AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raghavendra Rajkumar: ಸಿನಿಮಾ ಶೂಟಿಂಗ್​ನಲ್ಲಿ ಸುಸ್ತಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ: ವಿನಯ್ ರಾಜ್​ಕುಮಾರ್ ಹೇಳಿಕೆ

ಶೂಟಿಂಗ್ ವೇಳೆ ಸುಸ್ತು ಕಾಣಿಸಿಕೊಂಡಿದ್ದರಿಂದ, ಶೂಟಿಂಗ್ ಸೆಟ್​ನಿಂದ ನೇರವಾಗಿ ಆಸ್ಪತ್ರೆಗೆ ಬಂದಿದ್ದರು. ಈ ಬಗ್ಗೆ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ: ವಿನಯ್ ರಾಜ್​ಕುಮಾರ್

Raghavendra Rajkumar: ಸಿನಿಮಾ ಶೂಟಿಂಗ್​ನಲ್ಲಿ ಸುಸ್ತಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ: ವಿನಯ್ ರಾಜ್​ಕುಮಾರ್ ಹೇಳಿಕೆ
ವಿನಯ್ ರಾಜ್​ಕುಮಾರ್
TV9 Web
| Edited By: |

Updated on:Apr 06, 2022 | 7:57 PM

Share

ಬೆಂಗಳೂರು: ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲಾಗಿರುವ ವಿಚಾರದ ಕುರಿತಾಗಿ ಪುತ್ರ ವಿನಯ್ ರಾಜ್​ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ಶೂಟಿಂಗ್​ನಲ್ಲಿ ಸುಸ್ತಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಬೆಳಕು’ ಚಿತ್ರದ ಶೂಟಿಂಗ್​ ವೇಳೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಹಾಗಾಗಿ, ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಆಸ್ಪತ್ರೆ ಬಳಿ ಪುತ್ರ ವಿನಯ್ ರಾಜ್​ಕುಮಾರ್​ ಹೇಳಿದ್ದಾರೆ.

ಶೂಟಿಂಗ್ ವೇಳೆ ಸುಸ್ತು ಕಾಣಿಸಿಕೊಂಡಿದ್ದರಿಂದ, ಶೂಟಿಂಗ್ ಸೆಟ್​ನಿಂದ ನೇರವಾಗಿ ಆಸ್ಪತ್ರೆಗೆ ಬಂದಿದ್ದರು. ಜನರಲ್​ ಹೆಲ್ತ್​ ಚೆಕಪ್​ಗಾಗಿ ಆಸ್ಪತ್ರೆಗೆ ಬಂದಿದ್ದರು. ಈ ಬಗ್ಗೆ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಪುತ್ರ ವಿನಯ್ ರಾಜ್​ಕುಮಾರ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ರಾಘವೇಂದ್ರ ರಾಜ್​ಕುಮಾರ್ ಅವರನ್ನು ನಾಳೆಯವರೆಗೆ ಅಬ್ಸರ್ವೇಷನ್​ನಲ್ಲಿ ಇರಿಸಿದ್ದಾರೆ. ನಾಳೆ ಬೆಳಗ್ಗೆ ವೈದ್ಯರು ಡಿಸ್ಚಾರ್ಜ್ ಮಾಡಲಿದ್ದಾರೆ ಎಂದು ಆಸ್ಪತ್ರೆ ಬಳಿ ಹಿರಿಯ ಪುತ್ರ ವಿನಯ್ ರಾಜ್​ಕುಮಾರ್​ ತಿಳಿಸಿದ್ದಾರೆ.

ರಾಘಣ್ಣ ಅವರಿಗೆ ಏನು ಆಗಿಲ್ಲ, ಅವರು ಆರಾಮಾಗೆ ಇದ್ದಾರೆ. ಹೀಗಾಗಿ ಯಾರು ಆತಂಕ ಪಡಬೇಡಿ. ಅಭಿಮಾನಿಗಳ ಆಶೀರ್ವಾದ ಇರೋ‌ತನಕ ಎನೂ ಆಗಲ್ಲ ಎಂದು ಶ್ರೀಮುರುಳಿ‌ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Raghavendra Rajkumar ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲು

ರಾಘವೇಂದ್ರ ರಾಜ್​ಕುಮಾರ್​ ಸಂಜೆ 6 ಗಂಟೆಗೆ ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯದ ಮಾಹಿತಿ ಪ್ರಕಾರ ರಾಘಣ್ಣರಿಗೆ ಯಾವುದೇ ಗಂಭೀರ ಸಮಸ್ಯೆಯಿಲ್ಲ ಎಂದು ಹೇಳಲಾಗಿದೆ.ಇಂದು ಶೂಟಿಂಗ್​ನಲ್ಲಿ ಭಾಗಿಯಾಗಿದ್ದ ರಾಘವೇಂದ್ರ ರಾಜ್​ಕುಮಾರ್ ಸಂಜೆ 4.30 ಕ್ಕೆ ಆಸ್ಪತ್ರಗೆ ಹೋಗ್ತಿನಿ ಅಂತಾ ಹೋಗಿದ್ರು. ಆದರೆ, ಬೆಳಗ್ಗೆಯಿಂದ ಆರಾಮಾಗಿದ್ರು ಎಂದು ಟಿವಿ9ಗೆ ಬೆಳಕು ಸಿನಿಮಾ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ನಟ ಇಂದು ಬೆಳಕು ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದರು. ಶೂಟಿಂಗ್ ನಡುವೆ ಮಾಧ್ಯಮಗಳೊಂದಿಗೂ ಮಾತನಾಡಿದ್ರು. ಆದರೆ, ಸಾಯಂಕಾಲ ಸ್ವಲ್ಪ ಎದೆ ನೋವು ಕಾಣಿಸಿಕೊಂಡಿತ್ತು, ಕೊಂಚ ಬೆವರುತ್ತಿದ್ರು. ಹಾಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ವೇಳೆ, ಶಿವ ರಾಜ್​ಕುಮಾರ್ ಮತ್ತು ಪುನೀತ್ ರಾಜ್​ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸದ್ಯ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ನಟ ರಾಘವೇಂದ್ರ ರಾಜ್​ಕುಮಾರ್​ ಅವರಿಗೆ ಯಶವಂತಪುರದಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಗೋಕರ್ಣ ಬೀಚ್​ನಲ್ಲಿ ಪುನೀತ್ ‘ಪವರ್​’ಫುಲ್​ ಬ್ಯಾಕ್ ಫ್ಲಿಪ್​ಗೆ ಫ್ಯಾನ್ಸ್ ಫುಲ್​ ಫಿದಾ!

Published On - 9:41 pm, Tue, 16 February 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ