AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿಆರ್ ದೋಸೆ ಮೆಲ್ಲುತ್ತಾ ಜಗ್ಗೇಶ್-ರಾಘಣ್ಣ ಮಾತು, ನಡುವೆ ಸುಳಿದಾಡಿದ ಅಪ್ಪು ನೆನಪು

Raghvendra Stores: ಹಳೆಯ ಗೆಳೆಯರಾದ ರಾಘವೇಂದ್ರ ರಾಜ್​ಕುಮಾರ್ ಹಾಗೂ ಜಗ್ಗೇಶ್ ಒಟ್ಟಿಗೆ ಕೂತು ದೋಸೆ ಮೆಲ್ಲುತ್ತಾ ಮಾತುಕತೆ ನಡೆಸಿದ್ದಾರೆ. ಇಬ್ಬರು ದಿಗ್ಗಜರ ಮಾತುಕತೆಯಲ್ಲಿ ಹಲವು ವಿಷಯ ಚರ್ಚೆಯಾಗಿವೆ.

ಸಿಟಿಆರ್ ದೋಸೆ ಮೆಲ್ಲುತ್ತಾ ಜಗ್ಗೇಶ್-ರಾಘಣ್ಣ ಮಾತು, ನಡುವೆ ಸುಳಿದಾಡಿದ ಅಪ್ಪು ನೆನಪು
ಜಗ್ಗೇಶ್-ರಾಘವೇಂದ್ರ ರಾಜ್​ಕುಮಾರ್
ಮಂಜುನಾಥ ಸಿ.
|

Updated on: Apr 20, 2023 | 7:48 PM

Share

ಜಗ್ಗೇಶ್ (Jaggesh) ಹಾಗೂ ದೊಡ್ಮನೆ ನಡುವಿರುವ ಬಂಧ-ಅನುಬಂಧದ ಬಗ್ಗೆ ವಿಶೇಷ ಟಿಪ್ಪಣಿಯ ಅಗತ್ಯವಿಲ್ಲ. ಡಾ ರಾಜ್​ಕುಮಾರ್ (Dr Rajkumar) ಅವರ ದೊಡ್ಡ ಅಭಿಮಾನಿಯಾಗಿದ್ದ ಜಗ್ಗೇಶ್ ಅವರ ಮಕ್ಕಳಾದ ಶಿವರಾಜ್ ಕುಮಾರ್ (Shiva Rajkumar) ಹಾಗೂ ಪುನೀತ್ ರಾಜ್​ಕುಮಾರ್ (Puneeth Rajkumar) ಇಬ್ಬರಿಗೂ ಅತ್ಯಾಪ್ತರು. ಅಪ್ಪು ಅಗಲಿದಾಗ ಅತೀವ ಸಂಕಟಪಟ್ಟ ಜೀವಗಳಲ್ಲಿ ಜಗ್ಗೇಶ್ ಸಹ ಒಬ್ಬರು. ಇದೀಗ ಅದೇ ದೊಡ್ಮನೆಯ ಮತ್ತೊಬ್ಬ ಸದಸ್ಯ ರಾಘವೇಂದ್ರ ರಾಜ್​ಕುಮಾರ್ ಅವರೊಟ್ಟಿಗೆ ಗಳಸ್ಯ-ಕಂಠಸ್ಯ ಒಡನಾಟ ಜಗ್ಗೇಶ್ ಅವರಿಗಿರಲಿಲ್ಲವಾದರೂ ಇಬ್ಬರು ಗೆಳೆಯರೇ. ಇದೀಗ ಈ ಇಬ್ಬರು ಹಳೆಯ ಗೆಳೆಯರು ದೋಸೆ ಮೆಲ್ಲುತ್ತಾ ಲೋಕಾಭಿರಾಮವಾಗಿ ಮಾತನಾಡಿದ್ದಾರೆ. ಇದಕ್ಕೆ ಕಾರಣ ರಾಘವೇಂದ್ರ ಸ್ಟೋರ್ಸ್.

ಜಗ್ಗೇಶ್ ನಟನೆಯ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇದೇ ಕಾರಣದಿಂದ ಜಗ್ಗೇಶ್ ಅವರನ್ನು ರಾಘವೇಂದ್ರ ರಾಜ್​ಕುಮಾರ್ ಅವರು ಸಂದರ್ಶನ ಮಾಡಿದ್ದಾರೆ, ಅದೂ ಬೆಂಗಳೂರಿನ ಜನಪ್ರಿಯ ಸಿಟಿಆರ್ ಹೋಟೆಲ್​ನಲ್ಲಿ. ಇಬ್ಬರು ಹಳೆ ಗೆಳೆಯರ ಮಾತು ರಾಘವೇಂದ್ರ ಸ್ಟೋರ್ಸ್ ಸಿನಿಮಾಕ್ಕಷ್ಟೆ ಸೀಮಿತವಾಗದೆ ಇನ್ನೂ ಕೆಲವು ವಿಷಯಗಳನ್ನು ಸುತ್ತುಹಾಕಿತು, ಮಾತುಕತೆಯಲ್ಲಿ ಅಪ್ಪು ನೆನಪು ಹೆಚ್ಚು ಸುಳಿದಾಡಿತು.

ಅಪ್ಪು ಅವರು ರಾಘವೇಂದ್ರ ಸ್ಟೋರ್ಸ್ ಸಿನಿಮಾ ಕತೆ ಬಗ್ಗೆ ಹೊಂದಿದ್ದ ಪ್ರೀತಿ, ನಂಬಿಕೆಯ ಬಗ್ಗೆ ಮಾತನಾಡಿದ ಜಗ್ಗೇಶ್, ಒಮ್ಮೆ ನನ್ನನ್ನು ಬರುವಂತೆ ನಿರ್ದೇಶಕ ಸಂತೋಶ್ ಆನಂದ್​ರಾಮ್ ಕರೆದರು. ಅಂತೆಯೇ ನಾನು ಉಟ್ಟಿದ್ದ ಸಾಧಾರಣ ಬಟ್ಟೆಯಲ್ಲಿಯೇ ಹೋದಾಗ ಅಲ್ಲಿ ಅದಾಗಲೇ ಪುನೀತ್ ರಾಜ್​ಕುಮಾರ್, ಆಸಕ್ತಿಯಿಂದ ಸಂತೋಶ್ ಆನಂದ್​ ರಾಮ್ ಹೇಳುತ್ತಿದ್ದ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಕತೆ ಕೇಳುತ್ತಿದ್ದರು. ನಾನು ಅವರಿಗೆ ಡಿಸ್ಟರ್ಬ್ ಮಾಡುವುದು ಬೇಡವೆಂದು ಹೊರಗೆ ಕುಳಿತೆ. ಪುನೀತ್ ಕತೆ ಕೇಳಿ ಹೊರಗೆ ಬಂದರೆ ಅದೇನೋ ಕಾಕತಾಳೀಯವೋ ಅಂದು ಎಲ್ಲರೂ ಕಪ್ಪು ಬಟ್ಟೆಯನ್ನೇ ತೊಟ್ಟಿದ್ದೆವು. ಅಂದು ನಮ್ಮ ಜೊತೆಗೂಡಿದ ಯೋಗಿ ಸಹ ಕಪ್ಪು ಬಣ್ಣದ ಬಟ್ಟೆಯನ್ನೇ ತೊಟ್ಟಿದ್ದರು, ನಾವೆಲ್ಲರೂ ಅಂದು ಒಟ್ಟಿಗೆ ಊಟ ಮಾಡಿ ಸಾಕಷ್ಟು ಮಾತನಾಡಿ ಒಂದು ಫೋಟೊ ಸಹ ತೆಗೆಸಿಕೊಂಡೆವು” ಎಂದು ನೆನಪು ಮಾಡಿಕೊಂಡರು.

ಇದನ್ನೂ ಓದಿ:‘ರಾಘವೇಂದ್ರ ಸ್ಟೋರ್ಸ್​’ ಚಿತ್ರದ ಟ್ರೇಲರ್​ ಬಿಡುಗಡೆ; ಮದುವೆ ಪ್ರಸಂಗದಿಂದ ನಕ್ಕು ನಗಿಸ್ತಾರೆ ಜಗ್ಗೇಶ್​

”ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಕತೆ ಪುನೀತ್ ರಾಜ್​ಕುಮಾರ್ ಅವರಿಗೆ ಬಹಳ ಇಷ್ಟವಾಗಿತ್ತು. ಕತೆ ಕೇಳಿದ ಅಪ್ಪು, ವಿಲನ್ ಪಾತ್ರಕ್ಕೆ ಲಿಂಕ್ ವೀಕ್ ಎನ್ನಿಸುತ್ತಿದೆ ಅದೊಂದನ್ನು ಕೊಡಿ ಇನ್ನೆಲ್ಲ ಸೂಪರ್ ಆಗಿದೆ ಎಂದಿದ್ದರು. ಅಲ್ಲದೆ ಈ ಸಿನಿಮಾಕ್ಕೆ ಒಂದು ಹಾಡು ಹಾಡುವ ಅಥವಾ ಯಾವುದಾದರೂ ಒಂದು ಸಣ್ಣ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಆಸೆ ಅಪ್ಪುಗೆ ಇತ್ತು” ಎಂದು ಜಗ್ಗೇಶ್ ಹೇಳಿದರು. ಆಗ ರಾಘಣ್ಣ, ಅದಕ್ಕೆ ನೋಡಿ ಅವನ ಕರ್ತವ್ಯ ಪೂರ್ತಿ ಮಾಡಲು ದೇವರು ನನ್ನನ್ನು ಕಳಿಸಿದ್ದಾನೆ. ಅವನನ್ನೂ ಜೊತೆಗೆ ಕರೆದುಕೊಂಡು ಬಂದಿದ್ದೇನೆ ಎನ್ನುತ್ತಾ ಜೇಬಿನಲ್ಲಿದ್ದ ಅಪ್ಪು ಚಿತ್ರವನ್ನು ತೋರಿಸಿದರು.

ಜಗದೀಶ್ ಶೆಟ್ಟರ್ ಮಗಳ ಮದುವೆಯ ದಿನ ಸಿಕ್ಕು ಪುನೀತ್ ರಾಜ್​ಕುಮಾರ್ ಜೊತೆಗೆ ಮಾತನಾಡಿದ ಬಗ್ಗೆಯೂ ನಟ ಜಗ್ಗೇಶ್ ನೆನಪು ಮಾಡಿಕೊಂಡರು. ಇವೆಲ್ಲ ಮಾತುಕತೆಗಳ ನಡುವೆ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಬಗ್ಗೆಯೂ ಹಲವು ಮಾತುಗಳನ್ನಾಡಿದರು ರಾಘಣ್ಣ ಹಾಗೂ ಜಗ್ಗೇಶ್.

ರಾಘವೇಂದ್ರ ಸ್ಟೋರ್ಸ್ ಸಿನಿಮಾವನ್ನು ಸಂತೋಶ್ ಆನಂದ್​ರಾಮ್ ನಿರ್ದೇಶನ ಮಾಡಿದ್ದು ಹೊಂಬಾಳೆ ಫಿಲಮ್ಸ್​ ನಿರ್ಮಾಣ ಮಾಡಿದೆ. ಸಿನಿಮಾದಲ್ಲಿ ವಯಸ್ಕ್ ಬ್ರಹ್ಮಚಾರಿಯಾಗಿ ಜಗ್ಗೇಶ್ ನಟಿಸಿದ್ದಾರೆ. ಸಿನಿಮಾದಲ್ಲಿ ದತ್ತಣ್ಣ, ಅಚ್ಯುತ್ ಕುಮಾರ್, ನಾಯಕಿಯಾಗಿ ಶ್ವೇತಾ ಶ್ರೀವತ್ಸ ನಟಿಸಿದ್ದಾರೆ. ಸಿನಿಮಾ ಏಪ್ರಿಲ್ 28ಕ್ಕೆ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ