AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್​​; ಕ್ಯೂಟ್​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​

ಆಯ್ರಾ ಮತ್ತು ಯಥರ್ವ್​ ಸ್ವಿಮ್ಮಿಂಗ್​ಪೂಲ್​ನಲ್ಲಿ ಸನ್​ಗ್ಲಾಸ್​ ಹಾಕಿ ಆಟ ಆಡುತ್ತಿದ್ದಾರೆ. ಇಬ್ಬರೂ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್​​; ಕ್ಯೂಟ್​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​
ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್
TV9 Web
| Edited By: |

Updated on: Oct 23, 2021 | 1:39 PM

Share

ರಾಧಿಕಾ ಪಂಡಿತ್​ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್​ ಆಗಿಲ್ಲ. ಆ ಬಗ್ಗೆ ಅವರ ಅಭಿಮಾನಿಗಳಿಗೆ ಬೇಸರ ಇದ್ದೇ ಇದೆ. ಆದರೆ, ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​. ಅಭಿಮಾನಿಗಳ ಜತೆ ಸದಾ ಸಂಪರ್ಕದಲ್ಲಿರೋಕೆ ಅವರು ಒಂದಿಲ್ಲೊಂದು ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ. ಮಕ್ಕಳ ಬಗ್ಗೆ ಸಾಕಷ್ಟು ಫೋಟೋಗಳನ್ನು ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಹಬ್ಬ-ಹರಿದಿನ ಇದ್ದಾಗ ಪತಿ ಯಶ್​ ಹಾಗೂ ಮಕ್ಕಳಾದ ಆಯ್ರಾ ಮತ್ತು ಯಥರ್ವ್​ ಜತೆಗೆ ಪೂಜೆ ಮಾಡುತ್ತಿರುವ ಫೋಟೋ ಹಾಕುತ್ತಾರೆ. ಇನ್ನು ರಜಾ ದಿನಗಳನ್ನು ಕಳೆಯೋಕೆ ಹೊರಗೆ ಹೋದರೆ ಫ್ಯಾಮಿಲಿ ಫೋಟೋ ಹಂಚಿಕೊಳ್ಳುತ್ತಾರೆ. ಈಗ ರಾಧಿಕಾ ಪಂಡಿತ್ ಹೊಸ ಫೋಟೋ ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

ಆಯ್ರಾ ಮತ್ತು ಯಥರ್ವ್​ ಸ್ವಿಮ್ಮಿಂಗ್​ಪೂಲ್​ನಲ್ಲಿ ಸನ್​ಗ್ಲಾಸ್​ ಹಾಕಿ ಆಟ ಆಡುತ್ತಿದ್ದಾರೆ. ಇಬ್ಬರೂ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳ ಖುಷಿಯಾಗಿದ್ದಾರೆ. ಅಲ್ಲದೆ, ಆಯ್ರಾ ಮತ್ತು ಯಥರ್ವ್​ ಕ್ಯೂಟ್​ನೆಸ್​ ಬಣ್ಣಿಸಿದ್ದಾರೆ. ಇನ್ನೂ ಕೆಲವರು ಈ ಫೋಟೋ ತೆಗೆದವರು ಯಾರು ಎಂಬುದನ್ನು ಪತ್ತೆ ಹಚ್ಚಲು ಯಥರ್ವ್​ ಸನ್​ಗ್ಲಾಸ್​ ಜೂಮ್​ ಮಾಡಿ ನೋಡಿದ್ದಾರೆ. ಈ ಬಗ್ಗೆ ಕಮೆಂಟ್​ ಕೂಡ ಮಾಡಿದ್ದಾರೆ. ಇದಕ್ಕೆ ರಾಧಿಕಾ ಪಂಡಿತ್​ ಉತ್ತರಿಸಿದ್ದು, ‘ಫೋಟೋ ತೆಗೆದಿದ್ದು ನಾನೇ’ ಎಂದು ಹೇಳಿಕೊಂಡಿದ್ದಾರೆ.

ರಾಧಿಕಾ ಪಂಡಿತ್​ ಹಾಗೂ ಯಶ್​ ಇತ್ತೀಚೆಗೆ ದುಬೈಗೆ ತೆರಳಿದ್ದರು. ಅಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಯಶ್​ ಸಿಂಹಕ್ಕೆ ಮಾಂಸ ತಿನ್ನಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ಲಕ್ಷಾಂತರ ಲೈಕ್ಸ್​ ಹಾಗೂ ವೀವ್ಸ್​ ಗಿಟ್ಟಿಸಿಕೊಂಡಿದೆ. ಅಂದಹಾಗೆ, ಯಶ್​ ಜತೆ ಯಥರ್ವ್​ ಹಾಗೂ ಆಯ್ರಾ ಅವರನ್ನು ಕರೆದುಕೊಂಡು ಹೋಗಲಾಗಿತ್ತೋ ಅಥವಾ ಇಲ್ಲವೋ ಎನ್ನುವ ವಿಚಾರ ತಿಳಿದಿಲ್ಲ.

ರಾಧಿಕಾ ಪಂಡಿತ್​ ಅವರು ಯಾವಾಗ ಚಿತ್ರರಂಗಕ್ಕೆ ಕಂಬ್ಯಾಕ್​ ಮಾಡುತ್ತಾರೆ ಎನ್ನುವ ವಿಚಾರ ಇನ್ನೂ ಅಧಿಕೃತವಾಗಿಲ್ಲ. ಅತ್ತ ಯಶ್​, ‘ಕೆಜಿಎಫ್​ 2’ ಪ್ರಮೋಷನ್​ಗೆ ಇನ್ನಷ್ಟೇ ಚಾಲನೆ ನೀಡಬೇಕಿದೆ. ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?

‘ಅವರ ವಯಸ್ಸಿನಲ್ಲಿ ನಾನು ಹೀಗೆ ಇರಲು ಸಾಧ್ಯವೇ?’ ರಾಧಿಕಾ ಪಂಡಿತ್​ಗೆ ಹೀಗೊಂದು ಅನುಮಾನ

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ