James: ‘ಅಪ್ಪುವನ್ನು ಹುಡುಕಿ ಹೋಗುತ್ತೇನೆ’ ಎಂದು ನೋವಿನ ಮಾತನ್ನಾಡಿದ ರಾಘಣ್ಣ; ತಬ್ಬಿ ಸಂತೈಸಿದ ಶಿವಣ್ಣ

Raghavendra Rajkumar | Puneeth Rajkumar: ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಜೇಮ್ಸ್’ ಪ್ರಿ-ರಿಲೀಸ್ ಕಾರ್ಯಕ್ರಮ ನಡೆದಿದೆ. ಈ ವೇಳೆ ರಾಘವೇಂದ್ರ ರಾಜ್​ಕುಮಾರ್ ಮಾತನಾಡಿ, ನೋವಿನ ನುಡಿಗಳನ್ನಾಡಿದ್ದಾರೆ. ಶಿವಣ್ಣ ರಾಘಣ್ಣರನ್ನು ಸಂತೈಸಿದ್ದಾರೆ.

Follow us
| Updated By: shivaprasad.hs

Updated on:Mar 13, 2022 | 10:15 PM

ಬೆಂಗಳೂರು: ಅರಮನೆ ಮೈದಾನದಲ್ಲಿ ‘ಜೇಮ್ಸ್’ ಪ್ರಿ-ರಿಲೀಸ್ ಇವೆಂಟ್ (James Pre Release Event) ನಡೆದಿದೆ. ಈ ವೇಳೆ ಮಾತನಾಡಿದ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಬಹಳ ಭಾವುಕರಾಗಿ ನೋವಿನ ಮಾತುಗಳನ್ನು ಆಡಿದ್ದಾರೆ. ವೇದಿಕೆಯನ್ನೇರಿದ ಅವರು, ಈ ಕ್ಷಣ ಏನನ್ನಿಸುತ್ತಿದೆಯೋ ಆ ಮಾತುಗಳನ್ನು ಆಡುತ್ತೇನೆ ಎಂದು ಹೇಳಿದ್ದಾರೆ. ನಂತರ ಮಾತನಾಡಿದ ರಾಘಣ್ಣ, ‘‘ಎಮೋಶನಲ್ ಆಗಬಾರದು ಅಂತ ಅಂದುಕೊಳ್ಳುತ್ತೇನೆ. ಆದರೆ ಹಾಗೆಯೇ ಆಗುತ್ತದೆ’’ ಎಂದಿದ್ದಾರೆ. ಪುನೀತ್ ನಿಧನವನ್ನು ಉಲ್ಲೇಖಿಸಿ, ಭಾವುಕರಾದ ಅವರು, ‘‘ಚೆನ್ನಾಗಿ ಓಡುತ್ತಿದ್ದ ಗಾಡಿ ನಿಲ್ಲಿಸಿದ್ಯಾಕೆ? ನಂಗೆ ಹಾರ್ಟ್ ಅಟ್ಯಾಕ್ ಆಗಿತ್ತು.. ಸ್ಟ್ರೋಕ್ ಆಗಿತ್ತು. ಆದರೂ ಇದ್ದೇನೆ. ಇನ್ನು ಮುಂದೆ ಆಗುವುದಿಲ್ಲ. ಅವನನ್ನು ಹುಡುಕಿಕೊಂಡು ಹೋಗುತ್ತೇನೆ’’ ಎಂದು ಬಹಳ ಭಾವುಕರಾಗಿ ನೋವಿನ ಮಾತುಗಳನ್ನು ರಾಘಣ್ಣ ನುಡಿದಿದ್ದಾರೆ. ಈ ಮಾತುಗಳನ್ನು ಕೇಳಿ ಶಿವರಾಜ್​ಕುಮಾರ್ (Shiva Rajkumar) ಕೂಡ ಕಣ್ಣೀರು ಹಾಕಿದ್ದಾರೆ.

ನಂತರ ವೇದಿಕೆ ಮೇಲೆ ಬಂದ ಶಿವರಾಜ್​ಕುಮಾರ್ ರಾಘಣ್ಣಗೆ ಸಮಾಧಾನ ಹೇಳಿದರು. ನಂತರ ಸಹೋದರರು ತಬ್ಬಿಕೊಂಡು ಕಣ್ಣೀರಿಟ್ಟರು. ನಂತರ ಪುನಃ ಮಾತನಾಡಿದ ರಾಘವೇಂದ್ರ ರಾಜ್​ಕುಮಾರ್, ‘‘ಭಾವುಕನಾಗಿ ಹೀಗೆ ಹೇಳಿದೆ. ನಿಮ್ಮೆಲ್ಲರನ್ನು (ಅಭಿಮಾನಿಗಳನ್ನು) ಬಿಟ್ಟು ನಾನೆಲ್ಲಿ ಹೋಗಲಿ. ಇಲ್ಲೇ ಇರುತ್ತೇನೆ’’ ಎಂದು ನುಡಿದಿದ್ದಾರೆ. ಈ ಭಾವುಕ ಕ್ಷಣಕ್ಕೆ ಅಭಿಮಾನಿ ವೃಂದ, ದೊಡ್ಮನೆ ಕುಟುಂಬ ಸಾಕ್ಷಿಯಾಗಿದೆ.

ರಾಘವೇಂದ್ರ ರಾಜ್​ಕುಮಾರ್ ಮಾತುಗಳು ಇಲ್ಲಿವೆ:

‘ಜೇಮ್ಸ್’ ಬಗ್ಗೆ ಶಿವಣ್ಣ ಮಾತು:

ನಂತರ ಮಾತನಾಡಿದ ಶಿವರಾಜ್​ಕುಮಾರ್ ‘‘ರಾಘು ಮಾತನಾಡಿದ್ದು ನೋವು ಜಾಸ್ತಿಯಾಯಿತು. ಇವರೀರ್ವರೂ ನನಗಿಂತ ಚಿಕ್ಕವರು. ನಾನು ಹೇಗೆ ಇದನ್ನೆಲ್ಲಾ ನೋಡುತ್ತಾ ಇರಬೇಕು?’’ ಎಂದು ನೋವಿನಲ್ಲೇ ಪ್ರಶ್ನಿಸಿದ್ದಾರೆ. ‘‘ಹೊರಗಿನಿಂದ ನೋಡುವುದಕ್ಕೆ ನಗುತ್ತಾ ಇರುತ್ತೇವೆ. ಆದರೆ ಬಹಳ ಬೇಜಾರಾಗಿದೆ, ನೋವಾಗಿದೆ. ಅಪ್ಪ ಅಮ್ಮನ ಜತೆಗೆ ಚಿಕ್ಕವನು ಹೋಗಿದ್ದು ಬಹಳ ನೋವು ತಂದಿದೆ. ಆದರೆ ಇಂತಹ ತಮ್ಮನನ್ನು ಪಡೆಯಲು ತುಂಬಾ ಪುಣ್ಯ ಮಾಡಿದ್ದೆವು’’ ಎಂದಿದ್ದಾರೆ ಶಿವಣ್ಣ.

ಅಪ್ಪು ಜತೆ ನಟಿಸೋ ಆಸೆ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಸ್ಕ್ರಿಪ್ಟ್ ಕೂಡ ಕೇಳಿದ್ದೆವು ಎಂದು ಶಿವಣ್ಣ ಸ್ಮರಿಸಿಕೊಂಡಿದ್ದಾರೆ. ಹೊಸಪೇಟೆಯಲ್ಲಿ ಪ್ರಿ-ರಿಲೀಸ್ ಇವೆಂಟ್ ಸಾಧ್ಯವಾಗದ್ದರ ಬಗ್ಗೆ ಮಾತನಾಡಿದ ಶಿವಣ್ಣ, ಅನಿವಾರ್ಯ ಕಾರಣಗಳಿಂದ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸುತ್ತಿದ್ದೇವೆ. ಮುಂದೆ ಚಿತ್ರ ರಿಲೀಸ್ ಆದ ನಂತರ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇವೆ’’ ಎಂದು ಹೇಳಿದ್ದಾರೆ. ಇದೇ ವೇಳೆ ಶಕ್ತಿಧಾಮಕ್ಕೆ ಬಜೆಟ್​ನಲ್ಲಿ ಅನುದಾನ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿಗೆ ಶಿವಣ್ಣ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ:

James Pre-Release Event: ‘ನಮ್ಮ ಪಕ್ಕದಲ್ಲೇ ದೇವರಿದ್ದರು’; ಪುನೀತ್ ಬಗ್ಗೆ ಶ್ರೀಮುರಳಿ ಭಾವುಕ ಮಾತು

Priya Anand: ‘ಜೇಮ್ಸ್’ ಹಾಗೂ ಪುನೀತ್ ಬಗ್ಗೆ ಮಾತನಾಡುತ್ತಾ ಭಾವುಕರಾದ ಪ್ರಿಯಾ ಆನಂದ್

Published On - 10:11 pm, Sun, 13 March 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ