AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆಯೊಳಗಿದ್ದ ಅಪ್ಪುವನ್ನು ಎದೆಯ ಮೇಲೆ ಹಚ್ಚೆಯಾಗಿ ಹಾಕಿಸಿಕೊಂಡ ರಾಘವೇಂದ್ರ ರಾಜ್​ಕುಮಾರ್

Raghavendra Rajkumar: ಪುನೀತ್ ರಾಜ್​ಕುಮಾರ್ ಅವರ ದೊಡ್ಡ ಅಭಿಮಾನಿಗಳಲ್ಲಿ ಒಬ್ಬರು ಸ್ವತಃ ಅವರ ಅಣ್ಣ ರಾಘವೇಂದ್ರ ರಾಜ್​ಕುಮಾರ್. ಇಷ್ಟು ದಿನ ಎದೆಯ ಒಳಗೆ ಇಟ್ಟುಕೊಂಡಿದ್ದ ಅಪ್ಪುವಿನ ಹೆಸರನ್ನು ಈಗ ಎದೆಯ ಮೇಲೆ ಹಚ್ಚೆಯಾಗಿ ಹಾಕಿಸಿಕೊಂಡಿದ್ದಾರೆ ರಾಘವೇಂದ್ರ ರಾಜ್​ಕುಮಾರ್.

ಎದೆಯೊಳಗಿದ್ದ ಅಪ್ಪುವನ್ನು ಎದೆಯ ಮೇಲೆ ಹಚ್ಚೆಯಾಗಿ ಹಾಕಿಸಿಕೊಂಡ ರಾಘವೇಂದ್ರ ರಾಜ್​ಕುಮಾರ್
ರಾಘವೇಂದ್ರ ರಾಜ್​ಕುಮಾರ್
ಮಂಜುನಾಥ ಸಿ.
| Edited By: |

Updated on:May 29, 2023 | 7:11 AM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅಗಲಿ ಒಂದು ವರ್ಷಕ್ಕೂ ಹೆಚ್ಚು ಸಮಯವಾಗಿದ್ದರೂ ಅವರ ಅಗಲಿಕೆಯನ್ನು ಇಂದಿಗೂ ಎಷ್ಟೋ ಜನರಿಗೆ ಅರಗಿಸಿಕೊಳ್ಳಲಾಗಿಲ್ಲ. ಪುನೀತ್ ಅಗಲಿಕೆ ಬಳಿಕ ರಾಜ್ಯದಾದ್ಯಂತ ಬೀದಿ ಬೀದಿಯಲ್ಲಿ ಅವರ ಕಟೌಟ್​ಗಳು ರಾರಾಜಿಸಿವೆ. ಪುತ್ಥಳಿಗಳ ಉದ್ಘಾಟನೆ ಆಗಿದೆ. ಕೆಲವರಂತೂ ದೇವಾಲಯವನ್ನೇ ಕಟ್ಟಿಬಿಟ್ಟಿದ್ದಾರೆ. ಪುನೀತ್ ಅವರ ನೆನಪನ್ನು ತ್ಯಜಿಸಿ ಬಾಳುವುದು ಅವರ ಕೋಟ್ಯಂತರ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಅಂಥಹವರಲ್ಲಿ ಪುನೀತ್ ರಾಜ್​ಕುಮಾರ್ ಅವರ ಅಣ್ಣ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಸಹ ಒಬ್ಬರು.

ಪುನೀತ್ ರಾಜ್​ಕುಮಾರ್ ಕಾಲವಾಗುವ ವೇಳೆಗೆ ಆರೋಗ್ಯ ಸಮಸ್ಯೆಯಿಂದ ದೈಹಿಕ ಸಾಮರ್ಥ್ಯಗಳನ್ನು ತುಸು ಮಟ್ಟಿಗೆ ಕಳೆದುಕೊಂಡಿದ್ದ ರಾಘವೇಂದ್ರ ರಾಜ್​ಕುಮಾರ್ ಮಾನಸಿಕ ಆರೋಗ್ಯವನ್ನು ಗಟ್ಟಿಯಾಗಿ ಕಾಪಾಡಿಕೊಂಡಿದ್ದರು. ಅಪ್ಪು ಬಗ್ಗೆ ಅಪಾರ ಪ್ರೀತಿ ಗೌರವ ಹೊಂದಿರುವ ರಾಘವೇಂದ್ರ ರಾಜ್​ಕುಮಾರ್, ಅಪ್ಪು ಅಗಲಿಕೆಯಿಂದ ಶೋಕಸಾಗರದಲ್ಲಿ ಮುಳುಗಿದ್ದ ಅವರ ಅಭಿಮಾನಿಗಳಿಗೆ, ಅವರ ಕುಟುಂಬದವರಿಗೆ ಆಪ್ತೇಷ್ಟರಿಗೆ ಸಾಂತ್ವಾನ ಹೇಳು ಕಾರ್ಯ ಮಾಡಿದರು. ಅದಾದ ನಂತರ ಅಪ್ಪು ಅಭಿಮಾನಿಗಳ ಗುಂಪಿನ ನಾಯಕನಂತೆ ಅಭಿಮಾನಿಗಳನ್ನು ಸರಿದಾರಿಯಲ್ಲಿ ನಡೆಸುವ ಯತ್ನವನ್ನು ಮಾಡುತ್ತಿದ್ದಾರೆ.

ದೊಡ್ಡ ಅಪ್ಪು ಅಭಿಮಾನಿ ಆಗಿರುವ ರಾಘವೇಂದ್ರ ರಾಜ್​ಕುಮಾರ್, ಪ್ರತಿದಿನವೂ ಅಪ್ಪುವಿನ ಭಾವಚಿತ್ರವನ್ನು ಶರ್ಟ್​ಗೆ ಸಿಕ್ಕಿಸಿಕೊಂಡು ಓಡಾಡುತ್ತಿದ್ದರು. ಯಾವುದೇ ಕಾರ್ಯಕ್ರಮಕ್ಕೆ ಹೋದರು ಎದೆಯ ಮೇಲೆ ಅಪ್ಪು ಚಿತ್ರವೊಂದು ಇದ್ದೇ ಇರುತ್ತಿತ್ತು. ಆದರೆ ಈಗ ರಾಘವೇಂದ್ರ ರಾಜ್​ಕುಮಾರ್ ಅವರು ತಮ್ಮ ಈ ವಯಸ್ಸಿನಲ್ಲಿ, ಆರೋಗ್ಯ ಸಮಸ್ಯೆಗಳ ನಡುವೆ ಸಹೋದರ ಪುನೀತ್ ರಾಜ್​ಕುಮಾರ್ ಹಾಗೂ ಅವರ ಮಕ್ಕಳ ಹೆಸರನ್ನು ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ.

ಇದನ್ನೂ ಓದಿ:ಸಂಕಷ್ಟದಿಂದ ಕಾಪಾಡಿದ ಪುನೀತ್ ರಾಜ್​ಕುಮಾರ್ ಪವರ್ ಬಗ್ಗೆ ತಮಿಳು ನಿರ್ದೇಶಕ, ನಟ ಸಮುದ್ರಖನಿ ಮಾತು

ಅಪ್ಪು, ಟೊಟೊ ಮತ್ತು ನುಕ್ಕಿ ಎಂದು ಮೂರು ಹೆಸರುಗಳನ್ನು ರಾಘವೇಂದ್ರ ರಾಜ್​ಕುಮಾರ್ ತಮ್ಮ ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ. ಹೆಸರುಗಳನ್ನು ಹಚ್ಚೆ ಹಾಕಿಸಿಕೊಂಡಿರುವ ರಾಘವೇಂದ್ರ ರಾಜ್​ಕುಮಾರ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ತಮಗೆ ಹಚ್ಚೆ ಹಾಕಿದ ಯುವ ಟ್ಯಾಟೂ ಆರ್ಟಿಸ್ಟ್ ಜೊತೆಗೂ ರಾಘವೇಂದ್ರ ರಾಜ್​ಕುಮಾರ್ ಫೊಟೊ ತೆಗೆಸಿಕೊಂಡಿದ್ದಾರೆ. ಈ ವಯಸ್ಸಿನಲ್ಲಿ, ಆರೋಗ್ಯ ಸಮಸ್ಯೆಗಳ ನಡುವೆ ಸಹೋದರ ಹಾಗೂ ಅವರ ಮಕ್ಕಳ ಹೆಸರನ್ನು ಹಚ್ಚೆ ಹಾಕಿಸಿಕೊಂಡ ರಾಘವೇಂದ್ರ ಅವರ ಪ್ರೀತಿಯನ್ನು ಅಪ್ಪು ಅಭಿಮಾನಿಗಳು ಕೊಂಡಾಡಿದ್ದಾರೆ. ಅಂದಹಾಗೆ, ಟೊಟೊ ಹಾಗೂ ನುಕ್ಕಿ ಎಂಬುದು ಅಪ್ಪು ಅವರ ಇಬ್ಬರು ಹೆಣ್ಣು ಮಕ್ಕಳ ನಿಕ್ ನೇಮ್.

ಪುನೀತ್ ರಾಜ್​ಕುಮಾರ್ ಕಾಲವಾದ ಬಳಿಕ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಅಭೂತಪೂರ್ವ ಬೆಂಬಲವನ್ನು ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಮಕ್ಕಳು ನೀಡುತ್ತಿದ್ದಾರೆ. ಅಪ್ಪು ಅವರ ಇಬ್ಬರು ಹೆಣ್ಣು ಮಕ್ಕಳ ಬಗ್ಗೆಯಂತೂ ರಾಘವೇಂದ್ರ ರಾಜ್​ಕುಮಾರ್ ಅವರಿಗೆ ಮೊದಲಿನಿಂದಲೂ ಬಹಳ ಮಮಕಾರ. ಅಪ್ಪು ಕಾಲವಾದ ಸಂದರ್ಭದಲ್ಲಿ ಅವರ ಮಕ್ಕಳನ್ನು ನೆನೆದು ರಾಘವೇಂದ್ರ ರಾಜ್​ಕುಮಾರ್ ಬಹಳ ದುಖಃ ವ್ಯಕ್ತಪಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 am, Mon, 29 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ