Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಪುಣ್ಯಸ್ಮರಣೆಯಂದು ಅಭಿಮಾನಿಗಳಿಗೆ ಕರೆ ಕೊಟ್ಟ ರಾಘಣ್ಣ

Puneeth Rajkumar death anniversary: ಪುನೀತ್ ರಾಜ್​ಕುಮಾರ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಿದ್ದ ರಾಘವೇಂದ್ರ ರಾಜ್​ಕುಮಾರ್ ಅಪ್ಪು ಅಭಿಮಾನಿಗಳಲ್ಲಿ ಮನವಿ ಒಂದನ್ನು ಮಾಡಿದ್ದಾರೆ.

ಪುನೀತ್ ಪುಣ್ಯಸ್ಮರಣೆಯಂದು ಅಭಿಮಾನಿಗಳಿಗೆ ಕರೆ ಕೊಟ್ಟ ರಾಘಣ್ಣ
Follow us
ಮಂಜುನಾಥ ಸಿ.
|

Updated on:Oct 29, 2024 | 1:12 PM

ಪುನೀತ್ ರಾಜ್​ಕುಮಾರ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆ ಇಂದು. ಪ್ರತಿ ವರ್ಷದಂತೆ ಪುನೀತ್ ಸಮಾಧಿಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭೇಟಿ ನೀಡಿ ಪೂಜೆ ಮಾಡಿ, ಕೈ ಮುಗಿದಿದ್ದಾರೆ. ಪುನೀತ್ ರಾಜ್​ಕುಮಾರ್ ಕುಟುಂಬದವರು ಸಹ ಅಪ್ಪು ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಮಾಡಿದ್ದಾರೆ. ಅಶ್ವಿನಿ ಪುನೀತ್ ರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಇನ್ನೂ ಹಲವು ಕುಟುಂಬ ಸದಸ್ಯರು ಅಪ್ಪು ಸಮಾಧಿಗೆ ಇಂದು ಪೂಜೆ ಮಾಡಿದ್ದಾರೆ. ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರಾಘವೇಂದ್ರ ರಾಜ್​ಕುಮಾರ್ ಅಪ್ಪು ಅಭಿಮಾನಿಗಳ ಬಳಿ ಮನವಿಯೊಂದನ್ನು ಮಾಡಿದ್ದಾರೆ.

‘ಅಪ್ಪು ಅನ್ನು ನೆನಯದೇ ಇರುವ ದಿನವಿಲ್ಲ. ದಿನಗಳು ಬೇಗ-ಬೇಗ ಹೋಗುತ್ತಲೇ ಇವೆ, ಆದರೆ ನಾವು ಮಾತ್ರ ಪ್ರತಿದಿನವೂ ಪುನೀತ್ ಅನ್ನು ನೆನಪಿಸಿಕೊಳ್ಳುತ್ತಲೇ ಇದ್ದೀವಿ. ಜನಗಳ ಪ್ರೀತಿ-ವಿಶ್ವಾಸ ಕಡಿಮೆ ಆಗುತ್ತಲೇ ಇಲ್ಲ. ವರ್ಷದಿಂದ ವರ್ಷಕ್ಕೆ ಅದು ಹೆಚ್ಚಾಗುತ್ತಲೇ ಇದೆ. ಪ್ರತಿ ವರ್ಷ ಎಲ್ಲರೂ ಬಂದು ಇಲ್ಲಿ ಪೂಜೆ ಮಾಡುತ್ತಿದ್ದಾರೆ. ಅಭಿಮಾನಿಗಳಿಗೆ ಒಂದು ಮನವಿ ಎಂದರೆ, ಅಪ್ಪು ಮಾಡಿದ ಸೇವೆಗಳನ್ನು ನೀವು ಮಾಡಿ, ಅವರ ಸೇವಾಮನೋಭಾವ ನೀವು ಅಳವಡಿಸಿಕೊಳ್ಳಿ. ನಿಮ್ಮ ಕೈಲಾದ ಮಟ್ಟಿಗೆ ಸೇವೆ ಮಾಡಿ. ಅದೇ ಅಪ್ಪುಗೆ ನಾವು ತೋರಿಸುವ ಗೌರವ’ ಎಂದಿದ್ದಾರೆ ರಾಘವೇಂದ್ರ ರಾಜ್​ಕುಮಾರ್.

ಇದನ್ನೂ ಓದಿ:ಪುತ್ರಿಯ ಜೊತೆಗೆ ಪುನೀತ್ ಸಮಾಧಿಗೆ ಪೂಜೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

‘ಅಪ್ಪು ನಮಗೆಲ್ಲ ಸ್ಪೂರ್ತಿ ಅದೇ ಕಾರಣಕ್ಕೆ ಅವರ ಹುಟ್ಟುಹಬ್ಬವನ್ನು ಸ್ಪೂರ್ತಿಯ ದಿನ ಎಂದು ಆಚರಣೆ ಮಾಡಲಾಗುತ್ತಿದೆ’ ಎಂದ ರಾಘವೇಂದ್ರ ರಾಜ್​ಕುಮಾರ್, ‘ರಾಜ್ಯದ ವಿವಿಧ ಮೂಲೆಗಳಿಂದ ಜನ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಲು ಬಂದಿರುವ ಬಗ್ಗೆ ಮಾತನಾಡಿದ ಅವರು, ‘ಅವರ ಪ್ರೀತಿಯ ಬಗ್ಗೆ ಮಾತನಾಡಲು ನನ್ನ ಬಳಿ ಪದಗಳಿಲ್ಲ. ಅವರ ಪಾದಕ್ಕೆ ಹಣೆ ಹಚ್ಚಿ ನಮಸ್ಕರಿಸುತ್ತೇನೆ ವಿನಃ ಇನ್ನೇನನ್ನೂ ನಾನು ಹೇಳಲಾರೆ, ಅವರ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ’ ಎಂದಿದ್ದಾರೆ ರಾಘವೇಂದ್ರ ರಾಜ್​ಕುಮಾರ್.

‘ರಾಜ್ಯದಾದ್ಯಂತ ಹಲವೆಡೆ ಅಪ್ಪು ಅಭಿಮಾನಿಗಳು ರಕ್ತದಾನ ಶಿಬಿರ, ಅನ್ನದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದಾರೆ. ಅವರನ್ನು ನಾನು ದೇವರುಗಳೆಂದೇ ಕರೆಯುತ್ತೇನೆ. ದೇವರುಗಳು ಮಾತ್ರ ಹೀಗೆ ಸೇವೆ ಮಾಡಲು ಸಾಧ್ಯ. ಆ ಅಭಿಮಾನಿಳ ಮೂಲಕವೇ ಅಪ್ಪು ಬದುಕುತ್ತಿದ್ದಾನೆ. ಅಪ್ಪು ಈಗ ನಮ್ಮ ಮನೆಯವನಲ್ಲ ಅವನು ಎಲ್ಲರ ಕುಟುಂಬದವನು’ ಎಂದಿದ್ದಾರೆ ರಾಘವೇಂದ್ರ ರಾಜ್​ಕುಮಾರ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Tue, 29 October 24

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ