AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ನೂರಾರು ಮಕ್ಕಳ ಜೀವ ಉಳಿಸಬಲ್ಲದು’; ಎದೆಹಾಲು ದಾನದ ಬಗ್ಗೆ ರಾಧಿಕಾ ಪಂಡಿತ್ ವಿಶೇಷ ಸಂದೇಶ

Breast Milk Donation: ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯರಾಗಿದ್ದಾರೆ. ಪ್ರಸ್ತುತ ಅವರು ಎದೆಹಾಲು ದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ವಿಡಿಯೋ ಸಂದೇಶದಲ್ಲಿ ರಾಧಿಕಾ ಮಾತನಾಡಿದ್ದಾರೆ.

Radhika Pandit: ‘ನೂರಾರು ಮಕ್ಕಳ ಜೀವ ಉಳಿಸಬಲ್ಲದು’; ಎದೆಹಾಲು ದಾನದ ಬಗ್ಗೆ ರಾಧಿಕಾ ಪಂಡಿತ್ ವಿಶೇಷ ಸಂದೇಶ
ರಾಧಿಕಾ ಪಂಡಿತ್ (ಸಂಗ್ರಹ ಚಿತ್ರ)
TV9 Web
| Updated By: shivaprasad.hs|

Updated on: Mar 23, 2022 | 7:47 PM

Share

ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ (Radhika Pandit) ಚಿತ್ರರಂಗದೊಂದಿಗೆ ಸಾಮಾಜಿಕ ಕಾರ್ಯಗಳಲ್ಲೂ ಗುರುತಿಸಿಕೊಂಡವರು. ಪ್ರಸ್ತುತ ಸಿನಿ ರಂಗದಿಂದ ತುಸು ಬ್ರೇಕ್ ತೆಗೆದುಕೊಂಡಿರುವ ಅವರು, ಕುಟುಂಬಕ್ಕೆ ಸಮಯ ಮೀಸಲಿಟ್ಟಿದ್ದಾರೆ. ಆದರೆ ನಟಿ ಸಮಾಜಮುಖಿ ಕೆಲಸಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ‘ಎದೆಹಾಲು ದಾನ’ದ (Breast Milk Donation) ಬಗ್ಗೆ ಜನರಿಗೆ ಅರಿವು ಮೂಡಿಸುವ ವಿಡಿಯೋ ಹಂಚಿಕೊಂಡಿದ್ದಾರೆ. ‘‘ಎಲ್ಲಾ ಮಕ್ಕಳ ಬೆಳವಣಿಗೆಗೆ ಎದೆಹಾಲು ಅತ್ಯಗತ್ಯ. ಆದರೆ ಹಲವು ಕಾರಣದಿಂದ ಶಿಶುಗಳು ಸ್ತನ್ಯಪಾನದಿಂದ ವಂಚಿತರಾಗುತ್ತಾರೆ’’ ಎಂದಿರುವ ನಟಿ, ಅಗತ್ಯವಿರುವ ಶಿಶುಗಳಿಗೆ ಎದೆಹಾಲು ದಾನ ಹೇಗೆ ಪ್ರಯೋಜನಕಾರಿಯಾಗಲಿದೆ ಎನ್ನುವುದನ್ನು ವಿವರಿಸಿದ್ದಾರೆ. ‘ಎದೆಹಾಲು ಬ್ಯಾಂಕ್​’ಗಳ ಮಹತ್ವ ತಿಳಿಸಿರುವ ರಾಧಿಕಾ, ಈ ಮೂಲಕ ಅವರು ಸಮಾಜದಲ್ಲಿ ಅರಿವು ಮೂಡಿಸುವ ಯತ್ನಕ್ಕೆ ಮುಂದಾಗಿದ್ದಾರೆ.

ವಿಡಿಯೋ ಸಂದೇಶದಲ್ಲಿ ರಾಧಿಕಾ ಪಂಡಿತ್ ಹೇಳಿದ್ದೇನು?

ರಾಧಿಕಾ ಪಂಡಿತ್ ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ‘ಎದೆಹಾಲು ದಾನ ಮಾಡಿ, ಜೀವಗಳನ್ನು ಉಳಿಸಿ’ ಅಭಿಯಾನದ ಬಗ್ಗೆ ಬರೆದುಕೊಂಡಿದ್ದಾರೆ. ಇದರೊಂದಿಗೆ ತಾವು ಮಾತನಾಡಿರುವ ವಿಡಿಯೋ ಸಂದೇಶವನ್ನು ಕೂಡ ಹಂಚಿಕೊಂಡಿದ್ದಾರೆ. ರಾಧಿಕಾ ಮಾತಿನ ಸಾರಾಂಶ ಇಲ್ಲಿದೆ.

‘‘ಬದುಕಿನ ಅತ್ಯಂತ ಮಹತ್ವಪೂರ್ಣ ಉಡುಗೊರೆಗಳಲ್ಲಿ ಎದೆಹಾಲು ಮುಖ್ಯವಾದದ್ದು.ಎದೆಹಾಲಿನಲ್ಲಿ ಇರುವ ಅಂಶಗಳನ್ನು ಯಾವುದಕ್ಕೂ ಹೋಲಿಸಲು ಆಗುವುದಿಲ್ಲ. ಎಳೆ ಮಕ್ಕಳಿಗೆ ಇದು ಬಹಳ ಮುಖ್ಯ. ಅದರಲ್ಲಿ ಸಿಗುವ ಪೋಷಕಾಂಶಗಳು ಅಥವಾ ರೋಗ ನಿರೋಧಕ ಗುಣವನ್ನು ಮತ್ಯಾವುದೂ ನೀಡುವುದು ಸಾಧ್ಯವಿಲ್ಲ’’

‘‘ಆದರೆ ಕೆಲವು ಸಂದರ್ಭಗಳಲ್ಲಿ ತಾಯಂದಿರಲ್ಲಿ ಅಗತ್ಯವಾಗಿದ್ದಷ್ಟು ಹಾಲು ಉತ್ಪಾದನೆಯಾದೇ ಇರಬಹುದು. ಅಂತಹ ತಾಯಂದಿರ ಮಕ್ಕಳಿಗೆ ಸಹಾಯವಾಗುವ ದೃಷ್ಟಿಯಿಂದ ‘ಎದೆಹಾಲು ಬ್ಯಾಂಕ್’ಗಳನ್ನು ಸ್ಥಾಪಿಸಲಾಗಿದೆ. ಯಾರು ಸಶಕ್ತರೋ ಅವರು ಎದೆಹಾಲನ್ನು ದಾನ ಮಾಡಬಹುದು. ನಿಮ್ಮ ಜಿಲ್ಲೆಗಳಲ್ಲಿರುವ ಮಿಲ್ಕ್ ಬ್ಯಾಂಕ್​ಗಳಲ್ಲಿ ದಾನ ಮಾಡಬಹುದು. ಇದು ಅಗತ್ಯವಿರುವವರಿಗೆ ಸಹಾಯವಾಗಲಿದೆ’’ ಎಂದು ಸಂದೇಶ ನೀಡಿದ್ದಾರೆ ರಾಧಿಕಾ ಪಂಡಿತ್. ಈ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಿ ಎಂದು ನಟಿ ಕೋರಿಕೊಂಡಿದ್ದಾರೆ.

ಅಭಿಯಾನದ ಕುರಿತು ರಾಧಿಕಾ ಪಂಡಿತ್ ವಿಡಿಯೋ ಸಂದೇಶ ಇಲ್ಲಿದೆ:

‘ಎದೆಹಾಲು ದಾನ ಮಾಡಿ, ಜೀವಗಳನ್ನು ಉಳಿಸಿ’ ಎಂಬ ಉದ್ದೇಶದಿಂದ ಮಾರ್ಚ್ 27ರಂದು ಬೆಂಗಳೂರಿನಲ್ಲಿ ಒಂದು ವಾಕಥಾನ್ ಕೂಡ ಆಯೋಜಿಸಲಾಗಿದೆ. ರಾಧಿಕಾ ಪಂಡಿತ್ ಹಂಚಿಕೊಂಡಿರುವ ಸಂದೇಶಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದು, ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ:

ಟ್ರೆಂಡ್ ಆಯ್ತು Boycott RRR; ಕನ್ನಡ ಆವೃತ್ತಿ ಪ್ರದರ್ಶನದ ಬಗ್ಗೆ ಸ್ಪಷ್ಟನೆ ನೀಡಿದ ವಿತರಕರು

ಮಾಲ್ಡೀವ್ಸ್​​ನಲ್ಲಿ ವಿಹರಿಸುತ್ತಿರುವ ಸನ್ನಿ ಲಿಯೋನ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ