AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ, ತಮ್ಮ ಪುನೀತ್​ನನ್ನು ನೆನೆದು ಭಾವನಾತ್ಮಕ ಪೋಸ್ಟ್ ಮಾಡಿದ ರಾಘಣ್ಣ

ಯಾರಿಗೂ ಗೊತ್ತಾಗದಂತೆ ನೀನು ಸಮಾಜ ಸೇವೆ ಮಾಡಿದೆ. ನಿನ್ನಂತೆ ಸಮಾಜಸೇವೆ ಮಾಡುವ ಶಕ್ತಿಯನ್ನು ನನಗೆ ನೀಡು. ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ ಎಂದು ತಮ್ಮ ಪುನೀತ್ ನೆನೆದು ರಾಘವೇಂದ್ರ ರಾಜ್‌ಕುಮಾರ್ ಫೇಸ್‌ಬುಕ್ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ, ತಮ್ಮ ಪುನೀತ್​ನನ್ನು ನೆನೆದು ಭಾವನಾತ್ಮಕ ಪೋಸ್ಟ್ ಮಾಡಿದ ರಾಘಣ್ಣ
ಪುನೀತ್​ ರಾಜ್​ಕುಮಾರ್ ನೆನಪಲ್ಲಿ ರಾಘವೇಂದ್ರ ರಾಜ್‌ಕುಮಾರ್ (ಫೇಸ್​ಬುಕ್)
TV9 Web
| Edited By: |

Updated on:Nov 09, 2021 | 10:43 AM

Share

ಬೆಂಗಳೂರು: ಯುವರತ್ನ, ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ (Puneeth Rajkumar) ನಮ್ಮನ್ನು ಅಗಲಿ ಇಂದಿಗೆ 12ದಿನಗಳು ಕಳೆದಿವೆ. ಆದರೆ ಅವರ ಅಭಿಮಾನಿಗಳ ಮನಸಲ್ಲಿನ ನೋವು ಸ್ವಲ್ಪವೂ ಕಮ್ಮಿಯಾಗಿಲ್ಲ. ಅವರ ಸಾವನ್ನು ಜೀರ್ಣಿಸಿಕೊಳ್ಳುವ ಶಕ್ತಿ ಆ ದೇವರು ನೀಡಿಲ್ಲ. ಪ್ರತಿ ದಿನ ಸಾವಿರಾರು ಅಭಿಮಾನಿಗಳು ಅಪ್ಪು ಸಮಾಧಿ ದರ್ಶನ ಮಾಡ್ತಿದ್ದಾರೆ. ಅಪ್ಪು ಎದ್ದು ಬನ್ನಿ, ಮತ್ತೆ ಹುಟ್ಟಿ ಬನ್ನಿ ಎಂದು ಬಿಕ್ಕಿ ಬಿಕ್ಕಿ ಕಣ್ಣೀರಿನ ಅಭಿಷೇಕ ಮಾಡ್ತಿದ್ದಾರೆ. ಇನ್ನು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಆರಂಭವಾಗಲಿದೆ. 25 ರಿಂದ 30 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಈ ನಡುವೆ ರಾಘವೇಂದ್ರ ರಾಜ್‌ಕುಮಾರ್(Raghavendra Rajkumar) ಪುನೀತ್ ನೆನೆದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಯಾರಿಗೂ ಗೊತ್ತಾಗದಂತೆ ನೀನು ಸಮಾಜ ಸೇವೆ ಮಾಡಿದೆ. ನಿನ್ನಂತೆ ಸಮಾಜಸೇವೆ ಮಾಡುವ ಶಕ್ತಿಯನ್ನು ನನಗೆ ನೀಡು. ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ ಎಂದು ತಮ್ಮ ಪುನೀತ್ ನೆನೆದು ರಾಘವೇಂದ್ರ ರಾಜ್‌ಕುಮಾರ್ ಫೇಸ್‌ಬುಕ್ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಸದಾ ಅಪ್ಪುನನ್ನು ಮಗನೇ ಮಗನೇ ಎಂದು ನೆನೆಪಿಸಿಕೊಳ್ಳುವ ರಾಘಣ್ಣ ಪುನೀತ್​ರನ್ನು ತಮ್ಮನಿಗಿಂತ ಮಗನಂತೆ ಮುದ್ದ ಕಂದಮ್ಮನಂತೆ ಪ್ರೀತಿ ಕೊಡುತ್ತಿದ್ದರು. ಆದರೆ ಪುನೀತ್​ರ ಅಗಲಿಕೆ ರಾಘಣ್ಣನನ್ನು ಕಾಡಿದ್ದು ನಾನು ನಿರುದ್ಯೋಗಿಯಾಗಿದ್ದೆ. ನೀನು ನನಗೆ ಸಮಾಜ ಸೇವೆಯ ಕೆಲಸ ಕೊಟ್ಟಿದ್ದೀಯಾ. ಸಮಾಜಸೇವೆಯಲ್ಲಿ ಮುನ್ನಡೆಯುವಂತೆ ಮಾಡಿದ್ದೀಯಾ. ಸೇವೆ ಮಾಡುವಾಗ ಕಿವುಡರಾಗಿ, ಕುರುಡರಾಗಿರಿ ಇಂತಹ ನಿನ್ನ ಆಲೋಚನೆಗಳು ಬದುಕುವ ಶಕ್ತಿ ನೀಡುತ್ತೆ. ನಿನ್ನ ಆಲೋಚನೆಗಳ ಜೊತೆ ಪ್ರೀತಿಸುತ್ತಾ ಬದುಕುತ್ತೇನೆ ಎಂದು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡೋ ದಿನವೇ ರಾಘವೇಂದ್ರ ರಾಜ್‌ಕುಮಾರ್ ಭಾವುಕರಾಗಿ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಈ ನೋವಿನ ಜತೆ ಬದುಕೋಕೆ ಶಕ್ತಿಕೊಡು ಎಂದು ದೇವರಲ್ಲಿ ಕೇಳಿಕೊಳ್ಳಬೇಕಷ್ಟೆ; ರಾಘವೇಂದ್ರ ರಾಜ್​ಕುಮಾರ್​

Published On - 8:20 am, Tue, 9 November 21

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ