AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ, ತಮ್ಮ ಪುನೀತ್​ನನ್ನು ನೆನೆದು ಭಾವನಾತ್ಮಕ ಪೋಸ್ಟ್ ಮಾಡಿದ ರಾಘಣ್ಣ

ಯಾರಿಗೂ ಗೊತ್ತಾಗದಂತೆ ನೀನು ಸಮಾಜ ಸೇವೆ ಮಾಡಿದೆ. ನಿನ್ನಂತೆ ಸಮಾಜಸೇವೆ ಮಾಡುವ ಶಕ್ತಿಯನ್ನು ನನಗೆ ನೀಡು. ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ ಎಂದು ತಮ್ಮ ಪುನೀತ್ ನೆನೆದು ರಾಘವೇಂದ್ರ ರಾಜ್‌ಕುಮಾರ್ ಫೇಸ್‌ಬುಕ್ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ, ತಮ್ಮ ಪುನೀತ್​ನನ್ನು ನೆನೆದು ಭಾವನಾತ್ಮಕ ಪೋಸ್ಟ್ ಮಾಡಿದ ರಾಘಣ್ಣ
ಪುನೀತ್​ ರಾಜ್​ಕುಮಾರ್ ನೆನಪಲ್ಲಿ ರಾಘವೇಂದ್ರ ರಾಜ್‌ಕುಮಾರ್ (ಫೇಸ್​ಬುಕ್)
TV9 Web
| Edited By: |

Updated on:Nov 09, 2021 | 10:43 AM

Share

ಬೆಂಗಳೂರು: ಯುವರತ್ನ, ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ (Puneeth Rajkumar) ನಮ್ಮನ್ನು ಅಗಲಿ ಇಂದಿಗೆ 12ದಿನಗಳು ಕಳೆದಿವೆ. ಆದರೆ ಅವರ ಅಭಿಮಾನಿಗಳ ಮನಸಲ್ಲಿನ ನೋವು ಸ್ವಲ್ಪವೂ ಕಮ್ಮಿಯಾಗಿಲ್ಲ. ಅವರ ಸಾವನ್ನು ಜೀರ್ಣಿಸಿಕೊಳ್ಳುವ ಶಕ್ತಿ ಆ ದೇವರು ನೀಡಿಲ್ಲ. ಪ್ರತಿ ದಿನ ಸಾವಿರಾರು ಅಭಿಮಾನಿಗಳು ಅಪ್ಪು ಸಮಾಧಿ ದರ್ಶನ ಮಾಡ್ತಿದ್ದಾರೆ. ಅಪ್ಪು ಎದ್ದು ಬನ್ನಿ, ಮತ್ತೆ ಹುಟ್ಟಿ ಬನ್ನಿ ಎಂದು ಬಿಕ್ಕಿ ಬಿಕ್ಕಿ ಕಣ್ಣೀರಿನ ಅಭಿಷೇಕ ಮಾಡ್ತಿದ್ದಾರೆ. ಇನ್ನು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಆರಂಭವಾಗಲಿದೆ. 25 ರಿಂದ 30 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಈ ನಡುವೆ ರಾಘವೇಂದ್ರ ರಾಜ್‌ಕುಮಾರ್(Raghavendra Rajkumar) ಪುನೀತ್ ನೆನೆದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಯಾರಿಗೂ ಗೊತ್ತಾಗದಂತೆ ನೀನು ಸಮಾಜ ಸೇವೆ ಮಾಡಿದೆ. ನಿನ್ನಂತೆ ಸಮಾಜಸೇವೆ ಮಾಡುವ ಶಕ್ತಿಯನ್ನು ನನಗೆ ನೀಡು. ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ ಎಂದು ತಮ್ಮ ಪುನೀತ್ ನೆನೆದು ರಾಘವೇಂದ್ರ ರಾಜ್‌ಕುಮಾರ್ ಫೇಸ್‌ಬುಕ್ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಸದಾ ಅಪ್ಪುನನ್ನು ಮಗನೇ ಮಗನೇ ಎಂದು ನೆನೆಪಿಸಿಕೊಳ್ಳುವ ರಾಘಣ್ಣ ಪುನೀತ್​ರನ್ನು ತಮ್ಮನಿಗಿಂತ ಮಗನಂತೆ ಮುದ್ದ ಕಂದಮ್ಮನಂತೆ ಪ್ರೀತಿ ಕೊಡುತ್ತಿದ್ದರು. ಆದರೆ ಪುನೀತ್​ರ ಅಗಲಿಕೆ ರಾಘಣ್ಣನನ್ನು ಕಾಡಿದ್ದು ನಾನು ನಿರುದ್ಯೋಗಿಯಾಗಿದ್ದೆ. ನೀನು ನನಗೆ ಸಮಾಜ ಸೇವೆಯ ಕೆಲಸ ಕೊಟ್ಟಿದ್ದೀಯಾ. ಸಮಾಜಸೇವೆಯಲ್ಲಿ ಮುನ್ನಡೆಯುವಂತೆ ಮಾಡಿದ್ದೀಯಾ. ಸೇವೆ ಮಾಡುವಾಗ ಕಿವುಡರಾಗಿ, ಕುರುಡರಾಗಿರಿ ಇಂತಹ ನಿನ್ನ ಆಲೋಚನೆಗಳು ಬದುಕುವ ಶಕ್ತಿ ನೀಡುತ್ತೆ. ನಿನ್ನ ಆಲೋಚನೆಗಳ ಜೊತೆ ಪ್ರೀತಿಸುತ್ತಾ ಬದುಕುತ್ತೇನೆ ಎಂದು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡೋ ದಿನವೇ ರಾಘವೇಂದ್ರ ರಾಜ್‌ಕುಮಾರ್ ಭಾವುಕರಾಗಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಈ ನೋವಿನ ಜತೆ ಬದುಕೋಕೆ ಶಕ್ತಿಕೊಡು ಎಂದು ದೇವರಲ್ಲಿ ಕೇಳಿಕೊಳ್ಳಬೇಕಷ್ಟೆ; ರಾಘವೇಂದ್ರ ರಾಜ್​ಕುಮಾರ್​

Published On - 8:20 am, Tue, 9 November 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ