AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​

Raghavendra Rajkumar Health Update: ನಟ ರಾಘವೇಂದ್ರ ರಾಜ್​ಕುಮಾರ್​ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ಕುರಿತಂತೆ ಆಸ್ಪತ್ರೆಗೆ ಆಗಮಿಸಿದ್ದ ನಟ ಪುನೀತ್​ ರಾಜ್​ಕುಮಾರ್​ ಮಾತನಾಡಿ, ಆರೋಗ್ಯದಲ್ಲಿ ಚೇತರಿಕೆ ಇದೆ. ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​
ನಟ ರಾಘವೇಂದ್ರ ರಾಜ್​ಕುಮಾರ್
shruti hegde
| Edited By: |

Updated on:Feb 18, 2021 | 2:08 PM

Share

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ  ಕಾರಣ ನಟ ರಾಘವೇಂದ್ರ ರಾಜ್​ಕುಮಾರ್​ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಆಸ್ಪತ್ರೆಗೆ ಆಗಮಿಸಿದ್ದ ನಟ ಪುನೀತ್​ ರಾಜ್​ಕುಮಾರ್​  ರಾಘಣ್ಣ ಅವರ, ಆರೋಗ್ಯದಲ್ಲಿ ಚೇತರಿಕೆ ಇದೆ. ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇವತ್ತು ಅಥವಾ ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ.

ಆಸ್ಪತ್ರೆಗೆ ಆಗಮಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಮಾತನಾಡಿ, ರಾಘವೇಂದ್ರ ರಾಜ್​ಕುಮಾರ್​ ಆರೋಗ್ಯದಲ್ಲಿ ಚೇತರಿಕೆ ಇದೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಡಿಸ್ಚಾರ್ಜ್ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 10.30ಕ್ಕೆ ಡಿಸ್ಚಾರ್ಜ್ ಆಗಬೇಕಿತ್ತು, ಆದರೆ ಎರಡನೇ ದಿನವೂ ಚಿಕಿತ್ಸೆ ಮುಂದುವರೆದಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ನಟ ರಾಘವೇಂದ್ರ ರಾಜ್​ಕುಮಾರ್​ ಯಶವಂತಪುರದ ಕೊಲಂಬಿಯದ ಏಷ್ಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಿನ್ನೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಸಿನಿಮಾ ಶೂಟಿಂಗ್ ವೇಳೆ ಆಯಾಸದೊಂದಿಗೆ ಕೊಂಚ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿನ್ನೆ ನಟ ರಾಘವೇಂದ್ರ ರಾಜ್‌ ಕುಮಾರ್‌ ಲವಲವಿಕೆಯಿಂದ ಬೆಳಕು ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ರು. ಶೂಟಿಂಗ್‌ ವೇಳೆ ರಾಘಣ್ಣನ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣವೇ ಶೂಟಿಂಗ್ ಸೆಟ್‌ನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವರಾಜ್​ಕುಮಾರ್, ಪುನೀತ್ ರಾಜ್ ಕುಮಾರ್ ಹಾಗೂ ಶ್ರೀ ಮುರುಳಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ರಾಘಣ್ಣ ಅವರ ಆರೋಗ್ಯದ ಕುರಿತು ಅಭಿಮಾನಿಗಳ ಆಶೀರ್ವಾದ ಇರುವವರೆಗೂ ಏನೂ ಆಗಲ್ಲ. ಯಾರೊಬ್ಬರು ಆತಂಕಪಡಬೇಡಿ ಎಂದು ಶ್ರೀ ಮುರುಳಿ ಹೇಳಿದ್ದರು. ಅಂತೆಯೇ, ಇಂದಿನ ರಾಘವೇಂದ್ರ ರಾಜ್​ಕುಮಾರ್​ ಅವರ ಆರೋಗ್ಯದ ಪರಿಸ್ಥಿಯ ಬಗ್ಗೆ ಶಸ್ತ್ರ ಚಿಕಿತ್ಸೆಯ ಅವಶ್ಯಕತೆ ಇಲ್ಲ ಎಂಬುದನ್ನು ವೈದ್ಯರು ತಿಳಿಸಿರುವ ಮಾಹಿತಿಯನ್ನು ಪುನೀತ್​ ಹಂಚಿಕೊಂಡಿದ್ದಾರೆ.

ನಟ ಶಿವರಾಜ್​ಕುಮಾರ್​ ಮತ್ತು ಪುನೀತ್​ ರಾಜ್​ಕುಮಾರ್​ ದಂಪತಿ ಆಸ್ಪತ್ರೆಗೆ ಆಗಮಿಸಿ ರಾಘಣ್ಣವರ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಆಸ್ಪತ್ರೆಗೆ ಅಭಿಮಾನಿಗಳು ದೌಡಾಯಿಸಿದರೆ ಎದುರಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Raghavendra Rajkumar ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲು

Published On - 12:34 pm, Wed, 17 February 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ