AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ, ತಮ್ಮ ಪುನೀತ್​ನನ್ನು ನೆನೆದು ಭಾವನಾತ್ಮಕ ಪೋಸ್ಟ್ ಮಾಡಿದ ರಾಘಣ್ಣ

ಯಾರಿಗೂ ಗೊತ್ತಾಗದಂತೆ ನೀನು ಸಮಾಜ ಸೇವೆ ಮಾಡಿದೆ. ನಿನ್ನಂತೆ ಸಮಾಜಸೇವೆ ಮಾಡುವ ಶಕ್ತಿಯನ್ನು ನನಗೆ ನೀಡು. ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ ಎಂದು ತಮ್ಮ ಪುನೀತ್ ನೆನೆದು ರಾಘವೇಂದ್ರ ರಾಜ್‌ಕುಮಾರ್ ಫೇಸ್‌ಬುಕ್ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ, ತಮ್ಮ ಪುನೀತ್​ನನ್ನು ನೆನೆದು ಭಾವನಾತ್ಮಕ ಪೋಸ್ಟ್ ಮಾಡಿದ ರಾಘಣ್ಣ
ಪುನೀತ್​ ರಾಜ್​ಕುಮಾರ್ ನೆನಪಲ್ಲಿ ರಾಘವೇಂದ್ರ ರಾಜ್‌ಕುಮಾರ್ (ಫೇಸ್​ಬುಕ್)
TV9 Web
| Edited By: |

Updated on:Nov 09, 2021 | 10:43 AM

Share

ಬೆಂಗಳೂರು: ಯುವರತ್ನ, ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ (Puneeth Rajkumar) ನಮ್ಮನ್ನು ಅಗಲಿ ಇಂದಿಗೆ 12ದಿನಗಳು ಕಳೆದಿವೆ. ಆದರೆ ಅವರ ಅಭಿಮಾನಿಗಳ ಮನಸಲ್ಲಿನ ನೋವು ಸ್ವಲ್ಪವೂ ಕಮ್ಮಿಯಾಗಿಲ್ಲ. ಅವರ ಸಾವನ್ನು ಜೀರ್ಣಿಸಿಕೊಳ್ಳುವ ಶಕ್ತಿ ಆ ದೇವರು ನೀಡಿಲ್ಲ. ಪ್ರತಿ ದಿನ ಸಾವಿರಾರು ಅಭಿಮಾನಿಗಳು ಅಪ್ಪು ಸಮಾಧಿ ದರ್ಶನ ಮಾಡ್ತಿದ್ದಾರೆ. ಅಪ್ಪು ಎದ್ದು ಬನ್ನಿ, ಮತ್ತೆ ಹುಟ್ಟಿ ಬನ್ನಿ ಎಂದು ಬಿಕ್ಕಿ ಬಿಕ್ಕಿ ಕಣ್ಣೀರಿನ ಅಭಿಷೇಕ ಮಾಡ್ತಿದ್ದಾರೆ. ಇನ್ನು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಆರಂಭವಾಗಲಿದೆ. 25 ರಿಂದ 30 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಈ ನಡುವೆ ರಾಘವೇಂದ್ರ ರಾಜ್‌ಕುಮಾರ್(Raghavendra Rajkumar) ಪುನೀತ್ ನೆನೆದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಯಾರಿಗೂ ಗೊತ್ತಾಗದಂತೆ ನೀನು ಸಮಾಜ ಸೇವೆ ಮಾಡಿದೆ. ನಿನ್ನಂತೆ ಸಮಾಜಸೇವೆ ಮಾಡುವ ಶಕ್ತಿಯನ್ನು ನನಗೆ ನೀಡು. ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ ಎಂದು ತಮ್ಮ ಪುನೀತ್ ನೆನೆದು ರಾಘವೇಂದ್ರ ರಾಜ್‌ಕುಮಾರ್ ಫೇಸ್‌ಬುಕ್ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಸದಾ ಅಪ್ಪುನನ್ನು ಮಗನೇ ಮಗನೇ ಎಂದು ನೆನೆಪಿಸಿಕೊಳ್ಳುವ ರಾಘಣ್ಣ ಪುನೀತ್​ರನ್ನು ತಮ್ಮನಿಗಿಂತ ಮಗನಂತೆ ಮುದ್ದ ಕಂದಮ್ಮನಂತೆ ಪ್ರೀತಿ ಕೊಡುತ್ತಿದ್ದರು. ಆದರೆ ಪುನೀತ್​ರ ಅಗಲಿಕೆ ರಾಘಣ್ಣನನ್ನು ಕಾಡಿದ್ದು ನಾನು ನಿರುದ್ಯೋಗಿಯಾಗಿದ್ದೆ. ನೀನು ನನಗೆ ಸಮಾಜ ಸೇವೆಯ ಕೆಲಸ ಕೊಟ್ಟಿದ್ದೀಯಾ. ಸಮಾಜಸೇವೆಯಲ್ಲಿ ಮುನ್ನಡೆಯುವಂತೆ ಮಾಡಿದ್ದೀಯಾ. ಸೇವೆ ಮಾಡುವಾಗ ಕಿವುಡರಾಗಿ, ಕುರುಡರಾಗಿರಿ ಇಂತಹ ನಿನ್ನ ಆಲೋಚನೆಗಳು ಬದುಕುವ ಶಕ್ತಿ ನೀಡುತ್ತೆ. ನಿನ್ನ ಆಲೋಚನೆಗಳ ಜೊತೆ ಪ್ರೀತಿಸುತ್ತಾ ಬದುಕುತ್ತೇನೆ ಎಂದು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡೋ ದಿನವೇ ರಾಘವೇಂದ್ರ ರಾಜ್‌ಕುಮಾರ್ ಭಾವುಕರಾಗಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಈ ನೋವಿನ ಜತೆ ಬದುಕೋಕೆ ಶಕ್ತಿಕೊಡು ಎಂದು ದೇವರಲ್ಲಿ ಕೇಳಿಕೊಳ್ಳಬೇಕಷ್ಟೆ; ರಾಘವೇಂದ್ರ ರಾಜ್​ಕುಮಾರ್​

Published On - 8:20 am, Tue, 9 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ