Puneeth Rajkumar: ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ; ಅಪ್ಪು ಜೊತೆ ಹಾಡಿದ ಕೊನೆಯ ವಿಡಿಯೋಗಳಲ್ಲಿ ಒಂದನ್ನು ಹಂಚಿಕೊಂಡ ರಾಘವೇಂದ್ರ ರಾಜಕುಮಾರ್

Raghavendra Rajkumar: ಸಹೋದರ ಪುನೀತ್ ರಾಜಕುಮಾರ್ ಅವರೊಂದಿಗೆ ಜೊತೆಯಾಗಿ ಹಾಡಿದ್ದ ಕೊನೆಯ ವಿಡಿಯೋಗಳಲ್ಲಿ ಒಂದನ್ನು ರಾಘವೇಂದ್ರ ರಾಜಕುಮಾರ್ ಹಂಚಿಕೊಂಡಿದ್ದಾರೆ.

Puneeth Rajkumar: ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ; ಅಪ್ಪು ಜೊತೆ ಹಾಡಿದ ಕೊನೆಯ ವಿಡಿಯೋಗಳಲ್ಲಿ ಒಂದನ್ನು ಹಂಚಿಕೊಂಡ ರಾಘವೇಂದ್ರ ರಾಜಕುಮಾರ್
ರಾಘವೇಂದ್ರ ರಾಜಕುಮಾರ್ ಹಂಚಿಕೊಂಡಿರುವ ವಿಡಿಯೋ ತುಣುಕು (ಮೂಲ ಕೃಪೆ: ರಾಘವೇಂದ್ರ ರಾಜಕುಮಾರ್/ ಇನ್ಸ್ಟಾಗ್ರಾಂ)
Follow us
| Updated By: shivaprasad.hs

Updated on: Nov 04, 2021 | 2:59 PM

ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಎಲ್ಲರನ್ನೂ ಅಪಾರ ದುಃಖಕ್ಕೆ ತಳ್ಳಿದೆ. ಪುನೀತ್ ಸಹೋದರರಾದ ರಾಘವೇಂದ್ರ ರಾಜಕುಮಾರ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್ ಜೊತೆಗಿನ ನೆನಪುಗಳನ್ನು ಹಂಚಿಕೊಳ್ಳುತ್ತಾ, ಆ ಮೂಲಕ ಅಪ್ಪುವನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸುತ್ತಿದ್ದಾರೆ. ಇತ್ತೀಚೆಗೆ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಪುನೀತ್ ಜೊತೆಗೆ ಒಟ್ಟಾಗಿ ಹಾಡಿದ ಕೊನೆಯ ವಿಡಿಯೋಗಳಲ್ಲಿ ಒಂದು ಎಂದು ಬರೆದುಕೊಂಡು ತುಣುಕೊಂದನ್ನು ಹಂಚಿಕೊಂಡಿದ್ದಾರೆ. ‘ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ’ ಗೀತೆಯನ್ನು ಸಹೋದರರು ಜೊತೆಯಾಗಿ, ಸಂತಸದಿಂದ ಹಾಡಿದ್ದಾರೆ. ಒಂದು ಸಂತಸದ ಕೂಡದಲ್ಲಿ ಈರ್ವರೂ ಭಾಗಿಯಾಗಿದ್ದು, ಆ ಸಂದರ್ಭದ ವಿಡಿಯೋ ತುಣುಕು ಅದಾಗಿದೆ. ಈ ವಿಡಿಯೋವನ್ನು ಹಂಚಿಕೊಂಡು ರಾಘವೇಂದ್ರ ರಾಜಕುಮಾರ್, ‘ಇದು ನಾನು ಮತ್ತು ಅಪ್ಪು ಜೊತೆಯಾಗಿ ಹಾಡಿದ ಕೊನೆಯ ವಿಡಿಯೋಗಳಲ್ಲೊಂದು’ ಎಂದು ಬರೆದುಕೊಂಡಿದ್ದಾರೆ. ‘ಮರೆಯಲಾಗ ನೆನಪುಗಳು. ಮಿಸ್ ಯೂ ಮಗನೇ’ ಎಂದು ಬರೆದಿರುವ ರಾಘಣ್ಣ, ಅಪ್ಪು ಜೊತೆಗಿನ ದಿನಗಳನ್ನು ಬಹಳ ಬೇಸರದಿಂದಲೇ ಸ್ಮರಿಸಿಕೊಂಡಿದ್ದಾರೆ.

ರಾಘವೇಂದ್ರ ರಾಜಕುಮಾರ್ ಹಂಚಿಕೊಂಡಿರುವ ವಿಡಿಯೋ:

ರಾಘವೇಂದ್ರ ರಾಜಕುಮಾರ್ ಕುಟುಂಬದೊಂದಿಗೆ ತೆಗೆಸಿಕೊಂಡಿರುವ ಇತರ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ. ಅದರಲ್ಲಿ ಡಾ.ರಾಜ್, ಪಾರ್ವತಮ್ಮನವರ ಜೊತೆಯಿರುವ ಚಿತ್ರಗಳು ಸೇರಿದಂತೆ ಹಲವು ಅಪರೂಪದ ಚಿತ್ರಗಳನ್ನು ಹಂಚಿಕೊಂಡು, ‘ಈಗ ಅವೆಲ್ಲವೂ ಕೇವಲ ನೆನಪುಗಳು’ ಎಂದು ಬರೆದುಕೊಂಡಿದ್ದಾರೆ.

ಅಭಿಮಾನಿಗಳು ದುಡುಕಿನ ನಿರ್ಧಾರ ಕೈಗೊಳ್ಳದಂತೆ ರಾಘಣ್ಣ ಮನವಿ: ಪುನೀತ್ ರಾಜಕುಮಾರ್ ನಿಧನದಿಂದ ಆಘಾತಗೊಂಡಿರುವ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದರ ಕುರಿತು ರಾಘವೇಂದ್ರ ರಾಜಕುಮಾರ್ ಪ್ರತಿಕ್ರಿಯಿಸಿದ್ದಾರೆ. ‘‘ದಯವಿಟ್ಟು ಅಂತಹ ಕೆಲಸಕ್ಕೆ ಯಾರೂ ಮುಂದಾಗಬೇಡಿ. ಅಪ್ಪಾಜಿಯವರು ಅಭಿಮಾನಿಗಳನ್ನು ದೇವರು ಎಂದಿದ್ಧಾರೆ. ದೇವರು ಇಂತಹ ಕೆಲಸ ಮಾಡಿದರೆ ಜನಕ್ಕೆ ಏನು ಹೇಳುವುದು? ಅಂತಹ ನಿರ್ಧಾರಗಳು ಬಹಳ ದೊಡ್ಡ ತಪ್ಪು. ನಿಮ್ಮ ನಿಮ್ಮ ತಂದೆ- ತಾಯಿಗಳನ್ನು, ಕುಟುಂಬದವರನ್ನು ಚೆನ್ನಾಗಿ ನೋಡಿಕೊಳ್ಳಿ. ಅಭಿಮಾನಿಗಳ ಅಂತಹ ನಿರ್ಧಾರ ಪುನೀತ್ ಪತ್ನಿ ಹಾಗೂ ಕುಟುಂಬಸ್ಥರಿಗೆ ತೀವ್ರ ನೋವು ತಂದಿದೆ. ದಯವಿಟ್ಟು ಯಾರೂ ಅಂತಹ ನಿರ್ಧಾರ ತೆಗೆದುಕೊಳ್ಳಬೇಡಿ’’ ಎಂದು ರಾಘಣ್ಣ ಕೋರಿಕೊಂಡಿದ್ದಾರೆ. ನಟ ಶಿವರಾಜ್ ಕುಮಾರ್ ಕೂಡ ಅಭಿಮಾನಿಗಳು ದುಡುಕಿನ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:

ನಟ ಪುನೀತ್ ರಾಜ್​​ಕುಮಾರ್​ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ

Puneeth Eye Donation: ಪುನೀತ್ ಪ್ರೇರಣೆ -ನೇತ್ರದಾನಕ್ಕೆ ಸಾಲುಗಟ್ಟಿದ ಜನ, ಒಂದೇ ದಿನ ಸಾವಿರಾರು ಜನರಿಂದ ನೋಂದಣಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ