AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raghavendra Rajkumar: ರಾಘವೇಂದ್ರ ರಾಜ್​ಕುಮಾರ್​ಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ನಡೆಸಲು ಸಿದ್ಧತೆ

Raghavendra Rajkumar: ನಿನ್ನೆ ಸಂಜೆ 6 ಗಂಟೆಗೆ ಆರೋಗ್ಯ ತಪಾಸಣೆಗೆಂದು ಬಂದಿದ್ದ ರಾಘವೇಂದ್ರ ರಾಜ್​ಕುಮಾರ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಯಂಕಾಲ ಸ್ವಲ್ಪ ಎದೆ ನೋವು ಕಾಣಿಸಿಕೊಂಡಿತ್ತು, ಕೊಂಚ ಬೆವರುತ್ತಿದ್ರು. ಹಾಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಗಂಭೀರ ಸಮಸ್ಯೆಯಿಲ್ಲ ಎಂದು ಹೇಳಲಾಗಿತ್ತು.

Raghavendra Rajkumar: ರಾಘವೇಂದ್ರ ರಾಜ್​ಕುಮಾರ್​ಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ನಡೆಸಲು ಸಿದ್ಧತೆ
ನಟ ರಾಘವೇಂದ್ರ ರಾಜ್​ಕುಮಾರ್
Skanda
| Edited By: ಸಾಧು ಶ್ರೀನಾಥ್​|

Updated on: Feb 17, 2021 | 11:07 AM

Share

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಘವೇಂದ್ರ ರಾಜ್‌ಕುಮಾರ್‌ಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಚಿತ್ರೀಕರಣದ ಸಂದರ್ಭದಲ್ಲಿ ಸುಸ್ತಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ರಾಘವೇಂದ್ರ ರಾಜಕುಮಾರ್​ ಅವರಿಗೆ ಇಂದು ವೈದ್ಯರು ಶಸ್ತ್ರಚಿಕಿತ್ಸೆ ಮಾಡಲಿದ್ದಾರೆ. ತಂದೆಯ ಅನಾರೋಗ್ಯದ ಬಗ್ಗೆ ನಿನ್ನೆ ಪ್ರತಿಕ್ರಿಯಿಸಿದ್ದ ಪುತ್ರ ವಿನಯ್ ರಾಜ್​ಕುಮಾರ್ ಸಿನಿಮಾ ಶೂಟಿಂಗ್​ನಲ್ಲಿ ಸುಸ್ತಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಬೆಳಕು’ ಚಿತ್ರದ ಶೂಟಿಂಗ್​ ವೇಳೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಹಾಗಾಗಿ, ಆಸ್ಪತ್ರೆಗೆ ಸೇರಿಸಲಾಗಿದೆ. ಶೂಟಿಂಗ್ ಸೆಟ್​ನಿಂದ ನೇರವಾಗಿ ಜನರಲ್​ ಹೆಲ್ತ್​ ಚೆಕಪ್​ಗಾಗಿ ಆಸ್ಪತ್ರೆಗೆ ಬಂದಿದ್ದರು. ಈ ಬಗ್ಗೆ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ನಿನ್ನೆ ಸಂಜೆ 6 ಗಂಟೆಗೆ ಆರೋಗ್ಯ ತಪಾಸಣೆಗೆಂದು ಬಂದಿದ್ದ ರಾಘವೇಂದ್ರ ರಾಜ್​ಕುಮಾರ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಯಂಕಾಲ ಸ್ವಲ್ಪ ಎದೆ ನೋವು ಕಾಣಿಸಿಕೊಂಡಿತ್ತು, ಕೊಂಚ ಬೆವರುತ್ತಿದ್ರು. ಹಾಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ವೇಳೆ, ಶಿವ ರಾಜ್​ಕುಮಾರ್ ಮತ್ತು ಪುನೀತ್ ರಾಜ್​ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸದ್ಯ ಯಾವುದೇ ತೊಂದರೆ ಇಲ್ಲ, ಗಂಭೀರ ಸಮಸ್ಯೆಯಿಲ್ಲ ಎಂದು ನಿನ್ನೆ ಹೇಳಲಾಗಿತ್ತಾದರೂ ಇಂದು ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿರುವುದು ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ 2013ರಲ್ಲಿ ಮೆದುಳಿನ ಸಮಸ್ಯೆಗೆ ಸಂಬಂಧಿಸಿದಂತೆ ರಾಘವೇಂದ್ರ ರಾಜ್​ಕುಮಾರ್​ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

Follow Us
Skanda
Skanda
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ