AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿದ ರಾಘವೇಂದ್ರ ರಾಜ್​ಕುಮಾರ್

Raghvendra Rajkumar: ಗೀತಾ ಶಿವರಾಜ್​ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದು, ಈ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ ಮಾತನಾಡಿದ್ದಾರೆ.

ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿದ ರಾಘವೇಂದ್ರ ರಾಜ್​ಕುಮಾರ್
ರಾಘವೇಂದ್ರ ರಾಜ್​ಕುಮಾರ್
Follow us
ಮಂಜುನಾಥ ಸಿ.
|

Updated on: Apr 28, 2023 | 8:19 PM

ಶಿವರಾಜ್ ಕುಮಾರ್ (Shiva Rajkumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivarajkumar) ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಸಹೋದರ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಅವರ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ದೊಡ್ಮನೆ ಕುಟುಂಬವು ರಾಜಕೀಯದಿಂದ ತಕ್ಕಮಟ್ಟಿಗೆ ದೂರವೇ ಉಳಿದಿತ್ತು. ಆದರೆ ಗೀತಾ ಶಿವರಾಜ್​ಕುಮಾರ್ ಮಾತ್ರವೇ ಮೊದಲಿನಿಂದಲೂ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಇದೀಗ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ಬೆಳವಣಿಗೆ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ರಾಘವೇಂದ್ರ ಸ್ಟೋರ್ಸ್ ಸಿನಿಮಾ ವೀಕ್ಷಸಿ ಸಿನಿಮಾದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಘವೇಂದ್ರ ರಾಜ್​ಕುಮಾರ್ ಅವರು ಆ ಬಳಿಕ ಸುದ್ದಿಗಾರರು ಗೀತಾ ಶಿವರಾಜ್ ಕುಮಾರ್ ಅವರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರಶ್ನೆ ಕೇಳಿದರು. ಪಕ್ಕದಲ್ಲಿಯೇ ಕೂತಿದ್ದ ಜಗ್ಗೇಶ್ ಅವರು, ಬೇಡ, ಆ ಬಗ್ಗೆ ಈಗ ಮಾತು ಬೇಡ ಎಂದರಾದರೂ ರಾಘವೇಂದ್ರ ರಾಜ್​ಕುಮಾರ್ ಅವರು ಕೇಳಲಿ ಬಿಡಿ ಪರವಾಗಿಲ್ಲ ಉತ್ತರಿಸುತ್ತೇನೆ ಎನ್ನುತ್ತಾ, ”ಗೀತಾ ಶಿವರಾಜ್​ಕುಮಾರ್ ಅವರು ನನ್ನ ಅತ್ತಿಗೆ, ಶಿವರಾಜ್ ಕುಮಾರ್ ಅವರು ನನಗೆ ಅಣ್ಣ ನನಗೆ ಇಷ್ಟು ಮಾತ್ರವೇ ಗೊತ್ತು, ನನಗೆ ಇಷ್ಟು ಮಾತ್ರವೇ ಮುಖ್ಯ. ಇನ್ಯಾವುದು ನನ್ನದಲ್ಲ, ಇದು ಎರಡು ಬಿಟ್ಟರೆ ಬೇರೆ ಯಾವುದೂ ನನಗೆ ಗೊತ್ತಿಲ್ಲ. ಅವರು ನನಗೆ ಅಣ್ಣ-ಅತ್ತಿಗೆ ಅಷ್ಟೆ ನನಗೆ ಸಂಬಂಧ ಇದೆ ಇನ್ಯಾವುದೂ ಅಲ್ಲ” ಎಂದು ಮಾರ್ಮಿಕವಾಗಿ ನುಡಿದರು.

ರಾಘವೇಂದ್ರ ರಾಜ್​ಕುಮಾರ್ ಅವರು ಕುಟುಂಬದ ಬಗ್ಗೆ ಅತೀವ ಪ್ರೇಮವುಳ್ಳ ವ್ಯಕ್ತಿ ಹಾಗೆಯೇ ಎಲ್ಲರ ಅಭಿಪ್ರಾಯವನ್ನು, ಸ್ವಾತಂತ್ರ್ಯವನ್ನು ಗೌರವಿಸುವ ವ್ಯಕ್ತಿ. ಸಹಜವಾಗಿಯೇ ಈ ಪ್ರಕರಣದಲ್ಲಿ, ಗೀತಾ ಹಾಗೂ ಶಿವರಾಜ್ ಕುಮಾರ್ ಅವರ ವೈಯಕ್ತಿಕ ಆಯ್ಕೆಯನ್ನು ಗೌರವಿಸಿ, ಅವರು ನನಗೆ ಅಣ್ಣ-ಅತ್ತಿಗೆ ಅದರ ಹೊರತಾಗಿ ಅವರ ವೈಯಕ್ತಿಕ ನಿರ್ಧಾರಗಳನ್ನು ಪ್ರಶ್ನಿಸುವುದಾಗಲಿ, ಅದರ ಬಗ್ಗೆ ಅಭಿಪ್ರಾಯ ಪ್ರಕಟಿಸುವುದಾಗಲಿ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಈ ಹಿಂದೆ ಗೀತಾ ಶಿವರಾಜ್​ಕುಮಾರ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾಗ ಪುನೀತ್ ರಾಜ್​ಕುಮಾರ್ ಅವರು ಚುನಾವಣಾ ಪ್ರಚಾರಕ್ಕೆ ಹೋಗಿರಲಿಲ್ಲ ಎಂಬುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಇದನ್ನೂ ಓದಿ:ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ, ರಾಜ್​ಕುಮಾರ್ ಮೆಚ್ಚಿನ ರಾಜಕಾರಣಿಯ ನೆನೆದ ಚಿನ್ನೇಗೌಡ್ರು

ಗೀತಾ ಶಿವರಾಜ್​ಕುಮಾರ್ ಅವರಿಗೆ ರಾಜಕೀಯ ಹೊಸದೇನೂ ಅಲ್ಲ. ಮಾಜಿ ಸಿಎಂ ಎಸ್ ಬಂಗಾರಪ್ಪನವರ ಪುತ್ರಿಯಾದ ಗೀತಾ ಅವರು ಎಳವೆಯಿಂದಲೇ ರಾಜಕೀಯ ಪರಿಸರದಲ್ಲಿಯೇ ಬೆಳೆದವರು. ಈ ಮುಂಚೆ ಜೆಡಿಎಸ್ ಪಕ್ಷದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರಾದರೂ ಸೋಲನುಭವಿಸಿದ್ದರು. ಆ ಬಳಿಕ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದರು. ಇದೀಗ ಬದಲಾದ ಸನ್ನಿವೇಶದಲ್ಲಿ ಅವರ ಸಹೋದರ ಮಧು ಬಂಗಾರಪ್ಪ ಅವರು ಕಾಂಗ್ರೆಸ್​ಗೆ ಸೇರಿ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಇದೇ ಕಾರಣದಿಂದ ಗೀತಾ ಶಿವರಾಜ್ ಕುಮಾರ್ ಅವರೂ ಸಹ ಸಹೋದರನಿಗೆ ಬೆಂಬಲಿಸುವ ದೃಷ್ಟಿಯಿಂದ ಕಾಂಗ್ರೆಸ್​ ಸೇರ್ಪಡೆಗೊಂಡಿದ್ದಾರೆ.

ಮಧು ಬಂಗಾರಪ್ಪ ಅವರ ಪರವಾಗಿ ಚುನಾವಣೆ ಪ್ರಚಾರ ಕೈಗೊಳ್ಳುವುದಾಗಿ ಗೀತಾ ಶಿವರಾಜ್​ಕುಮಾರ್ ಘೋಷಣೆ ಮಾಡಿದ್ದು, ನನ್ನ ಸಹೋದರ ಈ ಬಾರಿ ಚುನಾವಣೆಯಲ್ಲ ಗೆದ್ದೇ ಗೆಲ್ಲುತ್ತಾನೆ ಎಂದಿದ್ದಾರೆ. ಮಾತ್ರವಲ್ಲದೆ, ನನ್ನ ತಾಯಿ ನನಗೆ ಹೇಳಿದ್ದರು, ಸದಾ ಮಧುಗೆ ಬೆಂಬಲವಾಗಿರು ಎಂದು ಅಂತೆಯೇ ನಾನು ಮಧುಗೆ ಬೆಂಬಲವಾಗಿದ್ದೇನೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ