AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವೈಭವೋತ್ಸವ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದ ರಾಘವೇಂದ್ರ ರಾಜ್​ಕುಮಾರ್

ಕನ್ನಡ ಚಿತ್ರರಂಗದ ಹಿರಿಯ ನಟ ರಾಘವೇಂದ್ರ ರಾಜ್​​ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ‘ಇದನ್ನು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಅರ್ಪಿಸುವೆ’ ಎಂದು ರಾಘವೇಂದ್ರ ರಾಜ್​ಕುಮಾರ್ ಅವರು ಹೇಳಿದ್ದಾರೆ.

ಗುರುವೈಭವೋತ್ಸವ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದ ರಾಘವೇಂದ್ರ ರಾಜ್​ಕುಮಾರ್
Raghavendra Rajkumar
ಭೀಮೇಶ್​​ ಪೂಜಾರ್
| Edited By: |

Updated on: Feb 23, 2026 | 9:44 PM

Share

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ಇದೇ ಉತ್ಸವದ ವೇದಿಕೆಯಲ್ಲಿ ಹಲವು ಗಣ್ಯರಿಗೆ ಸನ್ಮಾನ ಮಾಡಲಾಗಿದೆ. ನಟ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗಿದೆ. ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದೇ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರಿಗೆ ರಾಯರ ಅನುಗೃಹ ಪ್ರಶಸ್ತಿ ಕೂಡ ನೀಡಿ ಗೌರವಿಸಲಾಯಿತು. ಅಮೆರಿಕದ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್​​ಕುಮಾರ್ ಅವರು ಕುಟುಂಬ ಸಮೇತರಾಗಿ ಭಾಗಿಯಾಗಿದ್ದರು.

ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಸ್ವೀಕರಿಸಿದ ಬಳಿಕ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದರು. ಡಾಕ್ಟರೇಟ್ ಪದವಿ ಸಿಕ್ಕಿದ್ದು ಪುಣ್ಯ. ಅದನ್ನ ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಅರ್ಪಿಸುವೆ. ನಾನು ಹುಟ್ಟಿದಾಗ ತಂದೆ ಅವರು ಮಂತ್ರಾಲಯ ಸಿನಿಮಾ ಮಾಡುತ್ತಿದ್ದರು. ಆಗ ನನಗೆ ರಾಘವೇಂದ್ರ ಅಂತ ನನಗೆ ಹೆಸರು ಇಟ್ಟಿದ್ರು. ಅದು ರಾಘವೇಂದ್ರ ರಾಜ್​ಕುಮಾರ್ ಆಗಿ ಬೆಳೆದು ಬಂದಿದೆ’ ಎಂದು ಅವರು ಹೇಳಿದರು.

‘ನನಗೆ ಈಗ ಡಾಕ್ಟರೇಟ್ ಪದವಿ ಕೊಟ್ಟಿದ್ದಾರೆ. ಇದರಿಂದ ಜವಾಬ್ದಾರಿ, ಭಯ ಜಾಸ್ತಿ ಆಗ್ತಿದೆ. ಏನು ಸಾಧನೆ ಮಾಡದೇ ಇರುವವನಿಗೆ ಯಾಕೆ ಕೊಟ್ಟರು ಎನಿಸುತ್ತದೆ. ದೇವರ ಆಶೀರ್ವಾದದಿಂದ ಬಂದಿದೆ. ಇನ್ಮೇಲೆ ನಾನು ಸಮಾಜ ಸೇವೆ ಮಾಡಿಕೊಂಡು ಜನರ ಜೊತೆ ಬೆರೆತು ಕೆಲಸ ಮಾಡುತ್ತೇನೆ. ತಂದೆ-ತಾಯಿ ಆಶೀರ್ವಾದ ಮಾಡಿ ಈ ಗೌರವ ಕೊಡಿಸಿರೋ ಥರ ಆಗಿದೆ. ಇದನ್ನು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಅರ್ಪಿಸುತ್ತಿದ್ದೇನೆ’ ಎಂದು ರಾಘವೇಂದ್ರ ರಾಜ್​ಕುಮಾರ್ ಅವರು ಹೇಳಿದರು.

ಸೆಲ್ಫಿಗಾಗಿ ಫ್ಯಾನ್ಸ್ ತಳ್ಳಾಟ: ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯುವ ರಾಜ್​ಕುಮಾರ್ ಮತ್ತು ವಿನಯ್ ರಾಜ್​ಕುಮಾರ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಕಾರು ಹತ್ತಲು ಬಿಡದೇ ಸೆಲ್ಫಿಗಾಗಿ ನೂಕಾಟ, ತಳ್ಳಾಟ ನಡೆಯಿತು. ಕೊನೆಗೂ ಅಭಿಮಾನಿಗಳಿಗೆ ಸೆಲ್ಫಿ ನೀಡಿ ಅವರಿಬ್ಬರು ತೆರಳಿದರು.

ಇದನ್ನೂ ಓದಿ: ಎದೆಯೊಳಗಿದ್ದ ಅಪ್ಪುವನ್ನು ಎದೆಯ ಮೇಲೆ ಹಚ್ಚೆಯಾಗಿ ಹಾಕಿಸಿಕೊಂಡ ರಾಘವೇಂದ್ರ ರಾಜ್​ಕುಮಾರ್

ರಾಘವೇಂದ್ರ ರಾಜ್​ಕುಮಾರ್ ಅವರಿಗೆ ಈಗ 60 ವರ್ಷ ವಯಸ್ಸು. 1988ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿ ಜನರನ್ನು ರಂಜಿಸಿದ್ದಾರೆ. ನಿರ್ಮಾಪಕನಾಗಿ ಸಾಕಷ್ಟು ಸಿನಿಮಾಗಳನ್ನು ನಿರ್ಮಿಸಿದ್ದಾರೆ. 2004ರ ಬಳಿಕ ಸತತ 15 ವರ್ಷಗಳ ಕಾಲ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದರು. ಈಗ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು