ಹೇಗಿತ್ತು ರಾಕಿ-ರಾಧಿಕಾ ಪಂಡಿತ್ ಭೇಟಿ; ಹಳೆಯ ವಿಡಿಯೋ ಹಂಚಿಕೊಂಡ ಯಶ್ ಪತ್ನಿ

Radhika Pandit: ಯಶ್ ಅವರು ರಾಕಿ ಪಾತ್ರಕ್ಕಾಗಿ ರೆಡಿ ಆಗಿದ್ದರು. ಈ ವೇಳೆ ಅಲ್ಲಿಗೆ ರಾಧಿಕಾ ಪಂಡಿತ್ ಬರುತ್ತಾರೆ. ಯಶ್ ಗೆಟಪ್​ಗೆ ರಾಧಿಕಾ ಪಂಡಿತ್ ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಹೇಗಿತ್ತು ರಾಕಿ-ರಾಧಿಕಾ ಪಂಡಿತ್ ಭೇಟಿ; ಹಳೆಯ ವಿಡಿಯೋ ಹಂಚಿಕೊಂಡ ಯಶ್ ಪತ್ನಿ
ರಾಧಿಕಾ-ಯಶ್
Follow us
|

Updated on: Apr 14, 2023 | 1:31 PM

ಕೆಜಿಎಫ್ 2’ ಸಿನಿಮಾದಲ್ಲಿ ಬರುವ ರಾಕಿ ಪಾತ್ರ ವಿಶೇಷ ಎನಿಸಿಕೊಂಡಿದೆ. ಪಾತ್ರವನ್ನು ಕಟ್ಟಿಕೊಟ್ಟ ರೀತಿಗೆ ಅನೇಕರು ಫಿದಾ ಆಗಿದ್ದಾರೆ. ಇಂದಿಗೂ ಈ ಪಾತ್ರವನ್ನು ಅನೇಕರು ಕೊಂಡಾಡುತ್ತಾರೆ. ಪಾತ್ರದ ಮ್ಯಾನರಿಸಂ ಸಾಕಷ್ಟು ಜನರಿಗೆ ಇಷ್ಟವಾಗಿದೆ. ‘ಕೆಜಿಎಫ್ 2’ ಸಿನಿಮಾ (KGF Chapter 2) ರಿಲೀಸ್ ಆಗಿ ಇಂದಿಗೆ (ಏಪ್ರಿಲ್ 14) ಒಂದು ವರ್ಷ. ಹೀಗಾಗಿ ಚಿತ್ರವನ್ನು ವಿವಿಧ ರೀತಿಯಲ್ಲಿ ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಅದೇ ರೀತಿ ರಾಧಿಕಾ ಪಂಡಿತ್ (Radhik Pandit) ಕೂಡ ಸೆಟ್​ನ ವಿಡಿಯೋ ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಕೆಜಿಎಫ್ 2’ ಸಿನಿಮಾ ಕಳೆದ ವರ್ಷ ಏಪ್ರಿಲ್ 14ರಂದು ರಿಲೀಸ್ ಆಯಿತು. ಈ ಸಿನಿಮಾದ ಮೊದಲ ಭಾಗ ಬಂದಿದ್ದು 2018ರಲ್ಲಿ. ನಾಲ್ಕು ವರ್ಷಗಳ ಗ್ಯಾಪ್ ಬಳಿಕ ಎರಡನೇ ಚಾಪ್ಟರ್ ಬಂತು. ಈ ಸಿನಿಮಾ ಕೆಲಸ ವಿಳಂಬ ಆಗಲು ಕೊವಿಡ್ ಕೂಡ ಕಾರಣ ಆಗಿತ್ತು. ಅದೇನೆ ಇದ್ದರೂ ಸಿನಿಮಾ ರಿಲೀಸ್ ಆಗಿ ಮಾಡಿದ ದಾಖಲೆಗಳು ಹಲವು. ‘ಕೆಜಿಎಫ್ 2’ ಸೆಟ್​ನಲ್ಲಿ ಯಾವ ರೀತಿಯ ಮೂಡ್ ಇತ್ತು ಎಂಬುದನ್ನು ತೋರಿಸಲು ರಾಧಿಕಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

ಯಶ್ ಅವರು ರಾಕಿ ಪಾತ್ರಕ್ಕಾಗಿ ರೆಡಿ ಆಗಿದ್ದರು. ಈ ವೇಳೆ ಅಲ್ಲಿಗೆ ರಾಧಿಕಾ ಪಂಡಿತ್ ಬರುತ್ತಾರೆ. ‘ನಾನು 70ರ ದಶಕದಲ್ಲಿದ್ದೀನಿ. ಸಖತ್ ಆಗಿ ಕಾಣುತ್ತದೆ’ ಎಂದು ರಾಧಿಕಾ ಪಂಡಿತ್ ಅವರು ವಿಡಿಯೋದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ‘ರಾಕಿನ ರಾಧಿಕಾ ಭೇಟಿ ಮಾಡಿದಾಗ’ ಎನ್ನುವ ಕ್ಯಾಪ್ಶನ್ ಇದಕ್ಕೆ ನೀಡಲಾಗಿದೆ. ಅಭಿಮಾನಿಗಳು ಈ ವಿಡಿಯೋನ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ:  ‘ನನಗೆ ವೈಯಕ್ತಿಕವಾಗಿ ಇರೋದೇ ಓರ್ವ ಫೋಟೋಗ್ರಾಫರ್’; ಹೆಸರು ರಿವೀಲ್ ಮಾಡಿದ ರಾಧಿಕಾ ಪಂಡಿತ್

ರಾಧಿಕಾ ಪಂಡಿತ್ ಇತ್ತೀಚೆಗೆ ಯಾವುದೇ ಪೋಸ್ಟ್ ಹಾಕಿದರೂ ಅದಕ್ಕೆ ಅಭಿಮಾನಿಗಳು ಯಶ್ 19ನೇ ಸಿನಿಮಾ ಬಗ್ಗೆ ಕಮೆಂಟ್ ಮಾಡುತ್ತಾರೆ. ಈ ಪೋಸ್ಟ್​​ಗೂ ಅದೇ ರೀತಿಯ ಕಮೆಂಟ್​ಗಳು ಬಂದಿವೆ. ಯಶ್ ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡಿ ಎಂದು ಅನೇಕರು ಕಮೆಂಟ್ ಬಾಕ್ಸ್​​ನಲ್ಲಿ ಕೋರಿದ್ದಾರೆ.

ಇದನ್ನೂ ಓದಿ: KGF Chapter 2: ‘ಕೆಜಿಎಫ್ ಚಾಪ್ಟರ್​ 2’ ಜನರಿಗೆ ಹೆಚ್ಚು ಇಷ್ಟ ಆಗೋಕೆ ಇದೇ ಕಾರಣ..

‘ಕೆಜಿಎಫ್ 2’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮಾಡಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. 2022ರಲ್ಲಿ ರಿಲೀಸ್ ಆಗಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಭಾರತದ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ಗೆ ದೊಡ್ಡ ಮಟ್ಟದ ಕಲೆಕ್ಷನ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ