Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ನೂರಾರು ಮಕ್ಕಳ ಜೀವ ಉಳಿಸಬಲ್ಲದು’; ಎದೆಹಾಲು ದಾನದ ಬಗ್ಗೆ ರಾಧಿಕಾ ಪಂಡಿತ್ ವಿಶೇಷ ಸಂದೇಶ

Breast Milk Donation: ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯರಾಗಿದ್ದಾರೆ. ಪ್ರಸ್ತುತ ಅವರು ಎದೆಹಾಲು ದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ವಿಡಿಯೋ ಸಂದೇಶದಲ್ಲಿ ರಾಧಿಕಾ ಮಾತನಾಡಿದ್ದಾರೆ.

Radhika Pandit: ‘ನೂರಾರು ಮಕ್ಕಳ ಜೀವ ಉಳಿಸಬಲ್ಲದು’; ಎದೆಹಾಲು ದಾನದ ಬಗ್ಗೆ ರಾಧಿಕಾ ಪಂಡಿತ್ ವಿಶೇಷ ಸಂದೇಶ
ರಾಧಿಕಾ ಪಂಡಿತ್ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on: Mar 23, 2022 | 7:47 PM

ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ (Radhika Pandit) ಚಿತ್ರರಂಗದೊಂದಿಗೆ ಸಾಮಾಜಿಕ ಕಾರ್ಯಗಳಲ್ಲೂ ಗುರುತಿಸಿಕೊಂಡವರು. ಪ್ರಸ್ತುತ ಸಿನಿ ರಂಗದಿಂದ ತುಸು ಬ್ರೇಕ್ ತೆಗೆದುಕೊಂಡಿರುವ ಅವರು, ಕುಟುಂಬಕ್ಕೆ ಸಮಯ ಮೀಸಲಿಟ್ಟಿದ್ದಾರೆ. ಆದರೆ ನಟಿ ಸಮಾಜಮುಖಿ ಕೆಲಸಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ‘ಎದೆಹಾಲು ದಾನ’ದ (Breast Milk Donation) ಬಗ್ಗೆ ಜನರಿಗೆ ಅರಿವು ಮೂಡಿಸುವ ವಿಡಿಯೋ ಹಂಚಿಕೊಂಡಿದ್ದಾರೆ. ‘‘ಎಲ್ಲಾ ಮಕ್ಕಳ ಬೆಳವಣಿಗೆಗೆ ಎದೆಹಾಲು ಅತ್ಯಗತ್ಯ. ಆದರೆ ಹಲವು ಕಾರಣದಿಂದ ಶಿಶುಗಳು ಸ್ತನ್ಯಪಾನದಿಂದ ವಂಚಿತರಾಗುತ್ತಾರೆ’’ ಎಂದಿರುವ ನಟಿ, ಅಗತ್ಯವಿರುವ ಶಿಶುಗಳಿಗೆ ಎದೆಹಾಲು ದಾನ ಹೇಗೆ ಪ್ರಯೋಜನಕಾರಿಯಾಗಲಿದೆ ಎನ್ನುವುದನ್ನು ವಿವರಿಸಿದ್ದಾರೆ. ‘ಎದೆಹಾಲು ಬ್ಯಾಂಕ್​’ಗಳ ಮಹತ್ವ ತಿಳಿಸಿರುವ ರಾಧಿಕಾ, ಈ ಮೂಲಕ ಅವರು ಸಮಾಜದಲ್ಲಿ ಅರಿವು ಮೂಡಿಸುವ ಯತ್ನಕ್ಕೆ ಮುಂದಾಗಿದ್ದಾರೆ.

ವಿಡಿಯೋ ಸಂದೇಶದಲ್ಲಿ ರಾಧಿಕಾ ಪಂಡಿತ್ ಹೇಳಿದ್ದೇನು?

ರಾಧಿಕಾ ಪಂಡಿತ್ ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ‘ಎದೆಹಾಲು ದಾನ ಮಾಡಿ, ಜೀವಗಳನ್ನು ಉಳಿಸಿ’ ಅಭಿಯಾನದ ಬಗ್ಗೆ ಬರೆದುಕೊಂಡಿದ್ದಾರೆ. ಇದರೊಂದಿಗೆ ತಾವು ಮಾತನಾಡಿರುವ ವಿಡಿಯೋ ಸಂದೇಶವನ್ನು ಕೂಡ ಹಂಚಿಕೊಂಡಿದ್ದಾರೆ. ರಾಧಿಕಾ ಮಾತಿನ ಸಾರಾಂಶ ಇಲ್ಲಿದೆ.

‘‘ಬದುಕಿನ ಅತ್ಯಂತ ಮಹತ್ವಪೂರ್ಣ ಉಡುಗೊರೆಗಳಲ್ಲಿ ಎದೆಹಾಲು ಮುಖ್ಯವಾದದ್ದು.ಎದೆಹಾಲಿನಲ್ಲಿ ಇರುವ ಅಂಶಗಳನ್ನು ಯಾವುದಕ್ಕೂ ಹೋಲಿಸಲು ಆಗುವುದಿಲ್ಲ. ಎಳೆ ಮಕ್ಕಳಿಗೆ ಇದು ಬಹಳ ಮುಖ್ಯ. ಅದರಲ್ಲಿ ಸಿಗುವ ಪೋಷಕಾಂಶಗಳು ಅಥವಾ ರೋಗ ನಿರೋಧಕ ಗುಣವನ್ನು ಮತ್ಯಾವುದೂ ನೀಡುವುದು ಸಾಧ್ಯವಿಲ್ಲ’’

‘‘ಆದರೆ ಕೆಲವು ಸಂದರ್ಭಗಳಲ್ಲಿ ತಾಯಂದಿರಲ್ಲಿ ಅಗತ್ಯವಾಗಿದ್ದಷ್ಟು ಹಾಲು ಉತ್ಪಾದನೆಯಾದೇ ಇರಬಹುದು. ಅಂತಹ ತಾಯಂದಿರ ಮಕ್ಕಳಿಗೆ ಸಹಾಯವಾಗುವ ದೃಷ್ಟಿಯಿಂದ ‘ಎದೆಹಾಲು ಬ್ಯಾಂಕ್’ಗಳನ್ನು ಸ್ಥಾಪಿಸಲಾಗಿದೆ. ಯಾರು ಸಶಕ್ತರೋ ಅವರು ಎದೆಹಾಲನ್ನು ದಾನ ಮಾಡಬಹುದು. ನಿಮ್ಮ ಜಿಲ್ಲೆಗಳಲ್ಲಿರುವ ಮಿಲ್ಕ್ ಬ್ಯಾಂಕ್​ಗಳಲ್ಲಿ ದಾನ ಮಾಡಬಹುದು. ಇದು ಅಗತ್ಯವಿರುವವರಿಗೆ ಸಹಾಯವಾಗಲಿದೆ’’ ಎಂದು ಸಂದೇಶ ನೀಡಿದ್ದಾರೆ ರಾಧಿಕಾ ಪಂಡಿತ್. ಈ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಿ ಎಂದು ನಟಿ ಕೋರಿಕೊಂಡಿದ್ದಾರೆ.

ಅಭಿಯಾನದ ಕುರಿತು ರಾಧಿಕಾ ಪಂಡಿತ್ ವಿಡಿಯೋ ಸಂದೇಶ ಇಲ್ಲಿದೆ:

‘ಎದೆಹಾಲು ದಾನ ಮಾಡಿ, ಜೀವಗಳನ್ನು ಉಳಿಸಿ’ ಎಂಬ ಉದ್ದೇಶದಿಂದ ಮಾರ್ಚ್ 27ರಂದು ಬೆಂಗಳೂರಿನಲ್ಲಿ ಒಂದು ವಾಕಥಾನ್ ಕೂಡ ಆಯೋಜಿಸಲಾಗಿದೆ. ರಾಧಿಕಾ ಪಂಡಿತ್ ಹಂಚಿಕೊಂಡಿರುವ ಸಂದೇಶಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದು, ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ:

ಟ್ರೆಂಡ್ ಆಯ್ತು Boycott RRR; ಕನ್ನಡ ಆವೃತ್ತಿ ಪ್ರದರ್ಶನದ ಬಗ್ಗೆ ಸ್ಪಷ್ಟನೆ ನೀಡಿದ ವಿತರಕರು

ಮಾಲ್ಡೀವ್ಸ್​​ನಲ್ಲಿ ವಿಹರಿಸುತ್ತಿರುವ ಸನ್ನಿ ಲಿಯೋನ್

ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ