AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್​​; ಕ್ಯೂಟ್​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​

ಆಯ್ರಾ ಮತ್ತು ಯಥರ್ವ್​ ಸ್ವಿಮ್ಮಿಂಗ್​ಪೂಲ್​ನಲ್ಲಿ ಸನ್​ಗ್ಲಾಸ್​ ಹಾಕಿ ಆಟ ಆಡುತ್ತಿದ್ದಾರೆ. ಇಬ್ಬರೂ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್​​; ಕ್ಯೂಟ್​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​
ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್
TV9 Web
| Edited By: |

Updated on: Oct 23, 2021 | 1:39 PM

Share

ರಾಧಿಕಾ ಪಂಡಿತ್​ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್​ ಆಗಿಲ್ಲ. ಆ ಬಗ್ಗೆ ಅವರ ಅಭಿಮಾನಿಗಳಿಗೆ ಬೇಸರ ಇದ್ದೇ ಇದೆ. ಆದರೆ, ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​. ಅಭಿಮಾನಿಗಳ ಜತೆ ಸದಾ ಸಂಪರ್ಕದಲ್ಲಿರೋಕೆ ಅವರು ಒಂದಿಲ್ಲೊಂದು ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ. ಮಕ್ಕಳ ಬಗ್ಗೆ ಸಾಕಷ್ಟು ಫೋಟೋಗಳನ್ನು ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಹಬ್ಬ-ಹರಿದಿನ ಇದ್ದಾಗ ಪತಿ ಯಶ್​ ಹಾಗೂ ಮಕ್ಕಳಾದ ಆಯ್ರಾ ಮತ್ತು ಯಥರ್ವ್​ ಜತೆಗೆ ಪೂಜೆ ಮಾಡುತ್ತಿರುವ ಫೋಟೋ ಹಾಕುತ್ತಾರೆ. ಇನ್ನು ರಜಾ ದಿನಗಳನ್ನು ಕಳೆಯೋಕೆ ಹೊರಗೆ ಹೋದರೆ ಫ್ಯಾಮಿಲಿ ಫೋಟೋ ಹಂಚಿಕೊಳ್ಳುತ್ತಾರೆ. ಈಗ ರಾಧಿಕಾ ಪಂಡಿತ್ ಹೊಸ ಫೋಟೋ ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

ಆಯ್ರಾ ಮತ್ತು ಯಥರ್ವ್​ ಸ್ವಿಮ್ಮಿಂಗ್​ಪೂಲ್​ನಲ್ಲಿ ಸನ್​ಗ್ಲಾಸ್​ ಹಾಕಿ ಆಟ ಆಡುತ್ತಿದ್ದಾರೆ. ಇಬ್ಬರೂ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳ ಖುಷಿಯಾಗಿದ್ದಾರೆ. ಅಲ್ಲದೆ, ಆಯ್ರಾ ಮತ್ತು ಯಥರ್ವ್​ ಕ್ಯೂಟ್​ನೆಸ್​ ಬಣ್ಣಿಸಿದ್ದಾರೆ. ಇನ್ನೂ ಕೆಲವರು ಈ ಫೋಟೋ ತೆಗೆದವರು ಯಾರು ಎಂಬುದನ್ನು ಪತ್ತೆ ಹಚ್ಚಲು ಯಥರ್ವ್​ ಸನ್​ಗ್ಲಾಸ್​ ಜೂಮ್​ ಮಾಡಿ ನೋಡಿದ್ದಾರೆ. ಈ ಬಗ್ಗೆ ಕಮೆಂಟ್​ ಕೂಡ ಮಾಡಿದ್ದಾರೆ. ಇದಕ್ಕೆ ರಾಧಿಕಾ ಪಂಡಿತ್​ ಉತ್ತರಿಸಿದ್ದು, ‘ಫೋಟೋ ತೆಗೆದಿದ್ದು ನಾನೇ’ ಎಂದು ಹೇಳಿಕೊಂಡಿದ್ದಾರೆ.

ರಾಧಿಕಾ ಪಂಡಿತ್​ ಹಾಗೂ ಯಶ್​ ಇತ್ತೀಚೆಗೆ ದುಬೈಗೆ ತೆರಳಿದ್ದರು. ಅಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಯಶ್​ ಸಿಂಹಕ್ಕೆ ಮಾಂಸ ತಿನ್ನಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ಲಕ್ಷಾಂತರ ಲೈಕ್ಸ್​ ಹಾಗೂ ವೀವ್ಸ್​ ಗಿಟ್ಟಿಸಿಕೊಂಡಿದೆ. ಅಂದಹಾಗೆ, ಯಶ್​ ಜತೆ ಯಥರ್ವ್​ ಹಾಗೂ ಆಯ್ರಾ ಅವರನ್ನು ಕರೆದುಕೊಂಡು ಹೋಗಲಾಗಿತ್ತೋ ಅಥವಾ ಇಲ್ಲವೋ ಎನ್ನುವ ವಿಚಾರ ತಿಳಿದಿಲ್ಲ.

ರಾಧಿಕಾ ಪಂಡಿತ್​ ಅವರು ಯಾವಾಗ ಚಿತ್ರರಂಗಕ್ಕೆ ಕಂಬ್ಯಾಕ್​ ಮಾಡುತ್ತಾರೆ ಎನ್ನುವ ವಿಚಾರ ಇನ್ನೂ ಅಧಿಕೃತವಾಗಿಲ್ಲ. ಅತ್ತ ಯಶ್​, ‘ಕೆಜಿಎಫ್​ 2’ ಪ್ರಮೋಷನ್​ಗೆ ಇನ್ನಷ್ಟೇ ಚಾಲನೆ ನೀಡಬೇಕಿದೆ. ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?

‘ಅವರ ವಯಸ್ಸಿನಲ್ಲಿ ನಾನು ಹೀಗೆ ಇರಲು ಸಾಧ್ಯವೇ?’ ರಾಧಿಕಾ ಪಂಡಿತ್​ಗೆ ಹೀಗೊಂದು ಅನುಮಾನ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ