AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayra Yash: ಯಥರ್ವ್​ಗೆ ಸ್ನ್ಯಾಕ್ಸ್ ತಿನ್ನಿಸಲು ಹೋದ ಐರಾ; ಆಮೇಲೇನಾಯ್ತು? ವಿಡಿಯೋ ನೋಡಿ

Radhika Pandit: ನಟಿ ರಾಧಿಕಾ ಪಂಡಿತ್ ತಮ್ಮ ಮಕ್ಕಳ ತುಂಟಾಟದ ವಿಡಿಯೋಗಳನ್ನು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಐರಾ ತಮ್ಮ ಯಥರ್ವ್​​ಗೆ ಸ್ನ್ಯಾಕ್ಸ್ ತಿನಿಸಲು ಹೋಗುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ.

Ayra Yash: ಯಥರ್ವ್​ಗೆ ಸ್ನ್ಯಾಕ್ಸ್ ತಿನ್ನಿಸಲು ಹೋದ ಐರಾ; ಆಮೇಲೇನಾಯ್ತು? ವಿಡಿಯೋ ನೋಡಿ
ಐರಾ ಯಶ್ ತಮ್ಮ ಯಥರ್ವನಿಗೆ ತಿನ್ನಿಸಲು ಹೋಗುತ್ತಿರುವ ದೃಶ್ಯ (ಕೃಪೆ: ರಾಧಿಕಾ ಪಂಡಿತ್/ ಇನ್ಸ್ಟಾಗ್ರಾಂ)
Follow us
TV9 Web
| Updated By: shivaprasad.hs

Updated on:Dec 14, 2021 | 11:55 AM

ಸ್ಯಾಂಡಲ್​ವುಡ್​ನ ತಾರಾ ಜೋಡಿ ರಾಧಿಕಾ ಪಂಡಿತ್ ಹಾಗೂ ಯಶ್ ಎಂದರೆ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಅದರಲ್ಲೂ ರಾಧಿಕಾ ಪಂಡಿತ್ ತಮ್ಮ ಪುಟಾಣಿ ಮಕ್ಕಳ ತುಂಟಾಟದ ದೃಶ್ಯಗಳನ್ನು ಹಂಚಿಕೊಳ್ಳುತ್ತಾ, ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇಂದು (ಡಿಸೆಂಬರ್ 14) ಹೊಸ ವಿಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಐರಾ ಯಶ್ ಹಾಗೂ ಯಥರ್ವ್ ಜೊತೆಯಾಗಿ ಕುಳಿತಿದ್ದಾರೆ. ಐರಾ ಸ್ನ್ಯಾಕ್ಸ್ ತಿನ್ನುತ್ತಿದ್ದು, ಅದನ್ನು ತಮ್ಮ ಯಥರ್ವನಿಗೂ ಕೊಡಲು ಹೋಗಿದ್ದಾಳೆ. ಆಗ ರಾಧಿಕಾ ಪಂಡಿತ್ ಪುತ್ರಿಯನ್ನು ತಡೆದಿದ್ದಾರೆ. ಆಗ ಐರಾ ಪ್ರೀತಿಯಿಂದ ಯಥರ್ವ್​​ನನ್ನು ಮುದ್ದುಮಾಡಿದ್ದಾಳೆ. ಈ ಸುಂದರ ವಿಡಿಯೋವನ್ನು ರಾಧಿಕಾ ಪಂಡಿತ್ ಸೆರೆಹಿಡಿದು ಶೇರ್ ಮಾಡಿದ್ದಾರೆ. ಪುಟಾಣಿ ಮಕ್ಕಳ ಚಟುವಟಿಕೆ ಅಭಿಮಾನಿಗಳ ಮೊಗದಲ್ಲಿ ಸಂತಸ ಮೂಡಿಸಿದ್ದು, ಮೆಚ್ಚುಗೆ ಸೂಚಿಸುತ್ತಿದ್ದಾರೆ.

ರಾಧಿಕಾ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ:

Ayra Yash and Yatharv

ಐರಾ ಯಶ್ ಮತ್ತು ಯಥರ್ವ್ (ಕೃಪೆ: ರಾಧಿಕಾ ಪಂಡಿತ್/ ಇನ್ಸ್ಟಾಗ್ರಾಂ)

ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಐರಾ ಹಾಗೂ ಯಥರ್ವ್​​ರ ಚಿತ್ರ ಹಾಗೂ ವಿಡಿಯೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಐರಾ ಮೂರನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾಳೆ. ಆಗ ರಾಧಿಕಾ ಪಂಡಿತ್ ‘ನಿನ್ನ ಕೈ ಹಿಡಿದುಕೊಳ್ಳಲು ಯಾವಾಗಲೂ ಇರುತ್ತೇನೆ’ ಎಂದು ಬರೆದು ಹುಟ್ಟುಹಬ್ಬಕ್ಕೆ ಶುಭಕೋರಿದ್ದರು.

ಮಗಳು ಆಯ್ರಾ ಹಾಗೂ ಮಗ ಯಥರ್ವ್​ ಯಶ್​ ಆರೈಕೆಯಲ್ಲಿ ​ರಾಧಿಕಾ ಪಂಡಿತ್ ಬ್ಯುಸಿ ಆಗಿದ್ದಾರೆ. ಸದ್ಯ ಅವರು ಯಾವುದೇ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಸಂಸಾರದ ಕಡೆಗೆ ರಾಧಿಕಾ ಹೆಚ್ಚು ಗಮನ ನೀಡುತ್ತಿದ್ದಾರೆ. ಆದಷ್ಟು ಬೇಗ ಅವರು ನಟನೆಗೆ ಮರಳಲಿ ಎಂದು ಫ್ಯಾನ್ಸ್​ ಅಪೇಕ್ಷಿಸುತ್ತಿದ್ದಾರೆ.

ಇದನ್ನೂ ಓದಿ:

ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್​​; ಕ್ಯೂಟ್​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​

ನಟಿ ಕರೀನಾ ಕಪೂರ್​ ಸಂಪರ್ಕದಲ್ಲಿದ್ದ ಮೂವರಿಗೆ ಕೊರೋನಾ ಸೋಂಕು

Published On - 11:54 am, Tue, 14 December 21

ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್