿಸಿದ್ದಾರೆ.

Radhika Pandit: ಯಶ್​ ಕೋಟ್ಯಂತರ ರೂಪಾಯಿ ಹಂಚಿದ ಬೆನ್ನಲ್ಲೇ ರಾಧಿಕಾ ಪಂಡಿತ್​ ಕಡೆಯಿಂದ ಬಂತು ಭರವಸೆಯ ಮಾತು
ರಾಧಿಕಾ ಪಂಡಿತ್​
Follow us
ಮದನ್​ ಕುಮಾರ್​
| Updated By: Digi Tech Desk

Updated on:Jun 07, 2021 | 10:04 AM

ಕೊರೊನಾ ವೈರಸ್​ ಎರಡನೇ ಅಲೆಯ ಹಾವಳಿಯಿಂದಾಗಿ ಅನೇಕರ ಬದುಕು ತತ್ತರಿಸಿದೆ. ಈಗ ನಿಧಾನವಾಗಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆಯಾದರೂ ಜನಜೀವನ ಸಹಜಸ್ಥಿತಿಗೆ ಬರಲು ಇನ್ನೂ ಸಮಯ ಬೇಕಿದೆ. ಲಾಕ್​ಡೌನ್​ ಪರಿಣಾಮ ಅನೇಕರು ಕೆಲಸ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಠಿಣ ಸಂದರ್ಭದಲ್ಲಿ ನಟ ಯಶ್​ ಅವರು ರಿಯಲ್​ ಹೀರೋ ಆಗಿರುವುದು ತಿಳಿದಿದೆ. ಇತ್ತೀಚೆಗಷ್ಟೇ ಅವರು 1.5 ಕೋಟಿ ರೂ.ಗಿಂತಲೂ ಹೆಚ್ಚು ಹಣವನ್ನು ಸಿನಿಮಾರಂಗದ ಕಾರ್ಮಿಕರಿಗೆ, ತಂತ್ರಜ್ಞರಿಗೆ ಮತ್ತು ಕಲಾವಿದರಿಗೆ ಹಂಚಿದ್ದಾರೆ. ಅದರ ಬೆನ್ನಲ್ಲೇ ನಟಿ ರಾಧಿಕಾ ಪಂಡಿತ್​ ಅವರು ಭರವಸೆಯ ಮಾತುಗಳನ್ನು ಆಡಿದ್ದಾರೆ.

ಸಿನಿಮಾ ಚಟುವಟಿಕೆಗಳಿಂದ ದೂರು ಇದ್ದರೂ ಕೂಡ ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಕೊರೊನಾ ವೈರಸ್​ ಮತ್ತು ಲಾಕ್​ಡೌನ್​ನಿಂದ ಉಂಟಾಗಿರುವ ಕಷ್ಟದ ಪರಿಸ್ಥಿತಿಯಲ್ಲಿ ಅವರು ಎಲ್ಲರಿಗೂ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ. ಹೊಸ ಪೋಸ್ಟ್​ ಮೂಲಕ ಅವರು ಕೆಲವು ವಿಚಾರಗಳ ಬಗ್ಗೆ ತಿಳಿಸಿದ್ದಾರೆ.

‘ಇದು ಕಷ್ಟದ ಸಮಯ. ನಾವೆಲ್ಲರೂ ತುಂಬ ನೋವು ಅನುಭವಿಸಿದ್ದೇವೆ. ಆತ್ಮೀಯರನ್ನು ಕಳೆದುಕೊಂಡಿದ್ದೇವೆ. ನಮ್ಮೆಲ್ಲರಿಗೂ ಭಯ, ಹತಾಶೆ ಕಾಡುತ್ತಿದೆ. ನಾಳೆ ಏನಾಗುತ್ತದೋ ಎಂಬ ಆತಂಕ ಇದೆ ಎಂಬುದು ನನಗೆ ತಿಳಿದಿದೆ. ಆದರೆ ದಯವಿಟ್ಟು ಒಂದು ಮಾತನ್ನು ಪ್ರತಿ ದಿನ ನಿಮಗೆ ನೀವೇ ಹೇಳಿಕೊಳ್ಳಿ. ಪರಿಸ್ಥಿತಿ ಎಷ್ಟೇ ಕೆಟ್ಟದಾಗಿದ್ದರೂ ನಾವು ಭರವಸೆ ಇಡುತ್ತೇವೆ, ನಂಬಿಕೆ ಇಡುತ್ತೇವೆ, ಜೊತೆಯಾಗಿ ಹೋರಾಡುತ್ತೇವೆ. ಎಲ್ಲರೂ ಜೊತೆಯಾಗಿ ನಿಂತು ಈ ಕಷ್ಟದಿಂದ ಹೊರಬರುತ್ತೇವೆ’ ಎಂದು ರಾಧಿಕಾ ಪಂಡಿತ್​ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುತ್ತಿದ್ದ ರಾಧಿಕಾ ಪಂಡಿತ್​ ಅವರು ಇತ್ತೀಚೆಗೆ ಹೆಚ್ಚು ಪೋಸ್ಟ್​ಗಳನ್ನು ಹಾಕುತ್ತಿಲ್ಲ. ಅದಕ್ಕಾಗಿ ಅವರು ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ‘ನನ್ನೆಲ್ಲ ಪ್ರೀತಿಯ ಹಿತೈಷಿಗಳು ಮತ್ತು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಸಾಧ್ಯವಾಗದೇ ಇರುವುದಕ್ಕೆ ಕ್ಷಮೆ ಕೇಳುತ್ತೇನೆ. ನಿಮ್ಮಲ್ಲಿ ನಗು ಮೂಡಿಸಲು ಇನ್ಮುಂದೆ ಖುಷಿಯಾದ ಪಾಸಿಟಿವ್​ ಪೋಸ್ಟ್​ಗಳನ್ನು ಹಾಕುತ್ತೇನೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:

ಯಶ್-ರಾಧಿಕಾ ಪಂಡಿತ್ ಮುದ್ದು ಮಕ್ಕಳ ಕ್ಯೂಟ್ ಫೋಟೋಗಳಿಗೆ ಸಿಕ್ಕಾಪಟ್ಟೆ ಲೈಕ್ಸ್

Radhika Pandit: ರಾಧಿಕಾ ಪಂಡಿತ್​ ಕಂಬ್ಯಾಕ್​ ಯಾವಾಗ? ಶೀಘ್ರವೇ ಸಿಗಬಹುದೇ ಉತ್ತರ?

Published On - 9:02 am, Mon, 7 June 21

ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್