AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​

Raghavendra Rajkumar Health Update: ನಟ ರಾಘವೇಂದ್ರ ರಾಜ್​ಕುಮಾರ್​ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ಕುರಿತಂತೆ ಆಸ್ಪತ್ರೆಗೆ ಆಗಮಿಸಿದ್ದ ನಟ ಪುನೀತ್​ ರಾಜ್​ಕುಮಾರ್​ ಮಾತನಾಡಿ, ಆರೋಗ್ಯದಲ್ಲಿ ಚೇತರಿಕೆ ಇದೆ. ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​
ನಟ ರಾಘವೇಂದ್ರ ರಾಜ್​ಕುಮಾರ್
shruti hegde
| Edited By: |

Updated on:Feb 18, 2021 | 2:08 PM

Share

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ  ಕಾರಣ ನಟ ರಾಘವೇಂದ್ರ ರಾಜ್​ಕುಮಾರ್​ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಆಸ್ಪತ್ರೆಗೆ ಆಗಮಿಸಿದ್ದ ನಟ ಪುನೀತ್​ ರಾಜ್​ಕುಮಾರ್​  ರಾಘಣ್ಣ ಅವರ, ಆರೋಗ್ಯದಲ್ಲಿ ಚೇತರಿಕೆ ಇದೆ. ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇವತ್ತು ಅಥವಾ ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ.

ಆಸ್ಪತ್ರೆಗೆ ಆಗಮಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಮಾತನಾಡಿ, ರಾಘವೇಂದ್ರ ರಾಜ್​ಕುಮಾರ್​ ಆರೋಗ್ಯದಲ್ಲಿ ಚೇತರಿಕೆ ಇದೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಡಿಸ್ಚಾರ್ಜ್ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 10.30ಕ್ಕೆ ಡಿಸ್ಚಾರ್ಜ್ ಆಗಬೇಕಿತ್ತು, ಆದರೆ ಎರಡನೇ ದಿನವೂ ಚಿಕಿತ್ಸೆ ಮುಂದುವರೆದಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ನಟ ರಾಘವೇಂದ್ರ ರಾಜ್​ಕುಮಾರ್​ ಯಶವಂತಪುರದ ಕೊಲಂಬಿಯದ ಏಷ್ಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಿನ್ನೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಸಿನಿಮಾ ಶೂಟಿಂಗ್ ವೇಳೆ ಆಯಾಸದೊಂದಿಗೆ ಕೊಂಚ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿನ್ನೆ ನಟ ರಾಘವೇಂದ್ರ ರಾಜ್‌ ಕುಮಾರ್‌ ಲವಲವಿಕೆಯಿಂದ ಬೆಳಕು ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ರು. ಶೂಟಿಂಗ್‌ ವೇಳೆ ರಾಘಣ್ಣನ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣವೇ ಶೂಟಿಂಗ್ ಸೆಟ್‌ನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವರಾಜ್​ಕುಮಾರ್, ಪುನೀತ್ ರಾಜ್ ಕುಮಾರ್ ಹಾಗೂ ಶ್ರೀ ಮುರುಳಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ರಾಘಣ್ಣ ಅವರ ಆರೋಗ್ಯದ ಕುರಿತು ಅಭಿಮಾನಿಗಳ ಆಶೀರ್ವಾದ ಇರುವವರೆಗೂ ಏನೂ ಆಗಲ್ಲ. ಯಾರೊಬ್ಬರು ಆತಂಕಪಡಬೇಡಿ ಎಂದು ಶ್ರೀ ಮುರುಳಿ ಹೇಳಿದ್ದರು. ಅಂತೆಯೇ, ಇಂದಿನ ರಾಘವೇಂದ್ರ ರಾಜ್​ಕುಮಾರ್​ ಅವರ ಆರೋಗ್ಯದ ಪರಿಸ್ಥಿಯ ಬಗ್ಗೆ ಶಸ್ತ್ರ ಚಿಕಿತ್ಸೆಯ ಅವಶ್ಯಕತೆ ಇಲ್ಲ ಎಂಬುದನ್ನು ವೈದ್ಯರು ತಿಳಿಸಿರುವ ಮಾಹಿತಿಯನ್ನು ಪುನೀತ್​ ಹಂಚಿಕೊಂಡಿದ್ದಾರೆ.

ನಟ ಶಿವರಾಜ್​ಕುಮಾರ್​ ಮತ್ತು ಪುನೀತ್​ ರಾಜ್​ಕುಮಾರ್​ ದಂಪತಿ ಆಸ್ಪತ್ರೆಗೆ ಆಗಮಿಸಿ ರಾಘಣ್ಣವರ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಆಸ್ಪತ್ರೆಗೆ ಅಭಿಮಾನಿಗಳು ದೌಡಾಯಿಸಿದರೆ ಎದುರಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Raghavendra Rajkumar ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲು

Published On - 12:34 pm, Wed, 17 February 21

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ