AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಾದಾಸಾಹೇಬ್​ ಫಾಲ್ಕೆ’ ರೀತಿಯೇ ಡಾ. ರಾಜ್​ ಹೆಸರಲ್ಲಿ ನೀಡುವ ಪ್ರಶಸ್ತಿ​ ಬಗ್ಗೆ ಹೊಸ ಕನಸು ಕಂಡಿದ್ದ​ ಪುನೀತ್​

Puneeth Rajkumar: ಡಾ. ರಾಜ್​ಕುಮಾರ್​ ಟ್ರಸ್ಟ್​ನಿಂದ ಪ್ರತಿ ವರ್ಷ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ. ಅದನ್ನು ಇನ್ನೊಂದು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಪುನೀತ್​ ರಾಜ್​ಕುಮಾರ್​ ಆಸೆಪಟ್ಟಿದ್ದರು.

‘ದಾದಾಸಾಹೇಬ್​ ಫಾಲ್ಕೆ’ ರೀತಿಯೇ ಡಾ. ರಾಜ್​ ಹೆಸರಲ್ಲಿ ನೀಡುವ ಪ್ರಶಸ್ತಿ​ ಬಗ್ಗೆ ಹೊಸ ಕನಸು ಕಂಡಿದ್ದ​ ಪುನೀತ್​
ಪುನೀತ್​ ರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್
TV9 Web
| Edited By: |

Updated on: Nov 02, 2021 | 9:32 AM

Share

ನಟ ಪುನೀತ್ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನರಾಗಿರುವುದು ತೀವ್ರ ನೋವಿನ ಸಂಗತಿ. ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲ ಎಂಬ ಕಟು ಸತ್ಯವನ್ನು ಒಪ್ಪಿಕೊಂಡು ​ಮುಂದೆ ಸಾಗಬೇಕಾದ ಅನಿವಾರ್ಯತೆ ಇದೆ. ಜೀವನದಲ್ಲಿ ನೂರಾರು ಯೋಜನೆಗಳನ್ನು ಪುನೀತ್​ ಹಾಕಿಕೊಂಡಿದ್ದರು. ಅವು ಯಾವುದೂ ಕೂಡ ತಮಗಾಗಿ ಅಲ್ಲ. ಪರೋಪಕಾರಕ್ಕಾಗಿ ಅವರು ಹಗಲಿರುಳು ಶ್ರಮಿಸುತ್ತಿದ್ದರು. ಆದರೆ ಅದನ್ನು ಎಲ್ಲಿಯೂ ಹೇಳಿಕೊಳ್ಳುತ್ತಿರಲಿಲ್ಲ. ಅವರ ನಿಧನದ ನಂತರ ಅನೇಕ ವಿಚಾರಗಳು ಹೊರಬರುತ್ತಿವೆ. ಪುನೀತ್​ ಕಂಡ ಒಂದು ಕನಸಿನ ಬಗ್ಗೆ ರಾಘವೇಂದ್ರ ರಾಜ್​ಕುಮಾರ್​ ಅವರು ಈಗ ವಿವರಿಸಿದ್ದಾರೆ.

ಡಾ. ರಾಜ್​ಕುಮಾರ್​ ಟ್ರಸ್ಟ್​ನಿಂದ ಪ್ರತಿ ವರ್ಷ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ. ಅದನ್ನು ಇನ್ನೊಂದು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಪುನೀತ್​ ಆಸೆಪಟ್ಟಿದ್ದರು. ಆ ಕನಸನ್ನು ಸಹೋದರ ರಾಘವೇಂದ್ರ ರಾಜ್​ಕುಮಾರ್​ ಜೊತೆ ಹೇಳಿಕೊಂಡಿದ್ದರು. ಅದು ನನಸಾಗುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದುಃಖದ ಸಂಗತಿ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ರಾಘಣ್ಣ ಪೋಸ್ಟ್​ ಮಾಡಿದ್ದಾರೆ.

‘ಇತ್ತೀಚೆಗೆ ನನಗೆ ದಾದಾಸಾಹೇಬ್​ ಫಾಲ್ಕೆ ಎಮ್​ಎಸ್​ಕೆ ಟ್ರಸ್ಟ್​ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ ಬಂದ ಸಂದರ್ಭದಲ್ಲಿ ಅಪ್ಪುಗೆ ಎಲ್ಲಿಲ್ಲದ ಸಂತೋಷ. ನನ್ನನ್ನು ತಕ್ಷಣ ಭೇಟಿ ಮಾಡಿ, ಈ ಸೆಲ್ಫಿ ತೆಗೆದು, ರಾಘಣ್ಣ.. ನಾವೂ ಸಹ ಈ ಮೂರ್ತಿಯ ರೂಪದ ಹಾಗೆ ಅಪ್ಪಾಜಿಯವರ ಮೂರ್ತಿಯನ್ನು ಮಾಡಿ ಎಂದಿನಂತೆ ಡಾ. ರಾಜ್​ಕುಮಾರ್​ ಟ್ರಸ್ಟ್​ನಿಂದ ನೀಡುವ ಪ್ರಶಸ್ತಿಯನ್ನು ಇದೇ ರೂಪದಲ್ಲಿ ಮಾಡೋಣ ಅಂತ ಹೇಳಿದ್ದನು. ಅಪ್ಪು ನಿನ್ನ ಆಲೋಚನೆಗೆ ನನ್ನದೊಂದು ನಮನ. ಲವ್​ ಯೂ ಮಗನೆ’ ಎಂದು ರಾಘವೇಂದ್ರ ರಾಜ್​ಕುಮಾರ್​ ಬರೆದುಕೊಂಡಿದ್ದಾರೆ.

ಕಂಠೀರವ ಸ್ಡುಡಿಯೋ ಆವರಣದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನಡೆದು ಇಂದಿಗೆ (ನ.2) ಮೂರನೇ ದಿನ. ಆ ಪ್ರಯುಕ್ತ ಕುಟುಂಬದವರು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯ ನೆರವೇರಿಸಿದ್ದಾರೆ. ಈ ಕಾರ್ಯ ಮುಗಿದ ನಂತರದಲ್ಲಿ ಸಾರ್ವಜನಿಕರಿಗೆ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಈ ಹಿಂದೆ ರಾಘಣ್ಣ ಹೇಳಿದ್ದರು.

ಇದನ್ನೂ ಓದಿ:

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

ಪುನೀತ್​ ಅಂತ್ಯಕ್ರಿಯೆ ಮರುದಿನ ಹೇಗಿದೆ ಶಿವಣ್ಣನ ದಿನಚರಿ? ನೋವು ನುಂಗಿಕೊಂಡು ಮುಂದಿನ ಹೆಜ್ಜೆ ಇಟ್ಟ ಶಿವರಾಜ್​ಕುಮಾರ್​

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು