AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​

Raghavendra Rajkumar Health Update: ನಟ ರಾಘವೇಂದ್ರ ರಾಜ್​ಕುಮಾರ್​ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ಕುರಿತಂತೆ ಆಸ್ಪತ್ರೆಗೆ ಆಗಮಿಸಿದ್ದ ನಟ ಪುನೀತ್​ ರಾಜ್​ಕುಮಾರ್​ ಮಾತನಾಡಿ, ಆರೋಗ್ಯದಲ್ಲಿ ಚೇತರಿಕೆ ಇದೆ. ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​
ನಟ ರಾಘವೇಂದ್ರ ರಾಜ್​ಕುಮಾರ್
shruti hegde
| Edited By: |

Updated on:Feb 18, 2021 | 2:08 PM

Share

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ  ಕಾರಣ ನಟ ರಾಘವೇಂದ್ರ ರಾಜ್​ಕುಮಾರ್​ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಆಸ್ಪತ್ರೆಗೆ ಆಗಮಿಸಿದ್ದ ನಟ ಪುನೀತ್​ ರಾಜ್​ಕುಮಾರ್​  ರಾಘಣ್ಣ ಅವರ, ಆರೋಗ್ಯದಲ್ಲಿ ಚೇತರಿಕೆ ಇದೆ. ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇವತ್ತು ಅಥವಾ ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ.

ಆಸ್ಪತ್ರೆಗೆ ಆಗಮಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಮಾತನಾಡಿ, ರಾಘವೇಂದ್ರ ರಾಜ್​ಕುಮಾರ್​ ಆರೋಗ್ಯದಲ್ಲಿ ಚೇತರಿಕೆ ಇದೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಡಿಸ್ಚಾರ್ಜ್ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 10.30ಕ್ಕೆ ಡಿಸ್ಚಾರ್ಜ್ ಆಗಬೇಕಿತ್ತು, ಆದರೆ ಎರಡನೇ ದಿನವೂ ಚಿಕಿತ್ಸೆ ಮುಂದುವರೆದಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ನಟ ರಾಘವೇಂದ್ರ ರಾಜ್​ಕುಮಾರ್​ ಯಶವಂತಪುರದ ಕೊಲಂಬಿಯದ ಏಷ್ಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಿನ್ನೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಸಿನಿಮಾ ಶೂಟಿಂಗ್ ವೇಳೆ ಆಯಾಸದೊಂದಿಗೆ ಕೊಂಚ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿನ್ನೆ ನಟ ರಾಘವೇಂದ್ರ ರಾಜ್‌ ಕುಮಾರ್‌ ಲವಲವಿಕೆಯಿಂದ ಬೆಳಕು ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ರು. ಶೂಟಿಂಗ್‌ ವೇಳೆ ರಾಘಣ್ಣನ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣವೇ ಶೂಟಿಂಗ್ ಸೆಟ್‌ನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವರಾಜ್​ಕುಮಾರ್, ಪುನೀತ್ ರಾಜ್ ಕುಮಾರ್ ಹಾಗೂ ಶ್ರೀ ಮುರುಳಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ರಾಘಣ್ಣ ಅವರ ಆರೋಗ್ಯದ ಕುರಿತು ಅಭಿಮಾನಿಗಳ ಆಶೀರ್ವಾದ ಇರುವವರೆಗೂ ಏನೂ ಆಗಲ್ಲ. ಯಾರೊಬ್ಬರು ಆತಂಕಪಡಬೇಡಿ ಎಂದು ಶ್ರೀ ಮುರುಳಿ ಹೇಳಿದ್ದರು. ಅಂತೆಯೇ, ಇಂದಿನ ರಾಘವೇಂದ್ರ ರಾಜ್​ಕುಮಾರ್​ ಅವರ ಆರೋಗ್ಯದ ಪರಿಸ್ಥಿಯ ಬಗ್ಗೆ ಶಸ್ತ್ರ ಚಿಕಿತ್ಸೆಯ ಅವಶ್ಯಕತೆ ಇಲ್ಲ ಎಂಬುದನ್ನು ವೈದ್ಯರು ತಿಳಿಸಿರುವ ಮಾಹಿತಿಯನ್ನು ಪುನೀತ್​ ಹಂಚಿಕೊಂಡಿದ್ದಾರೆ.

ನಟ ಶಿವರಾಜ್​ಕುಮಾರ್​ ಮತ್ತು ಪುನೀತ್​ ರಾಜ್​ಕುಮಾರ್​ ದಂಪತಿ ಆಸ್ಪತ್ರೆಗೆ ಆಗಮಿಸಿ ರಾಘಣ್ಣವರ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಆಸ್ಪತ್ರೆಗೆ ಅಭಿಮಾನಿಗಳು ದೌಡಾಯಿಸಿದರೆ ಎದುರಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Raghavendra Rajkumar ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲು

Published On - 12:34 pm, Wed, 17 February 21

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?