AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಪುಣ್ಯಸ್ಮರಣೆಯಂದು ಅಭಿಮಾನಿಗಳಿಗೆ ಕರೆ ಕೊಟ್ಟ ರಾಘಣ್ಣ

Puneeth Rajkumar death anniversary: ಪುನೀತ್ ರಾಜ್​ಕುಮಾರ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಿದ್ದ ರಾಘವೇಂದ್ರ ರಾಜ್​ಕುಮಾರ್ ಅಪ್ಪು ಅಭಿಮಾನಿಗಳಲ್ಲಿ ಮನವಿ ಒಂದನ್ನು ಮಾಡಿದ್ದಾರೆ.

ಪುನೀತ್ ಪುಣ್ಯಸ್ಮರಣೆಯಂದು ಅಭಿಮಾನಿಗಳಿಗೆ ಕರೆ ಕೊಟ್ಟ ರಾಘಣ್ಣ
ಮಂಜುನಾಥ ಸಿ.
|

Updated on:Oct 29, 2024 | 1:12 PM

Share

ಪುನೀತ್ ರಾಜ್​ಕುಮಾರ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆ ಇಂದು. ಪ್ರತಿ ವರ್ಷದಂತೆ ಪುನೀತ್ ಸಮಾಧಿಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭೇಟಿ ನೀಡಿ ಪೂಜೆ ಮಾಡಿ, ಕೈ ಮುಗಿದಿದ್ದಾರೆ. ಪುನೀತ್ ರಾಜ್​ಕುಮಾರ್ ಕುಟುಂಬದವರು ಸಹ ಅಪ್ಪು ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಮಾಡಿದ್ದಾರೆ. ಅಶ್ವಿನಿ ಪುನೀತ್ ರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಇನ್ನೂ ಹಲವು ಕುಟುಂಬ ಸದಸ್ಯರು ಅಪ್ಪು ಸಮಾಧಿಗೆ ಇಂದು ಪೂಜೆ ಮಾಡಿದ್ದಾರೆ. ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರಾಘವೇಂದ್ರ ರಾಜ್​ಕುಮಾರ್ ಅಪ್ಪು ಅಭಿಮಾನಿಗಳ ಬಳಿ ಮನವಿಯೊಂದನ್ನು ಮಾಡಿದ್ದಾರೆ.

‘ಅಪ್ಪು ಅನ್ನು ನೆನಯದೇ ಇರುವ ದಿನವಿಲ್ಲ. ದಿನಗಳು ಬೇಗ-ಬೇಗ ಹೋಗುತ್ತಲೇ ಇವೆ, ಆದರೆ ನಾವು ಮಾತ್ರ ಪ್ರತಿದಿನವೂ ಪುನೀತ್ ಅನ್ನು ನೆನಪಿಸಿಕೊಳ್ಳುತ್ತಲೇ ಇದ್ದೀವಿ. ಜನಗಳ ಪ್ರೀತಿ-ವಿಶ್ವಾಸ ಕಡಿಮೆ ಆಗುತ್ತಲೇ ಇಲ್ಲ. ವರ್ಷದಿಂದ ವರ್ಷಕ್ಕೆ ಅದು ಹೆಚ್ಚಾಗುತ್ತಲೇ ಇದೆ. ಪ್ರತಿ ವರ್ಷ ಎಲ್ಲರೂ ಬಂದು ಇಲ್ಲಿ ಪೂಜೆ ಮಾಡುತ್ತಿದ್ದಾರೆ. ಅಭಿಮಾನಿಗಳಿಗೆ ಒಂದು ಮನವಿ ಎಂದರೆ, ಅಪ್ಪು ಮಾಡಿದ ಸೇವೆಗಳನ್ನು ನೀವು ಮಾಡಿ, ಅವರ ಸೇವಾಮನೋಭಾವ ನೀವು ಅಳವಡಿಸಿಕೊಳ್ಳಿ. ನಿಮ್ಮ ಕೈಲಾದ ಮಟ್ಟಿಗೆ ಸೇವೆ ಮಾಡಿ. ಅದೇ ಅಪ್ಪುಗೆ ನಾವು ತೋರಿಸುವ ಗೌರವ’ ಎಂದಿದ್ದಾರೆ ರಾಘವೇಂದ್ರ ರಾಜ್​ಕುಮಾರ್.

ಇದನ್ನೂ ಓದಿ:ಪುತ್ರಿಯ ಜೊತೆಗೆ ಪುನೀತ್ ಸಮಾಧಿಗೆ ಪೂಜೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

‘ಅಪ್ಪು ನಮಗೆಲ್ಲ ಸ್ಪೂರ್ತಿ ಅದೇ ಕಾರಣಕ್ಕೆ ಅವರ ಹುಟ್ಟುಹಬ್ಬವನ್ನು ಸ್ಪೂರ್ತಿಯ ದಿನ ಎಂದು ಆಚರಣೆ ಮಾಡಲಾಗುತ್ತಿದೆ’ ಎಂದ ರಾಘವೇಂದ್ರ ರಾಜ್​ಕುಮಾರ್, ‘ರಾಜ್ಯದ ವಿವಿಧ ಮೂಲೆಗಳಿಂದ ಜನ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಲು ಬಂದಿರುವ ಬಗ್ಗೆ ಮಾತನಾಡಿದ ಅವರು, ‘ಅವರ ಪ್ರೀತಿಯ ಬಗ್ಗೆ ಮಾತನಾಡಲು ನನ್ನ ಬಳಿ ಪದಗಳಿಲ್ಲ. ಅವರ ಪಾದಕ್ಕೆ ಹಣೆ ಹಚ್ಚಿ ನಮಸ್ಕರಿಸುತ್ತೇನೆ ವಿನಃ ಇನ್ನೇನನ್ನೂ ನಾನು ಹೇಳಲಾರೆ, ಅವರ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ’ ಎಂದಿದ್ದಾರೆ ರಾಘವೇಂದ್ರ ರಾಜ್​ಕುಮಾರ್.

‘ರಾಜ್ಯದಾದ್ಯಂತ ಹಲವೆಡೆ ಅಪ್ಪು ಅಭಿಮಾನಿಗಳು ರಕ್ತದಾನ ಶಿಬಿರ, ಅನ್ನದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದಾರೆ. ಅವರನ್ನು ನಾನು ದೇವರುಗಳೆಂದೇ ಕರೆಯುತ್ತೇನೆ. ದೇವರುಗಳು ಮಾತ್ರ ಹೀಗೆ ಸೇವೆ ಮಾಡಲು ಸಾಧ್ಯ. ಆ ಅಭಿಮಾನಿಳ ಮೂಲಕವೇ ಅಪ್ಪು ಬದುಕುತ್ತಿದ್ದಾನೆ. ಅಪ್ಪು ಈಗ ನಮ್ಮ ಮನೆಯವನಲ್ಲ ಅವನು ಎಲ್ಲರ ಕುಟುಂಬದವನು’ ಎಂದಿದ್ದಾರೆ ರಾಘವೇಂದ್ರ ರಾಜ್​ಕುಮಾರ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Tue, 29 October 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು