AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಸಮುದ್ರ ತೀರ ಹಾಗೂ ಕುಟುಂಬ; ಯಶ್-ರಾಧಿಕಾ ಫ್ಯಾಮಿಲಿ ಟೈಮ್ ಹೇಗಿತ್ತು ನೋಡಿ

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈ ವಾರವೂ ಅದನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ರಾಧಿಕಾ ಪಂಡಿತ್ ಅವರು ಸಮುದ್ರ ತೀರದಲ್ಲಿ ಕುಳಿತಿದ್ದಾರೆ. ಯಶ್ ಕೂಡ ಅವರ ಜೊತೆ ಇದ್ದಾರೆ. ಯಶ್ ಹೆಗಲ ಮೇಲೆ ಆಯ್ರಾ ಯಶ್ ಕೂಡ ಕುಳಿತಿದ್ದಾರೆ.

Radhika Pandit: ಸಮುದ್ರ ತೀರ ಹಾಗೂ ಕುಟುಂಬ; ಯಶ್-ರಾಧಿಕಾ ಫ್ಯಾಮಿಲಿ ಟೈಮ್ ಹೇಗಿತ್ತು ನೋಡಿ
ರಾಧಿಕಾ, ಯಶ್, ಆಯ್ರಾ
ರಾಜೇಶ್ ದುಗ್ಗುಮನೆ
|

Updated on:Sep 10, 2023 | 11:01 AM

Share

ಯಶ್ ಅವರು ‘ಕೆಜಿಎಫ್ 2’ ಸಿನಿಮಾ (KGF Chapter 2 Movie) ಬಳಿಕ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ಫ್ಯಾಮಿಲಿ ಜೊತೆ ಅವರು ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಹಬ್ಬ-ಹರಿದಿನಗಳನ್ನು ಅವರು ಕುಟುಂಬದ ಜೊತೆ ಆಚರಿಸಿಕೊಳ್ಳುತ್ತಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ (Radhika Pandit) ಅವರು ಆಗಾಗ ಹಂಚಿಕೊಳ್ಳುತ್ತಾರೆ. ಈಗ ರಾಧಿಕಾ ಪಂಡಿತ್ ಅವರು ಹಂಚಿಕೊಂಡ ಹೊಸ ಫೋಟೋ ಗಮನ ಸೆಳೆಯುತ್ತಿದೆ. ಈ ಫೋಟೋದಲ್ಲಿ ಯಶ್-ಆಯ್ರಾ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈ ವಾರವೂ ಅದನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ರಾಧಿಕಾ ಪಂಡಿತ್ ಅವರು ಸಮುದ್ರ ತೀರದಲ್ಲಿ ಕುಳಿತಿದ್ದಾರೆ. ಯಶ್ ಕೂಡ ಅವರ ಜೊತೆ ಇದ್ದಾರೆ. ಯಶ್ ಹೆಗಲ ಮೇಲೆ ಆಯ್ರಾ ಯಶ್ ಕೂಡ ಕುಳಿತಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ರಾಧಿಕಾ ಹಾಗೂ ಯಶ್ ಅವರ ಅಭಿಮಾನಿಗಳು ಈ ಫೋಟೋನ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ನೀವು ಯಾವಾಗಲೂ ಸ್ಯಾಂಡಲ್​ವುಡ್​ನ ರಾಜಕುಮಾರಿ’; ರಾಧಿಕಾ ಪಂಡಿತ್ ಫೋಟೋಗೆ ಫ್ಯಾನ್ಸ್ ಕಮೆಂಟ್

ಯಶ್​ಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ‘ಕೆಜಿಎಫ್ 2’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಈ ಕಾರಣದಿಂದಲೇ ಅವರ ಮುಂದಿನ ಚಿತ್ರಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದಿದ್ದಾರೆ. ಸ್ಟಾರ್ ಹೀರೋಗಳ ಸಿನಿಮಾಗಳ ಬಗ್ಗೆ ಯಾವುವಾದರೂ ಅಪ್​​ಡೇಟ್ ಇದ್ದರೆ ಅದು ಲೀಕ್ ಆಗಿ ಬಿಡುತ್ತದೆ. ಆದರೆ, ಯಶ್ ಈ ವಿಚಾರದಲ್ಲಿ ಸಾಕಷ್ಟು ರಹಸ್ಯ ಕಾಯ್ದುಕೊಂಡಿದ್ದಾರೆ. ಬಾಲಿವುಡ್​ ಚಿತ್ರದಿಂದ ಅವರಿಗೆ ಆಫರ್ ಬಂದರೂ ಯಶ್ ಇದನ್ನು ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ಹೇಗಿತ್ತು ನೋಡಿ ಆಯ್ರಾ-ಯಥರ್ವ ರಕ್ಷಾ ಬಂಧನ ಆಚರಣೆ; ಫೋಟೋಗಳಲ್ಲಿ ವಿವರಿಸಿದ ರಾಧಿಕಾ ಪಂಡಿತ್

ರಾಧಿಕಾ ಪಂಡಿತ್ ಅವರಿಗೆ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಆದರೆ, ಅವರು ನಟನೆಗೆ ಮರಳಿಲ್ಲ. ಮಕ್ಕಳ ಆರೈಕೆಯಲ್ಲಿ ರಾಧಿಕಾ ಪಂಡಿತ್ ಅವರು ಬ್ಯುಸಿ ಆಗಿದ್ದಾರೆ. ಈ ಕಾರಣದಿಂದಲೇ ಅವರು ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ಬೇಸರ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:00 am, Sun, 10 September 23

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು